AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥಿಯೇಟರ್​ನಲ್ಲಿ ಬದಲಾದ ತಂಬಾಕು ಜಾಹೀರಾತು; ಸುನೀತಾ ಬದಲು ಓಂ ಪ್ರಕಾಶ್ ಕಥೆ

‘ನನ್ನ ಬದುಕು ಈ ರೀತಿ ಆಗುತ್ತೆ ಅಂತ ಯೋಚನೆ ಮಾಡಿಯೇ ಇರಲಿಲ್ಲ. ಎಲ್ಲವೂ ಚೆನ್ನಾಗಿಯೇ ಇತ್ತು’ ಎಂಬ ಜಾಹೀರಾತು ಪ್ರಸಾರ ಕಾಣುತ್ತಿತ್ತು. ಇದನ್ನು ಈಗ ಬದಲಾಗಿಸಿದೆ. ಈಗ ಸುನಿತಾ ಬದಲು ಓಂ ಪ್ರಕಾಶ್ ಹೆಸರಿನ ವ್ಯಕ್ತಿ ಬಂದಿದ್ದಾನೆ.

ಥಿಯೇಟರ್​ನಲ್ಲಿ ಬದಲಾದ ತಂಬಾಕು ಜಾಹೀರಾತು; ಸುನೀತಾ ಬದಲು ಓಂ ಪ್ರಕಾಶ್ ಕಥೆ
ತಂಬಾಕು ಜಾಹೀರಾತು
ರಾಜೇಶ್ ದುಗ್ಗುಮನೆ
|

Updated on: Aug 24, 2024 | 8:39 AM

Share

‘ನನ್ನ ಬದುಕು ಈ ರೀತಿ ಆಗುತ್ತೆ ಅಂತ ಯೋಚನೆ ಮಾಡಿಯೇ ಇರಲಿಲ್ಲ. ಎಲ್ಲವೂ ಚೆನ್ನಾಗಿಯೇ ಇತ್ತು. ಒಳ್ಳೆಯ ಗಂಡ, ಎರಡು ಮುದ್ದಿನ ಮಕ್ಕಳು. ಆದರೆ, ತಂಬಾಕು ಎಲ್ಲವನ್ನೂ ಕೆಡಿಸಿಬಿಡ್ತು. ಈಗ ಹರಡುತ್ತಿರುವ ಈ ಕ್ಯಾನ್ಸರ್​ನ ನನ್ನ ಮುಖದಿಂದ ಕತ್ತರಿಸಿ ತೆಗಿಯಬೇಕಾಗಿದೆ. ಇನ್ನು ಯಾವುದೂ ಮೊದಲಿನ ಥರ ಇರಕ್ಕಾಗಲ್ಲ. ತಂಬಾಕು ನನ್ನ ಬದುಕನ್ನೇ ಸರ್ವನಾಶ ಮಾಡಿಬಿಡ್ತು’ ಎಂಬ ಲೈನ್​ಗಳನ್ನು ನಿಮಗೆ ತುಂಬಾ ಚಿರಪರಿಚಿತವೇ ಆಗಿರುತ್ತದೆ. ಥಿಯೇಟರ್​ಗೆ ಹೋದಾಗ ಈ ಜಾಹೀರಾತು ಕಾಣಿಸುತ್ತದೆ. ಆದರೆ, ಈಗ ಜಾಹೀರಾತು ಬದಲಾಗಿದೆ. ಈ ಅಡ್ವಟೈಸ್​ಮೆಂಟ್​ನ ಇನ್ಮುಂದೆ ಥಿಯೇಟರ್​ನಲ್ಲಿ ಕಾಣ ಸಿಗುವುದಿಲ್ಲ.

ಹೌದು, ಥಿಯೇಟರ್​​ನಲ್ಲಿ ಈಗ ತಂಬಾಕಿನ ಹೊಸ ಜಾಹೀರಾತು ಬಂದಿದೆ. ತಂಬಾಕು ತಿಂದರೆ ಏನೆಲ್ಲ ಸಮಸ್ಯೆ ಆಗುತ್ತದೆ ಎಂಬುದನ್ನು ಸುನಿತಾ ಹೇಳಿಕೊಂಡಿದ್ದಳು. ಈಗ ಇವಳ ಬದಲು ಓಂ ಪ್ರಕಾಶ್ ಹೆಸರಿನ ವ್ಯಕ್ತಿ ಬಂದಿದ್ದಾನೆ. ಸಣ್ಣ ವಯಸ್ಸಿನಿಂದ ತಂಬಾಕು ತಿಂದು ಈತನಿಗೆ ಕ್ಯಾನ್ಸರ್ ಕಾಣಿಸಿಕೊಂಡಿದೆ. ಆ ಬಗ್ಗೆ ಅವರ ಪತ್ನಿ ಸುನಿತಾ ಮಾತನಾಡುತ್ತಾಳೆ.

ಧೂಮಪಾನದ ಜಾಹೀರಾತಲ್ಲೂ ಬದಲಾವಣೆ ಆಗಿದೆ. ಸಿಗರೇಟ್ ಸೇದುವುದನ್ನು ಬಿಡುವುದರಿಂದ ಆರೋಗ್ಯದಲ್ಲಿ ಏನೆಲ್ಲಾ ಚೇತರಿಕೆಯಾಗುತ್ತದೆ ಎಂಬ ಹೊಸ ಜಾಹೀರಾತೊಂದನ್ನು ಬಿಡುಗಡೆ ಮಾಡಲಾಗಿದೆ. ಈ ಜಾಹೀರಾತು ಶುಕ್ರವವಾರದಿಂದ (ಆಗಸ್ಟ್ 23) ಪ್ರದರ್ಶನ ಕಾಣುತ್ತಿದೆ.

ಇದನ್ನೂ ಓದಿ: ತೆಲಂಗಾಣದಲ್ಲಿ ತಂಬಾಕು, ನಿಕೋಟಿನ್ ಹೊಂದಿರುವ ಗುಟ್ಕಾ, ಪಾನ್​ ಮಸಾಲ ನಿಷೇಧ

ಸಿನಿಮಾ ಪ್ರದರ್ಶನಕ್ಕೂ ಮೊದಲು, ಮಧ್ಯಂತರದಲ್ಲಿ ಈ ರೀತಿ ಜಾಹೀರಾತು ತೋರಿಸುವುದರಿಂದ ಕಿರಿಕಿರಿ ಆಗುತ್ತದೆ ಎಂದು ಕೆಲವರು ಹೇಳಿಕೊಂಡಿದ್ದೂ ಇದೆ. ಕೆಲವರು ಕೋರ್ಟ್​ನಲ್ಲಿ ಅರ್ಜಿ ಕೂಡ ಸಲ್ಲಿಕೆ ಮಾಡಿದ್ದರು. ಆದರೆ, ಈ ರೀತಿಯ ಜಾಹೀರಾತನ್ನು ಪ್ರದರ್ಶಿಸಬೇಕು ಎಂದು ಕೋರ್ಟ್ ಆದೇಶ ನೀಡಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್