AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿನ್ನ ಸನಿಹಕೆ’ ಚಿತ್ರ ನೋಡಲಿರುವ ರಜನಿಕಾಂತ್​; ಧನ್ಯಾ ರಾಮ್​ಕುಮಾರ್​-ಸೂರಜ್​ಗೆ ತಲೈವಾ ಬೆಂಬಲ

ಅ.8ರಂದು ತೆರೆ ಕಾಣಲಿರುವ ‘ನಿನ್ನ ಸನಿಹಕೆ’ ಚಿತ್ರಕ್ಕೆ ಸೂರಜ್​ ಗೌಡ ನಿರ್ದೇಶನ ಮಾಡಿದ್ದು, ನಾಯಕನಾಗಿಯೂ ನಟಿಸಿದ್ದಾರೆ. ಅವರಿಗೆ ಧನ್ಯಾ ರಾಮ್​ಕುಮಾರ್​ ಜೋಡಿ ಆಗಿದ್ದಾರೆ. ಈಗಾಗಲೇ ಹಾಡುಗಳನ್ನು ನೋಡಿ ರಜನಿಕಾಂತ್​ ಇಷ್ಟಪಟ್ಟಿದ್ದಾರೆ.

‘ನಿನ್ನ ಸನಿಹಕೆ’ ಚಿತ್ರ ನೋಡಲಿರುವ ರಜನಿಕಾಂತ್​; ಧನ್ಯಾ ರಾಮ್​ಕುಮಾರ್​-ಸೂರಜ್​ಗೆ ತಲೈವಾ ಬೆಂಬಲ
ರಜನಿಕಾಂತ್, ಧನ್ಯಾ ರಾಮ್​ಕುಮಾರ್, ಸೂರಜ್​ ಗೌಡ
TV9 Web
| Edited By: |

Updated on: Oct 02, 2021 | 12:59 PM

Share

ಸೂಪರ್​ ಸ್ಟಾರ್​ ರಜನಿಕಾಂತ್ ಅವರಿಗೆ ಕನ್ನಡ ಚಿತ್ರರಂಗದ ಜೊತೆ ಒಳ್ಳೆಯ ನಂಟು ಇದೆ. ಡಾ. ರಾಜ್​ಕುಮಾರ್​ ಫ್ಯಾಮಿಲಿ ಜೊತೆ ಅವರು ಮೊದಲಿನಿಂದಲೂ ಒಡನಾಟ ಹೊಂದಿದ್ದಾರೆ. ಈಗ ಅಣ್ಣಾವ್ರ ಕುಟುಂಬದ ಮೊದಲ ಹೀರೋಯಿನ್​ ಧನ್ಯಾ ರಾಮ್​ಕುಮಾರ್​ ನಟಿಸಿರುವ ‘ನಿನ್ನ ಸನಿಹಕೆ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಅ.8ರಂದು ತೆರೆ ಕಾಣಲಿರುವ ಈ ಚಿತ್ರಕ್ಕೆ ಸೂರಜ್​ ಗೌಡ ನಿರ್ದೇಶನ ಮಾಡಿದ್ದು, ನಾಯಕನಾಗಿಯೂ ನಟಿಸಿದ್ದಾರೆ. ಈ ಸಿನಿಮಾ ನೋಡಲು ರಜನಿಕಾಂತ್​ ಆಸಕ್ತಿ ತೋರಿಸಿದ್ದಾರೆ ಎಂಬುದು ಖುಷಿಯ ವಿಚಾರ. ಇದು ಇಡೀ ಚಿತ್ರತಂಡಕ್ಕೆ ದೊಡ್ಡ ಬಲ ನೀಡಿದೆ.

‘ಧನ್ಯಾ ಫ್ಯಾಮಿಲಿ ಮತ್ತು ರಜನಿಕಾಂತ್​ ಫ್ಯಾಮಿಲಿ ನಡುವೆ ಸ್ನೇಹ ಇದೆ. ಧನ್ಯಾ ಅವರನ್ನು ಚಿಕ್ಕ ವಯಸ್ಸಿನಲ್ಲಿ ನೋಡಿದ್ದಾಗಲೇ ಅವರು ನಟಿ ಆಗುತ್ತಾರೆ ಅಂತ ರಜನಿಕಾಂತ್​ ಹೇಳಿದ್ದರಂತೆ. ಅದು ನಿಜವಾಗಿದೆ. ಈಗಾಗಲೇ ಅವರು ನಮ್ಮ ಸಿನಿಮಾದ ಹಾಡುಗಳನ್ನು ನೋಡಿದ್ದಾರೆ. ಅವರಿಗೆ ಇಷ್ಟ ಆಗಿದೆ. ಸಿನಿಮಾ ನೋಡಬೇಕು ಎಂಬ ಆಸೆ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಕರ್ನಾಟಕದಲ್ಲಿ ಚಿತ್ರ ರಿಲೀಸ್​ ಆದ ಬಳಿಕ ಚೆನ್ನೈನಲ್ಲಿ ರಜನಿಕಾಂತ್​ ಅವರಿಗೋಸ್ಕರ ನಾವು ಒಂದು ಪ್ರದರ್ಶನ ಏರ್ಪಡಿಸಬೇಕು’ ಎಂದು ನಿರ್ದೇಶಕ ಕಮ್​ ನಾಯಕ ನಟ ಸೂರಜ್​ ಗೌಡ ಹೇಳಿದ್ದಾರೆ.

ಇಂಥ ಅವಕಾಶ ಎಲ್ಲರಿಗೂ ಸಿಗುವಂಥದ್ದಲ್ಲ. ಕಹಿ, ಸಿಲಿಕಾನ್​ ಸಿಟಿ, ಮದುವೆಯ ಮಮತೆಯ ಕರೆಯೋಲೆ ಸಿನಿಮಾಗಳಲ್ಲಿ ನಟಿಸಿದ ಸೂರಜ್​ ಗೌಡ ಅವರು ‘ನಿನ್ನ ಸನಿಹಕೆ’ ಮೂಲಕ ನಿರ್ದೇಶಕನಾಗಿಯೂ ಬಡ್ತಿ ಪಡೆದಿದ್ದಾರೆ. ತಾವು ಆ್ಯಕ್ಷನ್​-ಕಟ್​ ಹೇಳಿದ ಮೊದಲ ಚಿತ್ರವನ್ನೇ ರಜನಿಕಾಂತ್​ ಅವರಿಗೆ ತೋರಿಸುವ ಅವಕಾಶ ಅವರಿಗೆ ಒದಗಿಬರುತ್ತಿದೆ.

(‘ನಿನ್ನ ಸನಿಹಕೆ’ ಟ್ರೇಲರ್​)

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ಮೊದಲೇ ‘ನಿನ್ನ ಸನಿಹಕೆ’ ಬಿಡುಗಡೆ ಆಗಿರಬೇಕಿತ್ತು. ಆದರೆ ಕೊರೊನಾ ಲಾಕ್​ಡೌನ್​ ಕಾರಣದಿಂದ ರಿಲೀಸ್​ ದಿನಾಂಕ ಮುಂದೂಡಿಕೆ ಆಗುತ್ತಲೇ ಇತ್ತು. ಅಂತೂ ಈಗ ಅ.8ರಂದು ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. ಅಕ್ಷಯ್​ ರಾಜಶೇಖರ್​, ರಂಗನಾಥ್​ ಕೂಡ್ಲಿ ನಿರ್ಮಾಣ ಮಾಡಿದ್ದಾರೆ. ರಘು ದೀಕ್ಷಿತ್​ ಸಂಗೀತ ನಿರ್ದೇಶನ ಮಾಡಿದ್ದು, ಹಾಡುಗಳಿಗೆ ವಾಸುಕಿ ವೈಭವ್​ ಸಾಹಿತ್ಯ ಬರೆದಿದ್ದಾರೆ.

ಇದನ್ನೂ ಓದಿ:

‘ಎಲ್ಲರಿಗೂ ಇಂಥ ಆಸೆ ಇರುತ್ತೆ, ನಂಗೆ ಇರಲ್ವಾ?’ ವಜ್ರೇಶ್ವರಿ ಕಂಬೈನ್ಸ್​ ಬಗ್ಗೆ ಡಾ. ರಾಜ್​ ಮೊಮ್ಮಗಳ ಮನದ ಮಾತು

ಮಳೆ ಮಳೆ ಮಳೆಯೇ.. ಪ್ರೀತಿಯಾ ಮಳೆಯೇ.. ಸಾಂಗ್ ಆಯ್ತು ಸಿಕ್ಕಾಪಟ್ಟೆ Trend

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ