AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿನ್ನ ಸನಿಹಕೆ’ ಚಿತ್ರ ನೋಡಲಿರುವ ರಜನಿಕಾಂತ್​; ಧನ್ಯಾ ರಾಮ್​ಕುಮಾರ್​-ಸೂರಜ್​ಗೆ ತಲೈವಾ ಬೆಂಬಲ

ಅ.8ರಂದು ತೆರೆ ಕಾಣಲಿರುವ ‘ನಿನ್ನ ಸನಿಹಕೆ’ ಚಿತ್ರಕ್ಕೆ ಸೂರಜ್​ ಗೌಡ ನಿರ್ದೇಶನ ಮಾಡಿದ್ದು, ನಾಯಕನಾಗಿಯೂ ನಟಿಸಿದ್ದಾರೆ. ಅವರಿಗೆ ಧನ್ಯಾ ರಾಮ್​ಕುಮಾರ್​ ಜೋಡಿ ಆಗಿದ್ದಾರೆ. ಈಗಾಗಲೇ ಹಾಡುಗಳನ್ನು ನೋಡಿ ರಜನಿಕಾಂತ್​ ಇಷ್ಟಪಟ್ಟಿದ್ದಾರೆ.

‘ನಿನ್ನ ಸನಿಹಕೆ’ ಚಿತ್ರ ನೋಡಲಿರುವ ರಜನಿಕಾಂತ್​; ಧನ್ಯಾ ರಾಮ್​ಕುಮಾರ್​-ಸೂರಜ್​ಗೆ ತಲೈವಾ ಬೆಂಬಲ
ರಜನಿಕಾಂತ್, ಧನ್ಯಾ ರಾಮ್​ಕುಮಾರ್, ಸೂರಜ್​ ಗೌಡ
TV9 Web
| Edited By: |

Updated on: Oct 02, 2021 | 12:59 PM

Share

ಸೂಪರ್​ ಸ್ಟಾರ್​ ರಜನಿಕಾಂತ್ ಅವರಿಗೆ ಕನ್ನಡ ಚಿತ್ರರಂಗದ ಜೊತೆ ಒಳ್ಳೆಯ ನಂಟು ಇದೆ. ಡಾ. ರಾಜ್​ಕುಮಾರ್​ ಫ್ಯಾಮಿಲಿ ಜೊತೆ ಅವರು ಮೊದಲಿನಿಂದಲೂ ಒಡನಾಟ ಹೊಂದಿದ್ದಾರೆ. ಈಗ ಅಣ್ಣಾವ್ರ ಕುಟುಂಬದ ಮೊದಲ ಹೀರೋಯಿನ್​ ಧನ್ಯಾ ರಾಮ್​ಕುಮಾರ್​ ನಟಿಸಿರುವ ‘ನಿನ್ನ ಸನಿಹಕೆ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಅ.8ರಂದು ತೆರೆ ಕಾಣಲಿರುವ ಈ ಚಿತ್ರಕ್ಕೆ ಸೂರಜ್​ ಗೌಡ ನಿರ್ದೇಶನ ಮಾಡಿದ್ದು, ನಾಯಕನಾಗಿಯೂ ನಟಿಸಿದ್ದಾರೆ. ಈ ಸಿನಿಮಾ ನೋಡಲು ರಜನಿಕಾಂತ್​ ಆಸಕ್ತಿ ತೋರಿಸಿದ್ದಾರೆ ಎಂಬುದು ಖುಷಿಯ ವಿಚಾರ. ಇದು ಇಡೀ ಚಿತ್ರತಂಡಕ್ಕೆ ದೊಡ್ಡ ಬಲ ನೀಡಿದೆ.

‘ಧನ್ಯಾ ಫ್ಯಾಮಿಲಿ ಮತ್ತು ರಜನಿಕಾಂತ್​ ಫ್ಯಾಮಿಲಿ ನಡುವೆ ಸ್ನೇಹ ಇದೆ. ಧನ್ಯಾ ಅವರನ್ನು ಚಿಕ್ಕ ವಯಸ್ಸಿನಲ್ಲಿ ನೋಡಿದ್ದಾಗಲೇ ಅವರು ನಟಿ ಆಗುತ್ತಾರೆ ಅಂತ ರಜನಿಕಾಂತ್​ ಹೇಳಿದ್ದರಂತೆ. ಅದು ನಿಜವಾಗಿದೆ. ಈಗಾಗಲೇ ಅವರು ನಮ್ಮ ಸಿನಿಮಾದ ಹಾಡುಗಳನ್ನು ನೋಡಿದ್ದಾರೆ. ಅವರಿಗೆ ಇಷ್ಟ ಆಗಿದೆ. ಸಿನಿಮಾ ನೋಡಬೇಕು ಎಂಬ ಆಸೆ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಕರ್ನಾಟಕದಲ್ಲಿ ಚಿತ್ರ ರಿಲೀಸ್​ ಆದ ಬಳಿಕ ಚೆನ್ನೈನಲ್ಲಿ ರಜನಿಕಾಂತ್​ ಅವರಿಗೋಸ್ಕರ ನಾವು ಒಂದು ಪ್ರದರ್ಶನ ಏರ್ಪಡಿಸಬೇಕು’ ಎಂದು ನಿರ್ದೇಶಕ ಕಮ್​ ನಾಯಕ ನಟ ಸೂರಜ್​ ಗೌಡ ಹೇಳಿದ್ದಾರೆ.

ಇಂಥ ಅವಕಾಶ ಎಲ್ಲರಿಗೂ ಸಿಗುವಂಥದ್ದಲ್ಲ. ಕಹಿ, ಸಿಲಿಕಾನ್​ ಸಿಟಿ, ಮದುವೆಯ ಮಮತೆಯ ಕರೆಯೋಲೆ ಸಿನಿಮಾಗಳಲ್ಲಿ ನಟಿಸಿದ ಸೂರಜ್​ ಗೌಡ ಅವರು ‘ನಿನ್ನ ಸನಿಹಕೆ’ ಮೂಲಕ ನಿರ್ದೇಶಕನಾಗಿಯೂ ಬಡ್ತಿ ಪಡೆದಿದ್ದಾರೆ. ತಾವು ಆ್ಯಕ್ಷನ್​-ಕಟ್​ ಹೇಳಿದ ಮೊದಲ ಚಿತ್ರವನ್ನೇ ರಜನಿಕಾಂತ್​ ಅವರಿಗೆ ತೋರಿಸುವ ಅವಕಾಶ ಅವರಿಗೆ ಒದಗಿಬರುತ್ತಿದೆ.

(‘ನಿನ್ನ ಸನಿಹಕೆ’ ಟ್ರೇಲರ್​)

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ಮೊದಲೇ ‘ನಿನ್ನ ಸನಿಹಕೆ’ ಬಿಡುಗಡೆ ಆಗಿರಬೇಕಿತ್ತು. ಆದರೆ ಕೊರೊನಾ ಲಾಕ್​ಡೌನ್​ ಕಾರಣದಿಂದ ರಿಲೀಸ್​ ದಿನಾಂಕ ಮುಂದೂಡಿಕೆ ಆಗುತ್ತಲೇ ಇತ್ತು. ಅಂತೂ ಈಗ ಅ.8ರಂದು ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. ಅಕ್ಷಯ್​ ರಾಜಶೇಖರ್​, ರಂಗನಾಥ್​ ಕೂಡ್ಲಿ ನಿರ್ಮಾಣ ಮಾಡಿದ್ದಾರೆ. ರಘು ದೀಕ್ಷಿತ್​ ಸಂಗೀತ ನಿರ್ದೇಶನ ಮಾಡಿದ್ದು, ಹಾಡುಗಳಿಗೆ ವಾಸುಕಿ ವೈಭವ್​ ಸಾಹಿತ್ಯ ಬರೆದಿದ್ದಾರೆ.

ಇದನ್ನೂ ಓದಿ:

‘ಎಲ್ಲರಿಗೂ ಇಂಥ ಆಸೆ ಇರುತ್ತೆ, ನಂಗೆ ಇರಲ್ವಾ?’ ವಜ್ರೇಶ್ವರಿ ಕಂಬೈನ್ಸ್​ ಬಗ್ಗೆ ಡಾ. ರಾಜ್​ ಮೊಮ್ಮಗಳ ಮನದ ಮಾತು

ಮಳೆ ಮಳೆ ಮಳೆಯೇ.. ಪ್ರೀತಿಯಾ ಮಳೆಯೇ.. ಸಾಂಗ್ ಆಯ್ತು ಸಿಕ್ಕಾಪಟ್ಟೆ Trend

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?