AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್ 2’ ಸಿನಿಮಾ ನೋಡಿ ಭೇಷ್ ಎಂದ ಅಲ್ಲು ಅರ್ಜುನ್; ಯಶ್ ಪರ್ಫಾರ್ಮೆನ್ಸ್​​ಗೆ ಸ್ಟೈಲಿಶ್ ಸ್ಟಾರ್ ಫಿದಾ

ಅಲ್ಲು ಅರ್ಜುನ್ ಅವರು ‘ಕೆಜಿಎಫ್ 2’ ಸಿನಿಮಾ ವೀಕ್ಷಿಸಿದ್ದಾರೆ. ಈ ಸಿನಿಮಾಗೆ ಅವರು ಭೇಷ್ ಎಂದಿದ್ದಾರೆ. ಈ ಬಗ್ಗೆ ಟ್ವಿಟರ್​ನಲ್ಲಿ ಅವರು ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

‘ಕೆಜಿಎಫ್ 2’ ಸಿನಿಮಾ ನೋಡಿ ಭೇಷ್ ಎಂದ ಅಲ್ಲು ಅರ್ಜುನ್; ಯಶ್ ಪರ್ಫಾರ್ಮೆನ್ಸ್​​ಗೆ ಸ್ಟೈಲಿಶ್ ಸ್ಟಾರ್ ಫಿದಾ
ಅಲ್ಲು ಅರ್ಜುನ್-ಯಶ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Apr 22, 2022 | 2:16 PM

Share

‘ಕೆಜಿಎಫ್ 2’ ಸಿನಿಮಾ (KGF Chapter 2) ಬಗ್ಗೆ ಇಡೀ ವಿಶ್ವ ಮಾತನಾಡುತ್ತಿದೆ. ಭಾರತ ಮಾತ್ರವಲ್ಲದೆ, ವಿದೇಶದಲ್ಲೂ ಈ ಸಿನಿಮಾ ಹವಾ ಸೃಷ್ಟಿ ಮಾಡಿದೆ. ಚಿತ್ರದ ಕಲೆಕ್ಷನ್ ಸದ್ಯದಮಟ್ಟಿಗಂತೂ ತಗ್ಗುವ ಸೂಚನೆ ಸಿಗುತ್ತಿಲ್ಲ. ಆ ಮಟ್ಟಿಗೆ ಜನರು ಸಿನಿಮಾ ವೀಕ್ಷಣೆ ಮಾಡುತ್ತಿದ್ದಾರೆ. ‘ಕೆಜಿಎಫ್ 2’ ಚಿತ್ರವನ್ನು ನೋಡಿದ ಪರಭಾಷೆಯ ಸ್ಟಾರ್​​ಗಳು ಚಿತ್ರದ ಬಗ್ಗೆ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಈಗ ನಟ ಅಲ್ಲು ಅರ್ಜುನ್ ಅವರು (Allu Arjun) ‘ಕೆಜಿಎಫ್ 2’ಗೆ ಭೇಷ್ ಎಂದಿದ್ದಾರೆ. ಯಶ್ (Yash) ಪರ್ಫಾರ್ಮೆನ್ಸ್ ನೋಡಿ ಫಿದಾ ಆಗಿದ್ದಾರೆ.

ಅಲ್ಲು ಅರ್ಜುನ್ ಅವರು ಮೊದಲಿನಿಂದಲೂ ಒಂದು ಪದ್ದತಿಯನ್ನು ರೂಢಿಸಿಕೊಂಡು ಬಂದಿದ್ದಾರೆ. ಒಂದೊಳ್ಳೆಯ ಸಿನಿಮಾ ನೋಡಿದರೆ ಅವರು ಆ ಬಗ್ಗೆ ಮೆಚ್ಚುಗೆ ಸೂಚಿಸುತ್ತಾರೆ. ಚಿತ್ರತಂಡಕ್ಕೆ ಬೆಂಬಲ ನೀಡುತ್ತಾರೆ. ಈ ಬಾರಿ ಅವರು ‘ಕೆಜಿಎಫ್ 2’ ಸಿನಿಮಾ ವೀಕ್ಷಿಸಿದ್ದಾರೆ. ಈ ಸಿನಿಮಾಗೆ ಅವರು ಭೇಷ್ ಎಂದಿದ್ದಾರೆ. ಈ ಬಗ್ಗೆ ಟ್ವಿಟರ್​ನಲ್ಲಿ ಅಲ್ಲು ಅರ್ಜುನ್ ಅವರು ಬರೆದುಕೊಂಡಿದ್ದಾರೆ.

‘ಕೆಜಿಎಫ್ 2’ ತಂಡಕ್ಕೆ ಶುಭಾಶಯ. ಯಶ್ ಅವರ ಪರ್ಫಾರ್ಮೆನ್ಸ್​ ಅದ್ಭುತವಾಗಿದೆ. ಸಂಜಯ್ ದತ್,​ ರವೀನಾ ಟಂಡನ್​, ಶ್ರೀನಿಧಿ ಶೆಟ್ಟಿ ಹಾಗೂ ಎಲ್ಲಾ ಕಲಾವಿದರ ನಟನೆ ಉತ್ತಮವಾಗಿದೆ. ರವಿ ಬಸ್ರೂರು ಅವರ ಹಿನ್ನೆಲೆ ಸಂಗೀತ, ಭುವನ್ ಗೌಡ ಅವರ ಛಾಯಾಗ್ರಹಣ ಔಟ್​ಸ್ಟ್ಯಾಂಡಿಂಗ್. ಎಲ್ಲಾ ತಂತ್ರಜ್ಞರಿಗೆ ನನ್ನ ಗೌರವ’ ಎಂದು ಬರೆದುಕೊಂಡಿದ್ದಾರೆ ಅಲ್ಲು ಅರ್ಜುನ್.

ಪ್ರಶಾಂತ್ ನೀಲ್ ಅವರ ನಿರ್ದೇಶನ ‘ಕೆಜಿಎಫ್ 2’ನ ಹೈಲೈಟ್. ಈ ಬಗ್ಗೆಯೂ ಬರೆದುಕೊಂಡಿದ್ದಾರೆ ಅಲ್ಲು ಅರ್ಜುನ್. ‘ಪ್ರಶಾಂತ್ ನೀಲ್ ಅವರದ್ದು ಅದ್ಭುತ ಪ್ರದರ್ಶನ. ಅವರ ಆಲೋಚನೆಗೆ ನನ್ನದೊಂದು ಗೌರವ. ಭಾರತದ ಚಿತ್ರರಂಗವನ್ನು ಮತ್ತೊಂದು ಎತ್ತರಕ್ಕೆ ಕೊಂಡೊಯ್ದಿದ್ದಕ್ಕೆ ಎಲ್ಲರಿಗೂ ಧನ್ಯವಾದಗಳು’ ಎಂದಿದ್ದಾರೆ ಅಲ್ಲು ಅರ್ಜುನ್. ಈ ಟ್ವೀಟ್​ಗೆ ಸಾಕಷ್ಟು ಲೈಕ್ಸ್​ ಬರುತ್ತಿವೆ.

ಇದನ್ನೂ ಓದಿ: ‘ಕೆಜಿಎಫ್​: ಚಾಪ್ಟರ್​ 2’ ಬಗ್ಗೆ ಉಪೇಂದ್ರ ಮೆಚ್ಚುಗೆ; ಇನ್ನುಳಿದವರ ಮೌನಕ್ಕೆ ಯಶ್​ ಫ್ಯಾನ್ಸ್​ ತಕರಾರು​

ಒಂದೇ ವಾರಕ್ಕೆ 700 ಕೋಟಿ ರೂಪಾಯಿ ಕಲೆಕ್ಷನ್; ‘RRR​’ ಕಲೆಕ್ಷನ್​ ಹಿಂದಿಕ್ಕಲಿದೆ ‘ಕೆಜಿಎಫ್ 2’?

Published On - 1:58 pm, Fri, 22 April 22

ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಕೊಲೆ ಆರೋಪಿ ಮಹೇಶ್​ಗೆ ಗರ್ಭಧರಿಸಿದ್ದ ಹೆಂಡತಿ ಶುಭಾ ಮೇಲೆ ಸದಾ ಅನುಮಾನ
ಕೊಲೆ ಆರೋಪಿ ಮಹೇಶ್​ಗೆ ಗರ್ಭಧರಿಸಿದ್ದ ಹೆಂಡತಿ ಶುಭಾ ಮೇಲೆ ಸದಾ ಅನುಮಾನ