AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡುಗಡೆ ಆಗುತ್ತಿದೆ ಮರ್ಡರ್ ಮಿಸ್ಟರಿ ಜಾನರ್​ನ ‘ಸಪ್ಲೇಯರ್ ಶಂಕರ’ ಚಿತ್ರ

Supplier Shankara: ಟ್ರೈಲರ್, ಪೋಸ್ಟರ್​ಗಳಿಂದ ಈಗಾಗಲೇ ಬಹುವಾಗಿ ಗಮನ ಸೆಳೆದಿರುವ ‘ಸಪ್ಲೈಯರ್ ಶಂಕರ’ ಸಿನಿಮಾ ಬಿಡುಗಡೆ ಆಗುತ್ತಿದೆ.

ಬಿಡುಗಡೆ ಆಗುತ್ತಿದೆ ಮರ್ಡರ್ ಮಿಸ್ಟರಿ ಜಾನರ್​ನ ‘ಸಪ್ಲೇಯರ್ ಶಂಕರ’ ಚಿತ್ರ
ಮಂಜುನಾಥ ಸಿ.
|

Updated on: Feb 01, 2024 | 10:46 PM

Share

“ಗಂಟು ಮೂಟೆ” ಮತ್ತು “ಟಾಮ್ & ಜೆರ್ರಿ” ಸಿನಿಮಾಗಳ ಮೂಲಕ ಜನಪ್ರಿರಾಗಿರುವ ನಿಶ್ಚಿತ್ ಕರೋಡಿ ಈಗ ಹೊಸ ಸಿನಿಮಾದ ಮೂಲಕ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ತ್ರಿನೇತ್ರ ಫಿಲಂಸ್ ಲಾಂಛನದಲ್ಲಿ ಮೂಡಿಬರುತ್ತಿರುವ ‘ಸಪ್ಲೈಯರ್ ಶಂಕರ’ (supplier shankara) ಸಿನಿಮಾದಲ್ಲಿ ಸಪ್ಲೈಯರ್ ಆಗಿ ನಿಶ್ಚಿತ್ ನಟಿಸಿದ್ದಾರೆ. ಆಕ್ಷನ್ ಥ್ರಿಲ್ಲರ್​ಗೆ ಜಾನರ್​ಗೆ ಸೇರಿದ ಈ ಸಿನಿಮಾ ಫೆಬ್ರವರಿ 2ರಂದು ಬಿಡುಗಡೆ ಆಗುತ್ತಿದೆ.

ಎಂ ಚಂದ್ರಶೇಖರ್ ಹಾಗೂ ಎಂ.ನಾಗೇಂದ್ರ ಸಿಂಗ್ ನಿರ್ಮಾಣ ಮಾಡಿರುವ ಈ ಸಿನಿಮಾವನ್ನು ಯುವ ನಿರ್ದೇಶಕ ರಂಜಿತ್ ನಿರ್ದೇಶನ ಮಾಡಿದ್ದಾರೆ. ‘ಸಪ್ಲೈಯರ್ ಶಂಕರ’ ಸಿನಿಮಾದ ಟ್ರೈಲರ್, ಹಾಡು, ಪೋಸ್ಟರ್​ಗಳು ಈಗಾಗಲೇ ಬಿಡುಗಡೆ ಆಗಿದ್ದು ಬಹುವಾಗಿ ಗಮನ ಸೆಳೆದಿವೆ. ಸಿನಿಮಾದಲ್ಲಿನ ಕಚ್ಚಾತನವನ್ನು ಟ್ರೈಲರ್​ನಲ್ಲಿ ತೋರಿಸಲಾಗಿದ್ದು, ಟ್ರೈಲರ್ ನೋಡಿದ ಹಲವರು ತಮಿಳಿನ ‘ವಿಸಾರನೈ’, ‘ವಡಾ ಚೆನ್ನೈ’ ಮಾದರಿಯ ಸಿನಿಮಾಗಳಿಗೆ ಹೋಲಿಸಿದ್ದರು.

ಇದನ್ನೂ ಓದಿ: ಗಂಟು ಮೂಟೆ ನಾಯಕನ ಹೊಸ ಸಿನಿಮಾ ಸಪ್ಲೇಯರ್ ಶಂಕರ ಹಾಡು ಬಿಡುಗಡೆ

ಬಾರ್ ಸಪ್ಲೇಯರ್ ಒಬ್ಬನ ಜೀವನ ವಿವಿಧ ಮಜಲುಗಳನ್ನು ತೆರೆದಿಡುವ ಪ್ರಯತ್ನವನ್ನು ನಿರ್ದೇಶಕರು ಈ ಚಿತ್ರದಲ್ಲಿ ಮಾಡಿದ್ದಾರೆ. ಬಾರ್ ಸಪ್ಲೈಯರ್ ಆಗಿ ಬಿಡಿಗಾಸು ದುಡಿಯುತ್ತಿರುವ ವ್ಯಕ್ತಿ ಕೊಲೆ ಪ್ರಕರಣದಲ್ಲಿ ಸಿಲುಕಿಕೊಂಡ ಬಳಿಕ ಆಗುವ ಘಟನೆಗಳು, ಆ ಸುಳಿಯಿಂದ ಸಪ್ಲೈಯರ್ ಶಂಕರ ಹೇಗೆ ಹೊರಬರುತ್ತಾನೆ, ಈ ಹಾದಿಯಲ್ಲಿ ಆತ ಎದುರಿಸುವ ಅವಮಾನ, ಹಿಂಸೆಯನ್ನು ಕತೆ ಒಳಗೊಂಡಿದೆ. ಭಾವನಾತ್ಮಕ ಅಂಶಗಳ ಜೊತೆಗೆ ಇದೊಂದು ಮರ್ಡರ್ ಮಿಸ್ಟರಿ ಜಾನರ್ ನ ಚಿತ್ರವಾಗಿದರೂ, ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು ಈ ಚಿತ್ರದಲ್ಲಿದೆ. ಸಿನಿಮಾದ ಬಹುತೇಕ ಭಾಗದ ಚಿತ್ರೀಕರಣ ಬೆಂಗಳೂರಿನಲ್ಲೇ ಆಗಿದೆ.

‘ಸಪ್ಲೇಯರ್ ಶಂಕರ’ನ ಪಾತ್ರದಲ್ಲಿ ‘ಗಂಟು ಮೂಟೆ’ ಮತ್ತು ‘ಟಾಮ್ & ಜೆರ್ರಿ’ಸಿನಿಮಾಗಳ ಮೂಲಕ ಜನಪ್ರಿರಾಗಿರುವ ನಿಶ್ಚಿತ್ ಕರೋಡಿ ನಟಿಸಿದ್ದಾರೆ. ದೀಪಿಕಾ ಆರಾಧ್ಯ ಈ ಚಿತ್ರದ ನಾಯಕಿ. ಗೋಪಾಲಕೃಷ್ಣ ದೇಶಪಾಂಡೆ, ನವೀನ್ ಪಡೀಲ್, ಜ್ಯೋತಿ ರೈ ಮುಂತಾದವರು ತಾರಾಬಳಗದಲ್ಲಿದ್ದಾರೆ. ನಿರ್ದೇಶಕ ರಂಜಿತ್ ಅವರೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಸತೀಶ್ ಕುಮಾರ್ ಛಾಯಾಗ್ರಹಣ , ಸತೀಶ್ ಚಂದ್ರಯ್ಯ ಅವರ ಸಂಕಲನ ಹಾಗೂ ಬಾಲಾಜಿ ಅವರ ಕಲಾ ನಿರ್ದೇಶನ “ಸಪ್ಲೇಯರ್ ಶಂಕರ” ಚಿತ್ರಕ್ಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ