AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ಗೆ​ ಜಾಮೀನು ಕೊಟ್ಟ ಹೈಕೋರ್ಟ್ ಬಗ್ಗೆ ನೇರವಾಗಿ ಅಸಮಾಧಾನ ಹೊರಹಾಕಿದ ಸುಪ್ರೀಂ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರಿಗೆ ಹೈಕೋರ್ಟ್ ನೀಡಿದ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ಟೀಕಿಸಿದೆ. ಹೈಕೋರ್ಟ್‌ನ ವಿವೇಚನೆಯ ಬಳಕೆ ಮತ್ತು ಪುರಾವೆಗಳನ್ನು ಪರಿಗಣಿಸುವಲ್ಲಿನ ವೈಫಲ್ಯವನ್ನು ಸುಪ್ರೀಂ ಎತ್ತಿ ಹಿಡಿದಿದೆ. ಸರ್ಕಾರದ ವಾದ ಆಲಿಸಿದ ನಂತರ, ಸುಪ್ರೀಂ ತನ್ನ ತೀರ್ಪನ್ನು ಕಾಯ್ದಿರಿಸಿದೆ.

ದರ್ಶನ್​ಗೆ​ ಜಾಮೀನು ಕೊಟ್ಟ ಹೈಕೋರ್ಟ್ ಬಗ್ಗೆ ನೇರವಾಗಿ ಅಸಮಾಧಾನ ಹೊರಹಾಕಿದ ಸುಪ್ರೀಂ
ದರ್ಶನ್
ರಾಜೇಶ್ ದುಗ್ಗುಮನೆ
|

Updated on: Jul 24, 2025 | 2:05 PM

Share

ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ದರ್ಶನ್ (Darshan) ಅವರು ಜಾಮೀನು ಪಡೆದು ಹೊರಗಿದ್ದಾರೆ. ದರ್ಶನ್ ಸೇರಿದಂತೆ ಎಲ್ಲಾ 17 ಆರೋಪಿಗಳಿಗೆ ಕೋರ್ಟ್ ಜಾಮೀನು ನೀಡಿದೆ. ಈ ಆದೇಶವನ್ನು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನೆ ಮಾಡಿದೆ. ‘ಜಾಮೀನು ನೀಡುವಲ್ಲಿ ಹೈಕೋರ್ಟ್ ನ್ಯಾಯಾಧೀಶರು ಈ ರೀತಿಯಾದ ಮಿಸ್ಟೇಕ್ ಮಾಡಬಹುದಾ’ ಎಂದು ಸುಪ್ರೀಂಕೋರ್ಟ್ ನೇರವಾಗಿ ಪ್ರಶ್ನೆ ಮಾಡಿದೆ.

ರೇಣುಕಾಸ್ವಾಮಿ ಕೊಲೆ ಕೇಸ್​​ನಲ್ಲಿ ದರ್ಶನ್, ಪವಿತ್ರಾ ಮೊದಲಾದವರಿಗೆ ಜಾಮೀನು ನೀಡಿದ್ದನ್ನು ರಾಜ್ಯ ಸರ್ಕಾರ ಪ್ರಶ್ನೆ ಮಾಡಿತ್ತು. ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ , ನ್ಯಾಯಮೂರ್ತಿ ಆರ್. ಮಹದೇವನ್ ಅವರಿದ್ದ ಪೀಠದಲ್ಲಿ ಈ ಅರ್ಜಿಯ ವಿಚಾರಣೆ ನಡೆದಿದೆ. ಈ ವೇಳೆ ನ್ಯಾಯಪೀಠ, ಹೈಕೋರ್ಟ್ ಆದೇಶದ ಬಗ್ಗೆ ಅಸಮಾಧಾನ ಹೊರಹಾಕಿದೆ.

‘ಕರ್ನಾಟಕ ಹೈಕೋರ್ಟ್ ಜಾಮೀನು ನೀಡಲು ಹೀಗೂ ಆದೇಶ ಕೊಡಬಹುದೇ? ಎಲ್ಲಾ ಜಾಮೀನು ಪ್ರಕರಣದಲ್ಲಿ ಹೈಕೋರ್ಟ್ ಒಂದೇ ರೀತಿಯ ಆದೇಶ ನೀಡಿದೆ. ಹೈಕೋರ್ಟ್ ತನ್ನ ವಿವೇಚನೆಯನ್ನು ಸರಿಯಾಗಿ ಬಳಸಿದೆಯೇ ಎಂಬುದು ಮುಖ್ಯ. ಘಟನೆ ನಡೆದಿರುವುದು ಸುಳ್ಳೇ? ಟೆಸ್ಟ್ ರಿಪೋರ್ಟ್ ಅನ್ನು ಪರಿಗಣಿಸಬಾರದೇ ಹೇಳಿ’ ಎಂದು ಕೋರ್ಟ್ ದರ್ಶನ್ ಪರ ವಕೀಲರಿಗೆ ಕೇಳಿದೆ.

ಇದನ್ನೂ ಓದಿ: ದರ್ಶನ್ ಕೇಸ್​ನಲ್ಲಿ ಆದೇಶ ಕಾಯ್ದಿರಿಸಿದ ಸುಪ್ರೀಂಕೋರ್ಟ್

‘ಹೈಕೋರ್ಟ್ ಆರೋಪಿಗಳನ್ನು ದೋಷಮುಕ್ತಗೊಳಿಸುವಂತೆ ಆದೇಶ ನೀಡಿದೆಯಲ್ಲವೇ? ಹೈಕೋರ್ಟ್ ಆದೇಶ ನೀಡಿರುವ ರೀತಿ ನಮಗೆ ನೋವುಂಟುಮಾಡಿದೆ. ಟ್ರಯಲ್ ಕೋರ್ಟ್ ಜಡ್ಜ್ ತಪ್ಪು ಮಾಡುತ್ತಾರೆಂದರೆ ನಂಬಬಹುದು. ಆದರೆ, ಹೈಕೋರ್ಟ್ ಜಡ್ಜ್ ನೀಡಿರುವ ಕಾರಣಗಳನ್ನು ಒಪ್ಪುವುದು ಹೇಗೆ’ ಎಂದು ಕೋರ್ಟ್ ಪ್ರಶ್ನೆ ಮಾಡಿದೆ.

 ಆದೇಶ ಕಾಯ್ದಿರಿಸಿದ ಕೋರ್ಟ್

ಸದ್ಯ ಸುಪ್ರೀಂಕೋರ್ಟ್ ಸರ್ಕಾರಿ ವಕೀಲರು, ದರ್ಶನ್ ಪರ ವಕೀಲರು ಹಾಗೂ ಪವಿತ್ರಾ ಗೌಡ ಪರ ವಕೀಲರ ವಾದವನ್ನು ಆಲಿಸಿದೆ. ಆ ಬಳಿಕ ಕೋರ್ಟ್ ತನ್ನ ಆದೇಶವನ್ನು ಕಾಯ್ದಿರಿಸಿದೆ. 10 ದಿನಗಳ ಬಳಿಕ ತೀರ್ಪನ್ನು ನೀಡುವುದಾಗಿ ಸುಪ್ರೀಂಕೋರ್ಟ್ ಹೇಳಿದೆ. ಸದ್ಯ ಕೋರ್ಟ್ ಅಭಿಪ್ರಾಯ ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿದೆ.

(ವರದಿ: ರಮೇಶ್ ಎಂ)

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು