Tabla Nani: ‘ನನಗೂ ಹೆಂಡ್ತಿ ಬೇಕು’ ಎನ್ನುತ್ತಾರೆ ತಬಲಾ ನಾಣಿ; ಆದರೆ ಮಾತೇ ಆಡೋದಿಲ್ಲ ಚೈತ್ರಾ ಕೋಟೂರ್​

Chaitra Kotoor: ನಿರ್ದೇಶಕ ಕೆ. ಶಂಕರ್ ಅವರು ಸಂಪೂರ್ಣ ಕಾಮಿಡಿ ಕಥಾಹಂದರದ ಸಿನಿಮಾವನ್ನು ಜನರ ಎದುರು ತರುತ್ತಿದ್ದಾರೆ. ಇದರಲ್ಲಿ ತಬಲಾ ನಾಣಿ ಮತ್ತು ಚೈತ್ರಾ ಕೋಟೂರ್​ ಗಮನ ಸೆಳೆಯಲಿದ್ದಾರೆ.

Tabla Nani: ‘ನನಗೂ ಹೆಂಡ್ತಿ ಬೇಕು’ ಎನ್ನುತ್ತಾರೆ ತಬಲಾ ನಾಣಿ; ಆದರೆ ಮಾತೇ ಆಡೋದಿಲ್ಲ ಚೈತ್ರಾ ಕೋಟೂರ್​
ಚೈತ್ರಾ ಕೋಟೂರ್​, ತಬಲಾ ನಾಣಿ
Follow us
|

Updated on:Jul 24, 2023 | 4:27 PM

ಕನ್ನಡದ ಖ್ಯಾತ ನಟ ತಬಲಾ ನಾಣಿ (Tabla Nani) ಅವರ ಅಭಿನಯಕ್ಕೆ ಫ್ಯಾನ್ಸ್​ ಫಿದಾ ಆಗಿದ್ದಾರೆ. ಹಲವಾರು ಸಿನಿಮಾಗಳಲ್ಲಿ ನಟಿಸಿರುವ ಅವರು ಸ್ಯಾಂಡಲ್​ವುಡ್​ನಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ‘ಎದ್ದೇಳು ಮಂಜುನಾಥ’ ಸಿನಿಮಾದಲ್ಲಿ ಅವರು ಅಂಧನ ಪಾತ್ರ ಮಾಡಿ ಸೈ ಎನಿಸಿಕೊಂಡಿದ್ದರು. ಈಗ ಅದೇ ರೀತಿ ಮತ್ತೊಂದು ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಈ ಹೊಸ ಸಿನಿಮಾದಲ್ಲೂ ಅವರು ಕಣ್ಣು ಕಾಣದ ವ್ಯಕ್ತಿಯಾಗಿ ನಟಿಸುತ್ತಿದ್ದಾರೆ. ‘ನನಗೂ ಹೆಂಡ್ತಿ ಬೇಕು’ (Nanagu Hendthi Beku) ಎಂಬುದು ಈ ಸಿನಿಮಾದ ಹೆಸರು. ಈ ಚಿತ್ರದಲ್ಲಿ ವಿಶೇಷ ಕಥಾಹಂದರ ಇರಲಿದೆ. ಬಿಗ್​ ಬಾಸ್​ ಖ್ಯಾತಿಯ ನಟಿ ಚೈತ್ರಾ ಕೋಟೂರ್​ (Chaitra Kotoor) ಅವರು ‘ನನಗೂ ಹೆಂಡ್ತಿ ಬೇಕು’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ.

ನಿರ್ದೇಶಕ ಕೆ. ಶಂಕರ್ ಅವರು ಈ ಮೊದಲು ‘ಆ್ಯಕ್ಟ್ 370’ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳಿದ್ದರು. ಆ ಸಿನಿಮಾದಲ್ಲಿ ದೇಶಭಕ್ತಿಯ ಕಥೆ ಇತ್ತು. ಆದರೆ ಈಗ ಸಂಪೂರ್ಣ ಕಾಮಿಡಿ ಕಥಾಹಂದರದ ಸಿನಿಮಾವನ್ನು ಅವರು ಜನರ ಎದುರು ತರುತ್ತಿದ್ದಾರೆ. ‘ಲೈರಾ ಎಂಟರ್​ಟೇನ್​ಮೆಂಟ್​ ಆ್ಯಂಡ್​ ಮೀಡಿಯಾ’ ಸಂಸ್ಥೆ ಮೂಲಕ ಭರತ್ ಗೌಡ ಹಾಗೂ ಸಿ .ರಮೇಶ್ ಅವರು ಒಟ್ಟಾಗಿ ‘ನನಗೂ ಹೆಂಡ್ತಿ ಬೇಕು’ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಟೈಟಲ್​ ಕಾರಣದಿಂದಲೇ ಈ ಚಿತ್ರ ನಿರೀಕ್ಷೆ ಸೃಷ್ಟಿ ಮಾಡಿದೆ.

ಇದನ್ನೂ ಓದಿ: ಓಶೋ ಧ್ಯಾನ ಶಿಬಿರದಲ್ಲಿ ನೃತ್ಯ ಮಾಡಿ ಎಲ್ಲರ ಗಮನ ಸೆಳೆದ ಚೈತ್ರಾ ಕೋಟೂರ್

‘ನನಗೂ ಹೆಂಡ್ತಿ ಬೇಕು’ ಸಿನಿಮಾದ ಒನ್​ಲೈನ್​ ಕಥೆ ಏನು? ಅಂಧ ವ್ಯಕ್ತಿಯೊಬ್ಬನು ಮದುವೆ ಆಗಲು ಹೊರಟಾಗ ಏನೆಲ್ಲ ಪ್ರಸಂಗಗಳು ನಡೆಯುತ್ತವೆ ಎಂಬುದೇ ಈ ಸಿನಿಮಾದ ಕಹಾನಿ. ಇಡೀ ಚಿತ್ರ ಹಾಸ್ಯಮಯವಾಗಿ ಮೂಡಿಬರಲಿದೆ. ಇಡೀ ಸಿನಿಮಾದ ಶೂಟಿಂಗ್​ ಚಿತ್ರದುರ್ಗದಲ್ಲಿ ನಡೆಯಲಿದೆ. ಈಗ ಕ್ಲೈಮ್ಯಾಕ್ಸ್​ ದೃಶ್ಯದ ಶೂಟಿಂಗ್​ ಮಾಡಲಾಗುತ್ತಿದೆ. ನಿರ್ದೇಶಕ ಕೆ. ಶಂಕರ್​ ಅವರೇ ಈ ಸಿನಿಮಾಗೆ ಕಥೆ ಮತ್ತು ಚಿತ್ರಕಥೆ ಬರೆದಿದ್ದಾರೆ. ಈ ಸಿನಿಮಾದಲ್ಲಿ 2 ಫೈಟ್​ ಮತ್ತು 2 ಹಾಡು ಇರಲಿವೆ. ಕೆ.ಎಂ. ಇಂದ್ರ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.

ಇದನ್ನೂ ಓದಿ: ನಾನು ಯಾರನ್ನೂ ದ್ವೇಷಿಸುತ್ತಿಲ್ಲ, ಪ್ರೀತಿನೂ ಮಾಡಲ್ಲ​; ಚೈತ್ರಾ ಕೋಟೂರ್​

ಮೊದಲೇ ಹೇಳಿದಂತೆ ಮದುವೆಯಾಗಲು ವಧು ಸಿಗದೇ ಒದ್ದಾಡುವ ಅಂಧ ವ್ಯಕ್ತಿಯ ಪಾತ್ರವನ್ನು ತಬಲಾ ನಾಣಿ ಅವರು ಮಾಡುತ್ತಿದ್ದಾರೆ. ಹಾಗೆಯೇ ನಟಿ ಚೈತ್ರಾ ಕೋಟೂರ್ ಅವರಿಗೂ ವಿಶೇಷವಾದ ಪಾತ್ರವಿದೆ. ಮಾತು ಬಾರದ ಹುಡುಗಿಯಾಗಿ ಅವರು ಕಾಣಿಸಿಕೊಳ್ಳಲಿದ್ದಾರೆ. ತಬಲ ನಾಣಿ ಎದುರು ನೆಗೆಟಿವ್​ ಪಾತ್ರದಲ್ಲಿ ಬ್ಯಾಂಕ್ ಜನಾರ್ಧನ್ ಹಾಗೂ ಬಾಲು ನಟಿಸುತ್ತಿದ್ದಾರೆ. ಶೃತಿ, ಕಿಲ್ಲರ್ ವೆಂಕಟೇಶ್, ರಾಜ್ ಬಾಲ, ದೊಡ್ಡ ರಂಗೇಗೌಡ, ಗಣೇಶ್ ರಾವ್, ರಮೇಶ್ ಭಟ್, ಧರ್ಮ, ಗಾನವಿ, ಕೆಜಿಎಫ್ ಕೃಷ್ಣಪ್ಪ, ಪ್ರಿಯಾಂಕಾ ಮುಂತಾದ ಕಲಾವಿದರು ಈ ಚಿತ್ರದ ಪಾತ್ರವರ್ಗದಲ್ಲಿ ಇದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:43 pm, Mon, 24 July 23

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು