AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡುಗಡೆ ಆಗುತ್ತಿದೆ ಮರ್ಡರ್ ಮಿಸ್ಟರಿ ಜಾನರ್​ನ ‘ಸಪ್ಲೇಯರ್ ಶಂಕರ’ ಚಿತ್ರ

Supplier Shankara: ಟ್ರೈಲರ್, ಪೋಸ್ಟರ್​ಗಳಿಂದ ಈಗಾಗಲೇ ಬಹುವಾಗಿ ಗಮನ ಸೆಳೆದಿರುವ ‘ಸಪ್ಲೈಯರ್ ಶಂಕರ’ ಸಿನಿಮಾ ಬಿಡುಗಡೆ ಆಗುತ್ತಿದೆ.

ಬಿಡುಗಡೆ ಆಗುತ್ತಿದೆ ಮರ್ಡರ್ ಮಿಸ್ಟರಿ ಜಾನರ್​ನ ‘ಸಪ್ಲೇಯರ್ ಶಂಕರ’ ಚಿತ್ರ
ಮಂಜುನಾಥ ಸಿ.
|

Updated on: Feb 01, 2024 | 10:46 PM

Share

“ಗಂಟು ಮೂಟೆ” ಮತ್ತು “ಟಾಮ್ & ಜೆರ್ರಿ” ಸಿನಿಮಾಗಳ ಮೂಲಕ ಜನಪ್ರಿರಾಗಿರುವ ನಿಶ್ಚಿತ್ ಕರೋಡಿ ಈಗ ಹೊಸ ಸಿನಿಮಾದ ಮೂಲಕ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ತ್ರಿನೇತ್ರ ಫಿಲಂಸ್ ಲಾಂಛನದಲ್ಲಿ ಮೂಡಿಬರುತ್ತಿರುವ ‘ಸಪ್ಲೈಯರ್ ಶಂಕರ’ (supplier shankara) ಸಿನಿಮಾದಲ್ಲಿ ಸಪ್ಲೈಯರ್ ಆಗಿ ನಿಶ್ಚಿತ್ ನಟಿಸಿದ್ದಾರೆ. ಆಕ್ಷನ್ ಥ್ರಿಲ್ಲರ್​ಗೆ ಜಾನರ್​ಗೆ ಸೇರಿದ ಈ ಸಿನಿಮಾ ಫೆಬ್ರವರಿ 2ರಂದು ಬಿಡುಗಡೆ ಆಗುತ್ತಿದೆ.

ಎಂ ಚಂದ್ರಶೇಖರ್ ಹಾಗೂ ಎಂ.ನಾಗೇಂದ್ರ ಸಿಂಗ್ ನಿರ್ಮಾಣ ಮಾಡಿರುವ ಈ ಸಿನಿಮಾವನ್ನು ಯುವ ನಿರ್ದೇಶಕ ರಂಜಿತ್ ನಿರ್ದೇಶನ ಮಾಡಿದ್ದಾರೆ. ‘ಸಪ್ಲೈಯರ್ ಶಂಕರ’ ಸಿನಿಮಾದ ಟ್ರೈಲರ್, ಹಾಡು, ಪೋಸ್ಟರ್​ಗಳು ಈಗಾಗಲೇ ಬಿಡುಗಡೆ ಆಗಿದ್ದು ಬಹುವಾಗಿ ಗಮನ ಸೆಳೆದಿವೆ. ಸಿನಿಮಾದಲ್ಲಿನ ಕಚ್ಚಾತನವನ್ನು ಟ್ರೈಲರ್​ನಲ್ಲಿ ತೋರಿಸಲಾಗಿದ್ದು, ಟ್ರೈಲರ್ ನೋಡಿದ ಹಲವರು ತಮಿಳಿನ ‘ವಿಸಾರನೈ’, ‘ವಡಾ ಚೆನ್ನೈ’ ಮಾದರಿಯ ಸಿನಿಮಾಗಳಿಗೆ ಹೋಲಿಸಿದ್ದರು.

ಇದನ್ನೂ ಓದಿ: ಗಂಟು ಮೂಟೆ ನಾಯಕನ ಹೊಸ ಸಿನಿಮಾ ಸಪ್ಲೇಯರ್ ಶಂಕರ ಹಾಡು ಬಿಡುಗಡೆ

ಬಾರ್ ಸಪ್ಲೇಯರ್ ಒಬ್ಬನ ಜೀವನ ವಿವಿಧ ಮಜಲುಗಳನ್ನು ತೆರೆದಿಡುವ ಪ್ರಯತ್ನವನ್ನು ನಿರ್ದೇಶಕರು ಈ ಚಿತ್ರದಲ್ಲಿ ಮಾಡಿದ್ದಾರೆ. ಬಾರ್ ಸಪ್ಲೈಯರ್ ಆಗಿ ಬಿಡಿಗಾಸು ದುಡಿಯುತ್ತಿರುವ ವ್ಯಕ್ತಿ ಕೊಲೆ ಪ್ರಕರಣದಲ್ಲಿ ಸಿಲುಕಿಕೊಂಡ ಬಳಿಕ ಆಗುವ ಘಟನೆಗಳು, ಆ ಸುಳಿಯಿಂದ ಸಪ್ಲೈಯರ್ ಶಂಕರ ಹೇಗೆ ಹೊರಬರುತ್ತಾನೆ, ಈ ಹಾದಿಯಲ್ಲಿ ಆತ ಎದುರಿಸುವ ಅವಮಾನ, ಹಿಂಸೆಯನ್ನು ಕತೆ ಒಳಗೊಂಡಿದೆ. ಭಾವನಾತ್ಮಕ ಅಂಶಗಳ ಜೊತೆಗೆ ಇದೊಂದು ಮರ್ಡರ್ ಮಿಸ್ಟರಿ ಜಾನರ್ ನ ಚಿತ್ರವಾಗಿದರೂ, ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು ಈ ಚಿತ್ರದಲ್ಲಿದೆ. ಸಿನಿಮಾದ ಬಹುತೇಕ ಭಾಗದ ಚಿತ್ರೀಕರಣ ಬೆಂಗಳೂರಿನಲ್ಲೇ ಆಗಿದೆ.

‘ಸಪ್ಲೇಯರ್ ಶಂಕರ’ನ ಪಾತ್ರದಲ್ಲಿ ‘ಗಂಟು ಮೂಟೆ’ ಮತ್ತು ‘ಟಾಮ್ & ಜೆರ್ರಿ’ಸಿನಿಮಾಗಳ ಮೂಲಕ ಜನಪ್ರಿರಾಗಿರುವ ನಿಶ್ಚಿತ್ ಕರೋಡಿ ನಟಿಸಿದ್ದಾರೆ. ದೀಪಿಕಾ ಆರಾಧ್ಯ ಈ ಚಿತ್ರದ ನಾಯಕಿ. ಗೋಪಾಲಕೃಷ್ಣ ದೇಶಪಾಂಡೆ, ನವೀನ್ ಪಡೀಲ್, ಜ್ಯೋತಿ ರೈ ಮುಂತಾದವರು ತಾರಾಬಳಗದಲ್ಲಿದ್ದಾರೆ. ನಿರ್ದೇಶಕ ರಂಜಿತ್ ಅವರೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಸತೀಶ್ ಕುಮಾರ್ ಛಾಯಾಗ್ರಹಣ , ಸತೀಶ್ ಚಂದ್ರಯ್ಯ ಅವರ ಸಂಕಲನ ಹಾಗೂ ಬಾಲಾಜಿ ಅವರ ಕಲಾ ನಿರ್ದೇಶನ “ಸಪ್ಲೇಯರ್ ಶಂಕರ” ಚಿತ್ರಕ್ಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ