AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥಿಯೇಟರ್​ನಲ್ಲಿ ಬದಲಾದ ತಂಬಾಕು ಜಾಹೀರಾತು; ಸುನೀತಾ ಬದಲು ಓಂ ಪ್ರಕಾಶ್ ಕಥೆ

‘ನನ್ನ ಬದುಕು ಈ ರೀತಿ ಆಗುತ್ತೆ ಅಂತ ಯೋಚನೆ ಮಾಡಿಯೇ ಇರಲಿಲ್ಲ. ಎಲ್ಲವೂ ಚೆನ್ನಾಗಿಯೇ ಇತ್ತು’ ಎಂಬ ಜಾಹೀರಾತು ಪ್ರಸಾರ ಕಾಣುತ್ತಿತ್ತು. ಇದನ್ನು ಈಗ ಬದಲಾಗಿಸಿದೆ. ಈಗ ಸುನಿತಾ ಬದಲು ಓಂ ಪ್ರಕಾಶ್ ಹೆಸರಿನ ವ್ಯಕ್ತಿ ಬಂದಿದ್ದಾನೆ.

ಥಿಯೇಟರ್​ನಲ್ಲಿ ಬದಲಾದ ತಂಬಾಕು ಜಾಹೀರಾತು; ಸುನೀತಾ ಬದಲು ಓಂ ಪ್ರಕಾಶ್ ಕಥೆ
ತಂಬಾಕು ಜಾಹೀರಾತು
ರಾಜೇಶ್ ದುಗ್ಗುಮನೆ
|

Updated on: Aug 24, 2024 | 8:39 AM

Share

‘ನನ್ನ ಬದುಕು ಈ ರೀತಿ ಆಗುತ್ತೆ ಅಂತ ಯೋಚನೆ ಮಾಡಿಯೇ ಇರಲಿಲ್ಲ. ಎಲ್ಲವೂ ಚೆನ್ನಾಗಿಯೇ ಇತ್ತು. ಒಳ್ಳೆಯ ಗಂಡ, ಎರಡು ಮುದ್ದಿನ ಮಕ್ಕಳು. ಆದರೆ, ತಂಬಾಕು ಎಲ್ಲವನ್ನೂ ಕೆಡಿಸಿಬಿಡ್ತು. ಈಗ ಹರಡುತ್ತಿರುವ ಈ ಕ್ಯಾನ್ಸರ್​ನ ನನ್ನ ಮುಖದಿಂದ ಕತ್ತರಿಸಿ ತೆಗಿಯಬೇಕಾಗಿದೆ. ಇನ್ನು ಯಾವುದೂ ಮೊದಲಿನ ಥರ ಇರಕ್ಕಾಗಲ್ಲ. ತಂಬಾಕು ನನ್ನ ಬದುಕನ್ನೇ ಸರ್ವನಾಶ ಮಾಡಿಬಿಡ್ತು’ ಎಂಬ ಲೈನ್​ಗಳನ್ನು ನಿಮಗೆ ತುಂಬಾ ಚಿರಪರಿಚಿತವೇ ಆಗಿರುತ್ತದೆ. ಥಿಯೇಟರ್​ಗೆ ಹೋದಾಗ ಈ ಜಾಹೀರಾತು ಕಾಣಿಸುತ್ತದೆ. ಆದರೆ, ಈಗ ಜಾಹೀರಾತು ಬದಲಾಗಿದೆ. ಈ ಅಡ್ವಟೈಸ್​ಮೆಂಟ್​ನ ಇನ್ಮುಂದೆ ಥಿಯೇಟರ್​ನಲ್ಲಿ ಕಾಣ ಸಿಗುವುದಿಲ್ಲ.

ಹೌದು, ಥಿಯೇಟರ್​​ನಲ್ಲಿ ಈಗ ತಂಬಾಕಿನ ಹೊಸ ಜಾಹೀರಾತು ಬಂದಿದೆ. ತಂಬಾಕು ತಿಂದರೆ ಏನೆಲ್ಲ ಸಮಸ್ಯೆ ಆಗುತ್ತದೆ ಎಂಬುದನ್ನು ಸುನಿತಾ ಹೇಳಿಕೊಂಡಿದ್ದಳು. ಈಗ ಇವಳ ಬದಲು ಓಂ ಪ್ರಕಾಶ್ ಹೆಸರಿನ ವ್ಯಕ್ತಿ ಬಂದಿದ್ದಾನೆ. ಸಣ್ಣ ವಯಸ್ಸಿನಿಂದ ತಂಬಾಕು ತಿಂದು ಈತನಿಗೆ ಕ್ಯಾನ್ಸರ್ ಕಾಣಿಸಿಕೊಂಡಿದೆ. ಆ ಬಗ್ಗೆ ಅವರ ಪತ್ನಿ ಸುನಿತಾ ಮಾತನಾಡುತ್ತಾಳೆ.

ಧೂಮಪಾನದ ಜಾಹೀರಾತಲ್ಲೂ ಬದಲಾವಣೆ ಆಗಿದೆ. ಸಿಗರೇಟ್ ಸೇದುವುದನ್ನು ಬಿಡುವುದರಿಂದ ಆರೋಗ್ಯದಲ್ಲಿ ಏನೆಲ್ಲಾ ಚೇತರಿಕೆಯಾಗುತ್ತದೆ ಎಂಬ ಹೊಸ ಜಾಹೀರಾತೊಂದನ್ನು ಬಿಡುಗಡೆ ಮಾಡಲಾಗಿದೆ. ಈ ಜಾಹೀರಾತು ಶುಕ್ರವವಾರದಿಂದ (ಆಗಸ್ಟ್ 23) ಪ್ರದರ್ಶನ ಕಾಣುತ್ತಿದೆ.

ಇದನ್ನೂ ಓದಿ: ತೆಲಂಗಾಣದಲ್ಲಿ ತಂಬಾಕು, ನಿಕೋಟಿನ್ ಹೊಂದಿರುವ ಗುಟ್ಕಾ, ಪಾನ್​ ಮಸಾಲ ನಿಷೇಧ

ಸಿನಿಮಾ ಪ್ರದರ್ಶನಕ್ಕೂ ಮೊದಲು, ಮಧ್ಯಂತರದಲ್ಲಿ ಈ ರೀತಿ ಜಾಹೀರಾತು ತೋರಿಸುವುದರಿಂದ ಕಿರಿಕಿರಿ ಆಗುತ್ತದೆ ಎಂದು ಕೆಲವರು ಹೇಳಿಕೊಂಡಿದ್ದೂ ಇದೆ. ಕೆಲವರು ಕೋರ್ಟ್​ನಲ್ಲಿ ಅರ್ಜಿ ಕೂಡ ಸಲ್ಲಿಕೆ ಮಾಡಿದ್ದರು. ಆದರೆ, ಈ ರೀತಿಯ ಜಾಹೀರಾತನ್ನು ಪ್ರದರ್ಶಿಸಬೇಕು ಎಂದು ಕೋರ್ಟ್ ಆದೇಶ ನೀಡಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್