AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್ 2’ ಸಿನಿಮಾ ನೋಡಿ ಭೇಷ್ ಎಂದ ಅಲ್ಲು ಅರ್ಜುನ್; ಯಶ್ ಪರ್ಫಾರ್ಮೆನ್ಸ್​​ಗೆ ಸ್ಟೈಲಿಶ್ ಸ್ಟಾರ್ ಫಿದಾ

ಅಲ್ಲು ಅರ್ಜುನ್ ಅವರು ‘ಕೆಜಿಎಫ್ 2’ ಸಿನಿಮಾ ವೀಕ್ಷಿಸಿದ್ದಾರೆ. ಈ ಸಿನಿಮಾಗೆ ಅವರು ಭೇಷ್ ಎಂದಿದ್ದಾರೆ. ಈ ಬಗ್ಗೆ ಟ್ವಿಟರ್​ನಲ್ಲಿ ಅವರು ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

‘ಕೆಜಿಎಫ್ 2’ ಸಿನಿಮಾ ನೋಡಿ ಭೇಷ್ ಎಂದ ಅಲ್ಲು ಅರ್ಜುನ್; ಯಶ್ ಪರ್ಫಾರ್ಮೆನ್ಸ್​​ಗೆ ಸ್ಟೈಲಿಶ್ ಸ್ಟಾರ್ ಫಿದಾ
ಅಲ್ಲು ಅರ್ಜುನ್-ಯಶ್
TV9 Web
| Edited By: |

Updated on:Apr 22, 2022 | 2:16 PM

Share

‘ಕೆಜಿಎಫ್ 2’ ಸಿನಿಮಾ (KGF Chapter 2) ಬಗ್ಗೆ ಇಡೀ ವಿಶ್ವ ಮಾತನಾಡುತ್ತಿದೆ. ಭಾರತ ಮಾತ್ರವಲ್ಲದೆ, ವಿದೇಶದಲ್ಲೂ ಈ ಸಿನಿಮಾ ಹವಾ ಸೃಷ್ಟಿ ಮಾಡಿದೆ. ಚಿತ್ರದ ಕಲೆಕ್ಷನ್ ಸದ್ಯದಮಟ್ಟಿಗಂತೂ ತಗ್ಗುವ ಸೂಚನೆ ಸಿಗುತ್ತಿಲ್ಲ. ಆ ಮಟ್ಟಿಗೆ ಜನರು ಸಿನಿಮಾ ವೀಕ್ಷಣೆ ಮಾಡುತ್ತಿದ್ದಾರೆ. ‘ಕೆಜಿಎಫ್ 2’ ಚಿತ್ರವನ್ನು ನೋಡಿದ ಪರಭಾಷೆಯ ಸ್ಟಾರ್​​ಗಳು ಚಿತ್ರದ ಬಗ್ಗೆ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಈಗ ನಟ ಅಲ್ಲು ಅರ್ಜುನ್ ಅವರು (Allu Arjun) ‘ಕೆಜಿಎಫ್ 2’ಗೆ ಭೇಷ್ ಎಂದಿದ್ದಾರೆ. ಯಶ್ (Yash) ಪರ್ಫಾರ್ಮೆನ್ಸ್ ನೋಡಿ ಫಿದಾ ಆಗಿದ್ದಾರೆ.

ಅಲ್ಲು ಅರ್ಜುನ್ ಅವರು ಮೊದಲಿನಿಂದಲೂ ಒಂದು ಪದ್ದತಿಯನ್ನು ರೂಢಿಸಿಕೊಂಡು ಬಂದಿದ್ದಾರೆ. ಒಂದೊಳ್ಳೆಯ ಸಿನಿಮಾ ನೋಡಿದರೆ ಅವರು ಆ ಬಗ್ಗೆ ಮೆಚ್ಚುಗೆ ಸೂಚಿಸುತ್ತಾರೆ. ಚಿತ್ರತಂಡಕ್ಕೆ ಬೆಂಬಲ ನೀಡುತ್ತಾರೆ. ಈ ಬಾರಿ ಅವರು ‘ಕೆಜಿಎಫ್ 2’ ಸಿನಿಮಾ ವೀಕ್ಷಿಸಿದ್ದಾರೆ. ಈ ಸಿನಿಮಾಗೆ ಅವರು ಭೇಷ್ ಎಂದಿದ್ದಾರೆ. ಈ ಬಗ್ಗೆ ಟ್ವಿಟರ್​ನಲ್ಲಿ ಅಲ್ಲು ಅರ್ಜುನ್ ಅವರು ಬರೆದುಕೊಂಡಿದ್ದಾರೆ.

‘ಕೆಜಿಎಫ್ 2’ ತಂಡಕ್ಕೆ ಶುಭಾಶಯ. ಯಶ್ ಅವರ ಪರ್ಫಾರ್ಮೆನ್ಸ್​ ಅದ್ಭುತವಾಗಿದೆ. ಸಂಜಯ್ ದತ್,​ ರವೀನಾ ಟಂಡನ್​, ಶ್ರೀನಿಧಿ ಶೆಟ್ಟಿ ಹಾಗೂ ಎಲ್ಲಾ ಕಲಾವಿದರ ನಟನೆ ಉತ್ತಮವಾಗಿದೆ. ರವಿ ಬಸ್ರೂರು ಅವರ ಹಿನ್ನೆಲೆ ಸಂಗೀತ, ಭುವನ್ ಗೌಡ ಅವರ ಛಾಯಾಗ್ರಹಣ ಔಟ್​ಸ್ಟ್ಯಾಂಡಿಂಗ್. ಎಲ್ಲಾ ತಂತ್ರಜ್ಞರಿಗೆ ನನ್ನ ಗೌರವ’ ಎಂದು ಬರೆದುಕೊಂಡಿದ್ದಾರೆ ಅಲ್ಲು ಅರ್ಜುನ್.

ಪ್ರಶಾಂತ್ ನೀಲ್ ಅವರ ನಿರ್ದೇಶನ ‘ಕೆಜಿಎಫ್ 2’ನ ಹೈಲೈಟ್. ಈ ಬಗ್ಗೆಯೂ ಬರೆದುಕೊಂಡಿದ್ದಾರೆ ಅಲ್ಲು ಅರ್ಜುನ್. ‘ಪ್ರಶಾಂತ್ ನೀಲ್ ಅವರದ್ದು ಅದ್ಭುತ ಪ್ರದರ್ಶನ. ಅವರ ಆಲೋಚನೆಗೆ ನನ್ನದೊಂದು ಗೌರವ. ಭಾರತದ ಚಿತ್ರರಂಗವನ್ನು ಮತ್ತೊಂದು ಎತ್ತರಕ್ಕೆ ಕೊಂಡೊಯ್ದಿದ್ದಕ್ಕೆ ಎಲ್ಲರಿಗೂ ಧನ್ಯವಾದಗಳು’ ಎಂದಿದ್ದಾರೆ ಅಲ್ಲು ಅರ್ಜುನ್. ಈ ಟ್ವೀಟ್​ಗೆ ಸಾಕಷ್ಟು ಲೈಕ್ಸ್​ ಬರುತ್ತಿವೆ.

ಇದನ್ನೂ ಓದಿ: ‘ಕೆಜಿಎಫ್​: ಚಾಪ್ಟರ್​ 2’ ಬಗ್ಗೆ ಉಪೇಂದ್ರ ಮೆಚ್ಚುಗೆ; ಇನ್ನುಳಿದವರ ಮೌನಕ್ಕೆ ಯಶ್​ ಫ್ಯಾನ್ಸ್​ ತಕರಾರು​

ಒಂದೇ ವಾರಕ್ಕೆ 700 ಕೋಟಿ ರೂಪಾಯಿ ಕಲೆಕ್ಷನ್; ‘RRR​’ ಕಲೆಕ್ಷನ್​ ಹಿಂದಿಕ್ಕಲಿದೆ ‘ಕೆಜಿಎಫ್ 2’?

Published On - 1:58 pm, Fri, 22 April 22

Follow Us
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?