ನನ್ನ ಮನೆ ಸಾಲದ ಕಂತುಗಳನ್ನು ಸುಶಾಂತ್ ಕಟ್ಟಿಲ್ಲ, ನಾನೇ ಕಟ್ತಿರೋದು: ಅಂಕಿತಾ ಲೊಖಂಡೆ

ಬಾಲಿವುಡ್ ನಟ ದಿವಂಗತ ಸುಶಾಂತ್ ಸಿಂಗ್ ರಜಪೂತ ಅವರ ಮಾಜಿ ಪ್ರೇಯಸಿ ಹಾಗೂ ನಟಿ ಅಂಕಿತಾ ಲೊಖಂಡೆ ತನ್ನ ಮನೆಯ ಕಂತುಗಳನ್ನು ಸುಶಾಂತ್ ಕಟ್ಟುತ್ತಿರಲಿಲ್ಲ ಅಂತ ಸಾಬೀತುಗೊಳಿಸಲು ತನ್ನ ಬ್ಯಾಂಕ್ ಸ್ಟೇಟ್​ಮೆಂಟ್​ಗಳನ್ನು ಸಾಮಾಜಿಕ ಜಾಲತಾಣಗಲ್ಲಿ ಹಂಚಿಕೊಂಡಿದ್ದಾರೆ. ಬ್ಯಾಂಕ್ ಸ್ಟೇಟ್​ಮೆಂಟ್​ಗಳ ಫೋಟೊಕಾಪಿಗಳೊಂದಿಗೆ ಟ್ವೀಟ್ ಸಹ ಮಾಡಿರುವ ಅಂಕಿತಾ, ತನ್ನ ಮನೆಯ ಕಂತುಗಳ ಬಗ್ಗೆ ಎದ್ದಿರುವ ವಿವಾದವನ್ನು ಶಾಶ್ವತವಾಗಿ ಕೊನೆಗೊಳಿಸಲು ಕಂತಿನ ವಿವರಗಳನ್ನು ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ. “ಎಲ್ಲಾ ಊಹಾಪೋಹಗಳಿಗೆ ಮುಕ್ತಿ ಹಾಡಲು ನಿರ್ಧರಿಸಿದ್ದೇನೆ. ವಿಷಯವನ್ನು ಅತ್ಯಂತ ಪಾರದರ್ಶಕವಾಗಿಡಲು ಬಯಸುತ್ತೇನೆ. […]

ನನ್ನ ಮನೆ ಸಾಲದ ಕಂತುಗಳನ್ನು ಸುಶಾಂತ್ ಕಟ್ಟಿಲ್ಲ, ನಾನೇ ಕಟ್ತಿರೋದು: ಅಂಕಿತಾ ಲೊಖಂಡೆ
Follow us
|

Updated on: Aug 15, 2020 | 5:01 PM

ಬಾಲಿವುಡ್ ನಟ ದಿವಂಗತ ಸುಶಾಂತ್ ಸಿಂಗ್ ರಜಪೂತ ಅವರ ಮಾಜಿ ಪ್ರೇಯಸಿ ಹಾಗೂ ನಟಿ ಅಂಕಿತಾ ಲೊಖಂಡೆ ತನ್ನ ಮನೆಯ ಕಂತುಗಳನ್ನು ಸುಶಾಂತ್ ಕಟ್ಟುತ್ತಿರಲಿಲ್ಲ ಅಂತ ಸಾಬೀತುಗೊಳಿಸಲು ತನ್ನ ಬ್ಯಾಂಕ್ ಸ್ಟೇಟ್​ಮೆಂಟ್​ಗಳನ್ನು ಸಾಮಾಜಿಕ ಜಾಲತಾಣಗಲ್ಲಿ ಹಂಚಿಕೊಂಡಿದ್ದಾರೆ.

ಬ್ಯಾಂಕ್ ಸ್ಟೇಟ್​ಮೆಂಟ್​ಗಳ ಫೋಟೊಕಾಪಿಗಳೊಂದಿಗೆ ಟ್ವೀಟ್ ಸಹ ಮಾಡಿರುವ ಅಂಕಿತಾ, ತನ್ನ ಮನೆಯ ಕಂತುಗಳ ಬಗ್ಗೆ ಎದ್ದಿರುವ ವಿವಾದವನ್ನು ಶಾಶ್ವತವಾಗಿ ಕೊನೆಗೊಳಿಸಲು ಕಂತಿನ ವಿವರಗಳನ್ನು ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಎಲ್ಲಾ ಊಹಾಪೋಹಗಳಿಗೆ ಮುಕ್ತಿ ಹಾಡಲು ನಿರ್ಧರಿಸಿದ್ದೇನೆ. ವಿಷಯವನ್ನು ಅತ್ಯಂತ ಪಾರದರ್ಶಕವಾಗಿಡಲು ಬಯಸುತ್ತೇನೆ. ನನ್ನ ಫ್ಲ್ಯಾಟಿನ ನೋಂದಣಿ ಪತ್ರ, ಮತ್ತು ಅದಕ್ಕೆ ಸಂಬಂಧಿಸಿದ ಬ್ಯಾಂಕ್ ಕಂತುಗಳು ಪ್ರತಿ ತಿಂಗಳು ನನ್ನ ಖಾತೆಯ ಮೂಲಕ ಪಾವತಿಯಾಗಿರುವುದನ್ನು ಸೂಚಿಸುವ ಸ್ಟೇಟ್​ಮೆಂಟ್​ಗಳು ಇಲ್ಲಿವೆ. ಇದಕ್ಕಿಂತ ಹೆಚ್ಚು ನಾನೇನೂ ಹೇಳಬಯಸುವುದಿಲ್ಲ” ಅಂತ ಅಂಕಿತಾ ಹೇಳಿದ್ದಾರೆ.

ಸುಶಾಂತ್ ಸಾವಿನ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇ ಡಿ) ಶುಕ್ರವಾರದಂದು ಬಿಡುಗಡೆ ಮಾಡಿದ ಹೇಳಿಕೆಯೊಂದರಲ್ಲಿ, ಮುಂಬೈನ ಮಲಾಡ್ ಪ್ರದೇಶದಲ್ಲಿರುವ ಅಂಕಿತಾ ಲೊಖಂಡೆಯವರ ರೂ 4.5 ಕೋಟಿ ಮೌಲ್ಯದ ಫ್ಲ್ಯಾಟಿನ ಕಂತುಗಳು ಸುಶಾಂತ್ ಸಿಂಗ್ ರಜಪೂತ ಅವರ ಬ್ಯಾಂಕ್ ಖಾತೆಯಿಂದ ಪಾವತಿಯಾಗಿವೆ ಎಂದಿತ್ತು.

ಇ ಡಿ ಹೇಳಿಕೆಯನ್ನು ಸಾರಾಸಗಟು ತಳ್ಳಿಹಾಕಿರುವ ಅಂಕಿತಾ ತಾನು ಕೊಂಡ ಫ್ಲ್ಯಾಟಿನ ಮೌಲ್ಯ ಕೇವಲ ರೂ 1.35 ಕೋಟಿ ಮಾತ್ರ ಎಂದು ಹೇಳಿದ್ದಲ್ಲದೆ ಅದನ್ನು ಸಾಬೀತುಪಡಿಸಲು ನೋಂದಣಿ ಪತ್ರದ ಪ್ರತಿಯನ್ನು ಸಹ ಶೇರ್ ಮಾಡಿದ್ದಾರೆ.

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ