AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಮನೆ ಸಾಲದ ಕಂತುಗಳನ್ನು ಸುಶಾಂತ್ ಕಟ್ಟಿಲ್ಲ, ನಾನೇ ಕಟ್ತಿರೋದು: ಅಂಕಿತಾ ಲೊಖಂಡೆ

ಬಾಲಿವುಡ್ ನಟ ದಿವಂಗತ ಸುಶಾಂತ್ ಸಿಂಗ್ ರಜಪೂತ ಅವರ ಮಾಜಿ ಪ್ರೇಯಸಿ ಹಾಗೂ ನಟಿ ಅಂಕಿತಾ ಲೊಖಂಡೆ ತನ್ನ ಮನೆಯ ಕಂತುಗಳನ್ನು ಸುಶಾಂತ್ ಕಟ್ಟುತ್ತಿರಲಿಲ್ಲ ಅಂತ ಸಾಬೀತುಗೊಳಿಸಲು ತನ್ನ ಬ್ಯಾಂಕ್ ಸ್ಟೇಟ್​ಮೆಂಟ್​ಗಳನ್ನು ಸಾಮಾಜಿಕ ಜಾಲತಾಣಗಲ್ಲಿ ಹಂಚಿಕೊಂಡಿದ್ದಾರೆ. ಬ್ಯಾಂಕ್ ಸ್ಟೇಟ್​ಮೆಂಟ್​ಗಳ ಫೋಟೊಕಾಪಿಗಳೊಂದಿಗೆ ಟ್ವೀಟ್ ಸಹ ಮಾಡಿರುವ ಅಂಕಿತಾ, ತನ್ನ ಮನೆಯ ಕಂತುಗಳ ಬಗ್ಗೆ ಎದ್ದಿರುವ ವಿವಾದವನ್ನು ಶಾಶ್ವತವಾಗಿ ಕೊನೆಗೊಳಿಸಲು ಕಂತಿನ ವಿವರಗಳನ್ನು ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ. “ಎಲ್ಲಾ ಊಹಾಪೋಹಗಳಿಗೆ ಮುಕ್ತಿ ಹಾಡಲು ನಿರ್ಧರಿಸಿದ್ದೇನೆ. ವಿಷಯವನ್ನು ಅತ್ಯಂತ ಪಾರದರ್ಶಕವಾಗಿಡಲು ಬಯಸುತ್ತೇನೆ. […]

ನನ್ನ ಮನೆ ಸಾಲದ ಕಂತುಗಳನ್ನು ಸುಶಾಂತ್ ಕಟ್ಟಿಲ್ಲ, ನಾನೇ ಕಟ್ತಿರೋದು: ಅಂಕಿತಾ ಲೊಖಂಡೆ
Follow us
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 15, 2020 | 5:01 PM

ಬಾಲಿವುಡ್ ನಟ ದಿವಂಗತ ಸುಶಾಂತ್ ಸಿಂಗ್ ರಜಪೂತ ಅವರ ಮಾಜಿ ಪ್ರೇಯಸಿ ಹಾಗೂ ನಟಿ ಅಂಕಿತಾ ಲೊಖಂಡೆ ತನ್ನ ಮನೆಯ ಕಂತುಗಳನ್ನು ಸುಶಾಂತ್ ಕಟ್ಟುತ್ತಿರಲಿಲ್ಲ ಅಂತ ಸಾಬೀತುಗೊಳಿಸಲು ತನ್ನ ಬ್ಯಾಂಕ್ ಸ್ಟೇಟ್​ಮೆಂಟ್​ಗಳನ್ನು ಸಾಮಾಜಿಕ ಜಾಲತಾಣಗಲ್ಲಿ ಹಂಚಿಕೊಂಡಿದ್ದಾರೆ.

ಬ್ಯಾಂಕ್ ಸ್ಟೇಟ್​ಮೆಂಟ್​ಗಳ ಫೋಟೊಕಾಪಿಗಳೊಂದಿಗೆ ಟ್ವೀಟ್ ಸಹ ಮಾಡಿರುವ ಅಂಕಿತಾ, ತನ್ನ ಮನೆಯ ಕಂತುಗಳ ಬಗ್ಗೆ ಎದ್ದಿರುವ ವಿವಾದವನ್ನು ಶಾಶ್ವತವಾಗಿ ಕೊನೆಗೊಳಿಸಲು ಕಂತಿನ ವಿವರಗಳನ್ನು ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಎಲ್ಲಾ ಊಹಾಪೋಹಗಳಿಗೆ ಮುಕ್ತಿ ಹಾಡಲು ನಿರ್ಧರಿಸಿದ್ದೇನೆ. ವಿಷಯವನ್ನು ಅತ್ಯಂತ ಪಾರದರ್ಶಕವಾಗಿಡಲು ಬಯಸುತ್ತೇನೆ. ನನ್ನ ಫ್ಲ್ಯಾಟಿನ ನೋಂದಣಿ ಪತ್ರ, ಮತ್ತು ಅದಕ್ಕೆ ಸಂಬಂಧಿಸಿದ ಬ್ಯಾಂಕ್ ಕಂತುಗಳು ಪ್ರತಿ ತಿಂಗಳು ನನ್ನ ಖಾತೆಯ ಮೂಲಕ ಪಾವತಿಯಾಗಿರುವುದನ್ನು ಸೂಚಿಸುವ ಸ್ಟೇಟ್​ಮೆಂಟ್​ಗಳು ಇಲ್ಲಿವೆ. ಇದಕ್ಕಿಂತ ಹೆಚ್ಚು ನಾನೇನೂ ಹೇಳಬಯಸುವುದಿಲ್ಲ” ಅಂತ ಅಂಕಿತಾ ಹೇಳಿದ್ದಾರೆ.

ಸುಶಾಂತ್ ಸಾವಿನ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇ ಡಿ) ಶುಕ್ರವಾರದಂದು ಬಿಡುಗಡೆ ಮಾಡಿದ ಹೇಳಿಕೆಯೊಂದರಲ್ಲಿ, ಮುಂಬೈನ ಮಲಾಡ್ ಪ್ರದೇಶದಲ್ಲಿರುವ ಅಂಕಿತಾ ಲೊಖಂಡೆಯವರ ರೂ 4.5 ಕೋಟಿ ಮೌಲ್ಯದ ಫ್ಲ್ಯಾಟಿನ ಕಂತುಗಳು ಸುಶಾಂತ್ ಸಿಂಗ್ ರಜಪೂತ ಅವರ ಬ್ಯಾಂಕ್ ಖಾತೆಯಿಂದ ಪಾವತಿಯಾಗಿವೆ ಎಂದಿತ್ತು.

ಇ ಡಿ ಹೇಳಿಕೆಯನ್ನು ಸಾರಾಸಗಟು ತಳ್ಳಿಹಾಕಿರುವ ಅಂಕಿತಾ ತಾನು ಕೊಂಡ ಫ್ಲ್ಯಾಟಿನ ಮೌಲ್ಯ ಕೇವಲ ರೂ 1.35 ಕೋಟಿ ಮಾತ್ರ ಎಂದು ಹೇಳಿದ್ದಲ್ಲದೆ ಅದನ್ನು ಸಾಬೀತುಪಡಿಸಲು ನೋಂದಣಿ ಪತ್ರದ ಪ್ರತಿಯನ್ನು ಸಹ ಶೇರ್ ಮಾಡಿದ್ದಾರೆ.

ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ