AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿನ್ನ ಸನಿಹಕೆ’ ಚಿತ್ರ ನೋಡಲಿರುವ ರಜನಿಕಾಂತ್​; ಧನ್ಯಾ ರಾಮ್​ಕುಮಾರ್​-ಸೂರಜ್​ಗೆ ತಲೈವಾ ಬೆಂಬಲ

ಅ.8ರಂದು ತೆರೆ ಕಾಣಲಿರುವ ‘ನಿನ್ನ ಸನಿಹಕೆ’ ಚಿತ್ರಕ್ಕೆ ಸೂರಜ್​ ಗೌಡ ನಿರ್ದೇಶನ ಮಾಡಿದ್ದು, ನಾಯಕನಾಗಿಯೂ ನಟಿಸಿದ್ದಾರೆ. ಅವರಿಗೆ ಧನ್ಯಾ ರಾಮ್​ಕುಮಾರ್​ ಜೋಡಿ ಆಗಿದ್ದಾರೆ. ಈಗಾಗಲೇ ಹಾಡುಗಳನ್ನು ನೋಡಿ ರಜನಿಕಾಂತ್​ ಇಷ್ಟಪಟ್ಟಿದ್ದಾರೆ.

‘ನಿನ್ನ ಸನಿಹಕೆ’ ಚಿತ್ರ ನೋಡಲಿರುವ ರಜನಿಕಾಂತ್​; ಧನ್ಯಾ ರಾಮ್​ಕುಮಾರ್​-ಸೂರಜ್​ಗೆ ತಲೈವಾ ಬೆಂಬಲ
ರಜನಿಕಾಂತ್, ಧನ್ಯಾ ರಾಮ್​ಕುಮಾರ್, ಸೂರಜ್​ ಗೌಡ
TV9 Web
| Updated By: ಮದನ್​ ಕುಮಾರ್​|

Updated on: Oct 02, 2021 | 12:59 PM

Share

ಸೂಪರ್​ ಸ್ಟಾರ್​ ರಜನಿಕಾಂತ್ ಅವರಿಗೆ ಕನ್ನಡ ಚಿತ್ರರಂಗದ ಜೊತೆ ಒಳ್ಳೆಯ ನಂಟು ಇದೆ. ಡಾ. ರಾಜ್​ಕುಮಾರ್​ ಫ್ಯಾಮಿಲಿ ಜೊತೆ ಅವರು ಮೊದಲಿನಿಂದಲೂ ಒಡನಾಟ ಹೊಂದಿದ್ದಾರೆ. ಈಗ ಅಣ್ಣಾವ್ರ ಕುಟುಂಬದ ಮೊದಲ ಹೀರೋಯಿನ್​ ಧನ್ಯಾ ರಾಮ್​ಕುಮಾರ್​ ನಟಿಸಿರುವ ‘ನಿನ್ನ ಸನಿಹಕೆ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಅ.8ರಂದು ತೆರೆ ಕಾಣಲಿರುವ ಈ ಚಿತ್ರಕ್ಕೆ ಸೂರಜ್​ ಗೌಡ ನಿರ್ದೇಶನ ಮಾಡಿದ್ದು, ನಾಯಕನಾಗಿಯೂ ನಟಿಸಿದ್ದಾರೆ. ಈ ಸಿನಿಮಾ ನೋಡಲು ರಜನಿಕಾಂತ್​ ಆಸಕ್ತಿ ತೋರಿಸಿದ್ದಾರೆ ಎಂಬುದು ಖುಷಿಯ ವಿಚಾರ. ಇದು ಇಡೀ ಚಿತ್ರತಂಡಕ್ಕೆ ದೊಡ್ಡ ಬಲ ನೀಡಿದೆ.

‘ಧನ್ಯಾ ಫ್ಯಾಮಿಲಿ ಮತ್ತು ರಜನಿಕಾಂತ್​ ಫ್ಯಾಮಿಲಿ ನಡುವೆ ಸ್ನೇಹ ಇದೆ. ಧನ್ಯಾ ಅವರನ್ನು ಚಿಕ್ಕ ವಯಸ್ಸಿನಲ್ಲಿ ನೋಡಿದ್ದಾಗಲೇ ಅವರು ನಟಿ ಆಗುತ್ತಾರೆ ಅಂತ ರಜನಿಕಾಂತ್​ ಹೇಳಿದ್ದರಂತೆ. ಅದು ನಿಜವಾಗಿದೆ. ಈಗಾಗಲೇ ಅವರು ನಮ್ಮ ಸಿನಿಮಾದ ಹಾಡುಗಳನ್ನು ನೋಡಿದ್ದಾರೆ. ಅವರಿಗೆ ಇಷ್ಟ ಆಗಿದೆ. ಸಿನಿಮಾ ನೋಡಬೇಕು ಎಂಬ ಆಸೆ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಕರ್ನಾಟಕದಲ್ಲಿ ಚಿತ್ರ ರಿಲೀಸ್​ ಆದ ಬಳಿಕ ಚೆನ್ನೈನಲ್ಲಿ ರಜನಿಕಾಂತ್​ ಅವರಿಗೋಸ್ಕರ ನಾವು ಒಂದು ಪ್ರದರ್ಶನ ಏರ್ಪಡಿಸಬೇಕು’ ಎಂದು ನಿರ್ದೇಶಕ ಕಮ್​ ನಾಯಕ ನಟ ಸೂರಜ್​ ಗೌಡ ಹೇಳಿದ್ದಾರೆ.

ಇಂಥ ಅವಕಾಶ ಎಲ್ಲರಿಗೂ ಸಿಗುವಂಥದ್ದಲ್ಲ. ಕಹಿ, ಸಿಲಿಕಾನ್​ ಸಿಟಿ, ಮದುವೆಯ ಮಮತೆಯ ಕರೆಯೋಲೆ ಸಿನಿಮಾಗಳಲ್ಲಿ ನಟಿಸಿದ ಸೂರಜ್​ ಗೌಡ ಅವರು ‘ನಿನ್ನ ಸನಿಹಕೆ’ ಮೂಲಕ ನಿರ್ದೇಶಕನಾಗಿಯೂ ಬಡ್ತಿ ಪಡೆದಿದ್ದಾರೆ. ತಾವು ಆ್ಯಕ್ಷನ್​-ಕಟ್​ ಹೇಳಿದ ಮೊದಲ ಚಿತ್ರವನ್ನೇ ರಜನಿಕಾಂತ್​ ಅವರಿಗೆ ತೋರಿಸುವ ಅವಕಾಶ ಅವರಿಗೆ ಒದಗಿಬರುತ್ತಿದೆ.

(‘ನಿನ್ನ ಸನಿಹಕೆ’ ಟ್ರೇಲರ್​)

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ಮೊದಲೇ ‘ನಿನ್ನ ಸನಿಹಕೆ’ ಬಿಡುಗಡೆ ಆಗಿರಬೇಕಿತ್ತು. ಆದರೆ ಕೊರೊನಾ ಲಾಕ್​ಡೌನ್​ ಕಾರಣದಿಂದ ರಿಲೀಸ್​ ದಿನಾಂಕ ಮುಂದೂಡಿಕೆ ಆಗುತ್ತಲೇ ಇತ್ತು. ಅಂತೂ ಈಗ ಅ.8ರಂದು ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. ಅಕ್ಷಯ್​ ರಾಜಶೇಖರ್​, ರಂಗನಾಥ್​ ಕೂಡ್ಲಿ ನಿರ್ಮಾಣ ಮಾಡಿದ್ದಾರೆ. ರಘು ದೀಕ್ಷಿತ್​ ಸಂಗೀತ ನಿರ್ದೇಶನ ಮಾಡಿದ್ದು, ಹಾಡುಗಳಿಗೆ ವಾಸುಕಿ ವೈಭವ್​ ಸಾಹಿತ್ಯ ಬರೆದಿದ್ದಾರೆ.

ಇದನ್ನೂ ಓದಿ:

‘ಎಲ್ಲರಿಗೂ ಇಂಥ ಆಸೆ ಇರುತ್ತೆ, ನಂಗೆ ಇರಲ್ವಾ?’ ವಜ್ರೇಶ್ವರಿ ಕಂಬೈನ್ಸ್​ ಬಗ್ಗೆ ಡಾ. ರಾಜ್​ ಮೊಮ್ಮಗಳ ಮನದ ಮಾತು

ಮಳೆ ಮಳೆ ಮಳೆಯೇ.. ಪ್ರೀತಿಯಾ ಮಳೆಯೇ.. ಸಾಂಗ್ ಆಯ್ತು ಸಿಕ್ಕಾಪಟ್ಟೆ Trend

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ