AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿನ್ನ ಸನಿಹಕೆ’ ಚಿತ್ರ ನೋಡಲಿರುವ ರಜನಿಕಾಂತ್​; ಧನ್ಯಾ ರಾಮ್​ಕುಮಾರ್​-ಸೂರಜ್​ಗೆ ತಲೈವಾ ಬೆಂಬಲ

ಅ.8ರಂದು ತೆರೆ ಕಾಣಲಿರುವ ‘ನಿನ್ನ ಸನಿಹಕೆ’ ಚಿತ್ರಕ್ಕೆ ಸೂರಜ್​ ಗೌಡ ನಿರ್ದೇಶನ ಮಾಡಿದ್ದು, ನಾಯಕನಾಗಿಯೂ ನಟಿಸಿದ್ದಾರೆ. ಅವರಿಗೆ ಧನ್ಯಾ ರಾಮ್​ಕುಮಾರ್​ ಜೋಡಿ ಆಗಿದ್ದಾರೆ. ಈಗಾಗಲೇ ಹಾಡುಗಳನ್ನು ನೋಡಿ ರಜನಿಕಾಂತ್​ ಇಷ್ಟಪಟ್ಟಿದ್ದಾರೆ.

‘ನಿನ್ನ ಸನಿಹಕೆ’ ಚಿತ್ರ ನೋಡಲಿರುವ ರಜನಿಕಾಂತ್​; ಧನ್ಯಾ ರಾಮ್​ಕುಮಾರ್​-ಸೂರಜ್​ಗೆ ತಲೈವಾ ಬೆಂಬಲ
ರಜನಿಕಾಂತ್, ಧನ್ಯಾ ರಾಮ್​ಕುಮಾರ್, ಸೂರಜ್​ ಗೌಡ
Follow us
TV9 Web
| Updated By: ಮದನ್​ ಕುಮಾರ್​

Updated on: Oct 02, 2021 | 12:59 PM

ಸೂಪರ್​ ಸ್ಟಾರ್​ ರಜನಿಕಾಂತ್ ಅವರಿಗೆ ಕನ್ನಡ ಚಿತ್ರರಂಗದ ಜೊತೆ ಒಳ್ಳೆಯ ನಂಟು ಇದೆ. ಡಾ. ರಾಜ್​ಕುಮಾರ್​ ಫ್ಯಾಮಿಲಿ ಜೊತೆ ಅವರು ಮೊದಲಿನಿಂದಲೂ ಒಡನಾಟ ಹೊಂದಿದ್ದಾರೆ. ಈಗ ಅಣ್ಣಾವ್ರ ಕುಟುಂಬದ ಮೊದಲ ಹೀರೋಯಿನ್​ ಧನ್ಯಾ ರಾಮ್​ಕುಮಾರ್​ ನಟಿಸಿರುವ ‘ನಿನ್ನ ಸನಿಹಕೆ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಅ.8ರಂದು ತೆರೆ ಕಾಣಲಿರುವ ಈ ಚಿತ್ರಕ್ಕೆ ಸೂರಜ್​ ಗೌಡ ನಿರ್ದೇಶನ ಮಾಡಿದ್ದು, ನಾಯಕನಾಗಿಯೂ ನಟಿಸಿದ್ದಾರೆ. ಈ ಸಿನಿಮಾ ನೋಡಲು ರಜನಿಕಾಂತ್​ ಆಸಕ್ತಿ ತೋರಿಸಿದ್ದಾರೆ ಎಂಬುದು ಖುಷಿಯ ವಿಚಾರ. ಇದು ಇಡೀ ಚಿತ್ರತಂಡಕ್ಕೆ ದೊಡ್ಡ ಬಲ ನೀಡಿದೆ.

‘ಧನ್ಯಾ ಫ್ಯಾಮಿಲಿ ಮತ್ತು ರಜನಿಕಾಂತ್​ ಫ್ಯಾಮಿಲಿ ನಡುವೆ ಸ್ನೇಹ ಇದೆ. ಧನ್ಯಾ ಅವರನ್ನು ಚಿಕ್ಕ ವಯಸ್ಸಿನಲ್ಲಿ ನೋಡಿದ್ದಾಗಲೇ ಅವರು ನಟಿ ಆಗುತ್ತಾರೆ ಅಂತ ರಜನಿಕಾಂತ್​ ಹೇಳಿದ್ದರಂತೆ. ಅದು ನಿಜವಾಗಿದೆ. ಈಗಾಗಲೇ ಅವರು ನಮ್ಮ ಸಿನಿಮಾದ ಹಾಡುಗಳನ್ನು ನೋಡಿದ್ದಾರೆ. ಅವರಿಗೆ ಇಷ್ಟ ಆಗಿದೆ. ಸಿನಿಮಾ ನೋಡಬೇಕು ಎಂಬ ಆಸೆ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಕರ್ನಾಟಕದಲ್ಲಿ ಚಿತ್ರ ರಿಲೀಸ್​ ಆದ ಬಳಿಕ ಚೆನ್ನೈನಲ್ಲಿ ರಜನಿಕಾಂತ್​ ಅವರಿಗೋಸ್ಕರ ನಾವು ಒಂದು ಪ್ರದರ್ಶನ ಏರ್ಪಡಿಸಬೇಕು’ ಎಂದು ನಿರ್ದೇಶಕ ಕಮ್​ ನಾಯಕ ನಟ ಸೂರಜ್​ ಗೌಡ ಹೇಳಿದ್ದಾರೆ.

ಇಂಥ ಅವಕಾಶ ಎಲ್ಲರಿಗೂ ಸಿಗುವಂಥದ್ದಲ್ಲ. ಕಹಿ, ಸಿಲಿಕಾನ್​ ಸಿಟಿ, ಮದುವೆಯ ಮಮತೆಯ ಕರೆಯೋಲೆ ಸಿನಿಮಾಗಳಲ್ಲಿ ನಟಿಸಿದ ಸೂರಜ್​ ಗೌಡ ಅವರು ‘ನಿನ್ನ ಸನಿಹಕೆ’ ಮೂಲಕ ನಿರ್ದೇಶಕನಾಗಿಯೂ ಬಡ್ತಿ ಪಡೆದಿದ್ದಾರೆ. ತಾವು ಆ್ಯಕ್ಷನ್​-ಕಟ್​ ಹೇಳಿದ ಮೊದಲ ಚಿತ್ರವನ್ನೇ ರಜನಿಕಾಂತ್​ ಅವರಿಗೆ ತೋರಿಸುವ ಅವಕಾಶ ಅವರಿಗೆ ಒದಗಿಬರುತ್ತಿದೆ.

(‘ನಿನ್ನ ಸನಿಹಕೆ’ ಟ್ರೇಲರ್​)

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ಮೊದಲೇ ‘ನಿನ್ನ ಸನಿಹಕೆ’ ಬಿಡುಗಡೆ ಆಗಿರಬೇಕಿತ್ತು. ಆದರೆ ಕೊರೊನಾ ಲಾಕ್​ಡೌನ್​ ಕಾರಣದಿಂದ ರಿಲೀಸ್​ ದಿನಾಂಕ ಮುಂದೂಡಿಕೆ ಆಗುತ್ತಲೇ ಇತ್ತು. ಅಂತೂ ಈಗ ಅ.8ರಂದು ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. ಅಕ್ಷಯ್​ ರಾಜಶೇಖರ್​, ರಂಗನಾಥ್​ ಕೂಡ್ಲಿ ನಿರ್ಮಾಣ ಮಾಡಿದ್ದಾರೆ. ರಘು ದೀಕ್ಷಿತ್​ ಸಂಗೀತ ನಿರ್ದೇಶನ ಮಾಡಿದ್ದು, ಹಾಡುಗಳಿಗೆ ವಾಸುಕಿ ವೈಭವ್​ ಸಾಹಿತ್ಯ ಬರೆದಿದ್ದಾರೆ.

ಇದನ್ನೂ ಓದಿ:

‘ಎಲ್ಲರಿಗೂ ಇಂಥ ಆಸೆ ಇರುತ್ತೆ, ನಂಗೆ ಇರಲ್ವಾ?’ ವಜ್ರೇಶ್ವರಿ ಕಂಬೈನ್ಸ್​ ಬಗ್ಗೆ ಡಾ. ರಾಜ್​ ಮೊಮ್ಮಗಳ ಮನದ ಮಾತು

ಮಳೆ ಮಳೆ ಮಳೆಯೇ.. ಪ್ರೀತಿಯಾ ಮಳೆಯೇ.. ಸಾಂಗ್ ಆಯ್ತು ಸಿಕ್ಕಾಪಟ್ಟೆ Trend

ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ