AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tabla Nani: ‘ನನಗೂ ಹೆಂಡ್ತಿ ಬೇಕು’ ಎನ್ನುತ್ತಾರೆ ತಬಲಾ ನಾಣಿ; ಆದರೆ ಮಾತೇ ಆಡೋದಿಲ್ಲ ಚೈತ್ರಾ ಕೋಟೂರ್​

Chaitra Kotoor: ನಿರ್ದೇಶಕ ಕೆ. ಶಂಕರ್ ಅವರು ಸಂಪೂರ್ಣ ಕಾಮಿಡಿ ಕಥಾಹಂದರದ ಸಿನಿಮಾವನ್ನು ಜನರ ಎದುರು ತರುತ್ತಿದ್ದಾರೆ. ಇದರಲ್ಲಿ ತಬಲಾ ನಾಣಿ ಮತ್ತು ಚೈತ್ರಾ ಕೋಟೂರ್​ ಗಮನ ಸೆಳೆಯಲಿದ್ದಾರೆ.

Tabla Nani: ‘ನನಗೂ ಹೆಂಡ್ತಿ ಬೇಕು’ ಎನ್ನುತ್ತಾರೆ ತಬಲಾ ನಾಣಿ; ಆದರೆ ಮಾತೇ ಆಡೋದಿಲ್ಲ ಚೈತ್ರಾ ಕೋಟೂರ್​
ಚೈತ್ರಾ ಕೋಟೂರ್​, ತಬಲಾ ನಾಣಿ
ಮದನ್​ ಕುಮಾರ್​
|

Updated on:Jul 24, 2023 | 4:27 PM

Share

ಕನ್ನಡದ ಖ್ಯಾತ ನಟ ತಬಲಾ ನಾಣಿ (Tabla Nani) ಅವರ ಅಭಿನಯಕ್ಕೆ ಫ್ಯಾನ್ಸ್​ ಫಿದಾ ಆಗಿದ್ದಾರೆ. ಹಲವಾರು ಸಿನಿಮಾಗಳಲ್ಲಿ ನಟಿಸಿರುವ ಅವರು ಸ್ಯಾಂಡಲ್​ವುಡ್​ನಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ‘ಎದ್ದೇಳು ಮಂಜುನಾಥ’ ಸಿನಿಮಾದಲ್ಲಿ ಅವರು ಅಂಧನ ಪಾತ್ರ ಮಾಡಿ ಸೈ ಎನಿಸಿಕೊಂಡಿದ್ದರು. ಈಗ ಅದೇ ರೀತಿ ಮತ್ತೊಂದು ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಈ ಹೊಸ ಸಿನಿಮಾದಲ್ಲೂ ಅವರು ಕಣ್ಣು ಕಾಣದ ವ್ಯಕ್ತಿಯಾಗಿ ನಟಿಸುತ್ತಿದ್ದಾರೆ. ‘ನನಗೂ ಹೆಂಡ್ತಿ ಬೇಕು’ (Nanagu Hendthi Beku) ಎಂಬುದು ಈ ಸಿನಿಮಾದ ಹೆಸರು. ಈ ಚಿತ್ರದಲ್ಲಿ ವಿಶೇಷ ಕಥಾಹಂದರ ಇರಲಿದೆ. ಬಿಗ್​ ಬಾಸ್​ ಖ್ಯಾತಿಯ ನಟಿ ಚೈತ್ರಾ ಕೋಟೂರ್​ (Chaitra Kotoor) ಅವರು ‘ನನಗೂ ಹೆಂಡ್ತಿ ಬೇಕು’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ.

ನಿರ್ದೇಶಕ ಕೆ. ಶಂಕರ್ ಅವರು ಈ ಮೊದಲು ‘ಆ್ಯಕ್ಟ್ 370’ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳಿದ್ದರು. ಆ ಸಿನಿಮಾದಲ್ಲಿ ದೇಶಭಕ್ತಿಯ ಕಥೆ ಇತ್ತು. ಆದರೆ ಈಗ ಸಂಪೂರ್ಣ ಕಾಮಿಡಿ ಕಥಾಹಂದರದ ಸಿನಿಮಾವನ್ನು ಅವರು ಜನರ ಎದುರು ತರುತ್ತಿದ್ದಾರೆ. ‘ಲೈರಾ ಎಂಟರ್​ಟೇನ್​ಮೆಂಟ್​ ಆ್ಯಂಡ್​ ಮೀಡಿಯಾ’ ಸಂಸ್ಥೆ ಮೂಲಕ ಭರತ್ ಗೌಡ ಹಾಗೂ ಸಿ .ರಮೇಶ್ ಅವರು ಒಟ್ಟಾಗಿ ‘ನನಗೂ ಹೆಂಡ್ತಿ ಬೇಕು’ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಟೈಟಲ್​ ಕಾರಣದಿಂದಲೇ ಈ ಚಿತ್ರ ನಿರೀಕ್ಷೆ ಸೃಷ್ಟಿ ಮಾಡಿದೆ.

ಇದನ್ನೂ ಓದಿ: ಓಶೋ ಧ್ಯಾನ ಶಿಬಿರದಲ್ಲಿ ನೃತ್ಯ ಮಾಡಿ ಎಲ್ಲರ ಗಮನ ಸೆಳೆದ ಚೈತ್ರಾ ಕೋಟೂರ್

‘ನನಗೂ ಹೆಂಡ್ತಿ ಬೇಕು’ ಸಿನಿಮಾದ ಒನ್​ಲೈನ್​ ಕಥೆ ಏನು? ಅಂಧ ವ್ಯಕ್ತಿಯೊಬ್ಬನು ಮದುವೆ ಆಗಲು ಹೊರಟಾಗ ಏನೆಲ್ಲ ಪ್ರಸಂಗಗಳು ನಡೆಯುತ್ತವೆ ಎಂಬುದೇ ಈ ಸಿನಿಮಾದ ಕಹಾನಿ. ಇಡೀ ಚಿತ್ರ ಹಾಸ್ಯಮಯವಾಗಿ ಮೂಡಿಬರಲಿದೆ. ಇಡೀ ಸಿನಿಮಾದ ಶೂಟಿಂಗ್​ ಚಿತ್ರದುರ್ಗದಲ್ಲಿ ನಡೆಯಲಿದೆ. ಈಗ ಕ್ಲೈಮ್ಯಾಕ್ಸ್​ ದೃಶ್ಯದ ಶೂಟಿಂಗ್​ ಮಾಡಲಾಗುತ್ತಿದೆ. ನಿರ್ದೇಶಕ ಕೆ. ಶಂಕರ್​ ಅವರೇ ಈ ಸಿನಿಮಾಗೆ ಕಥೆ ಮತ್ತು ಚಿತ್ರಕಥೆ ಬರೆದಿದ್ದಾರೆ. ಈ ಸಿನಿಮಾದಲ್ಲಿ 2 ಫೈಟ್​ ಮತ್ತು 2 ಹಾಡು ಇರಲಿವೆ. ಕೆ.ಎಂ. ಇಂದ್ರ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.

ಇದನ್ನೂ ಓದಿ: ನಾನು ಯಾರನ್ನೂ ದ್ವೇಷಿಸುತ್ತಿಲ್ಲ, ಪ್ರೀತಿನೂ ಮಾಡಲ್ಲ​; ಚೈತ್ರಾ ಕೋಟೂರ್​

ಮೊದಲೇ ಹೇಳಿದಂತೆ ಮದುವೆಯಾಗಲು ವಧು ಸಿಗದೇ ಒದ್ದಾಡುವ ಅಂಧ ವ್ಯಕ್ತಿಯ ಪಾತ್ರವನ್ನು ತಬಲಾ ನಾಣಿ ಅವರು ಮಾಡುತ್ತಿದ್ದಾರೆ. ಹಾಗೆಯೇ ನಟಿ ಚೈತ್ರಾ ಕೋಟೂರ್ ಅವರಿಗೂ ವಿಶೇಷವಾದ ಪಾತ್ರವಿದೆ. ಮಾತು ಬಾರದ ಹುಡುಗಿಯಾಗಿ ಅವರು ಕಾಣಿಸಿಕೊಳ್ಳಲಿದ್ದಾರೆ. ತಬಲ ನಾಣಿ ಎದುರು ನೆಗೆಟಿವ್​ ಪಾತ್ರದಲ್ಲಿ ಬ್ಯಾಂಕ್ ಜನಾರ್ಧನ್ ಹಾಗೂ ಬಾಲು ನಟಿಸುತ್ತಿದ್ದಾರೆ. ಶೃತಿ, ಕಿಲ್ಲರ್ ವೆಂಕಟೇಶ್, ರಾಜ್ ಬಾಲ, ದೊಡ್ಡ ರಂಗೇಗೌಡ, ಗಣೇಶ್ ರಾವ್, ರಮೇಶ್ ಭಟ್, ಧರ್ಮ, ಗಾನವಿ, ಕೆಜಿಎಫ್ ಕೃಷ್ಣಪ್ಪ, ಪ್ರಿಯಾಂಕಾ ಮುಂತಾದ ಕಲಾವಿದರು ಈ ಚಿತ್ರದ ಪಾತ್ರವರ್ಗದಲ್ಲಿ ಇದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:43 pm, Mon, 24 July 23

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ