AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವ, ಚಿಟ್ಟೆ ಮತ್ತು ಡಾಲಿ: ಮತ್ತೆ ಒಂದಾದ ‘ಟಗರು’ ಕಾಂಬಿನೇಷನ್

ಧನಂಜಯ ಹಾಗೂ ವಸಿಷ್ಠ ಸಿಂಹ ತೆರೆಮೇಲೆ ಮಾತ್ರವಲ್ಲ, ತೆರೆ ಹಿಂದೆಯೂ ಗೆಳೆಯರು. ಇವರಿಬ್ಬರಿಗೂ ಶಿವಣ್ಣ ನೆಚ್ಚಿನ ಹೀರೋ. ಈಗ ಇವರು ಮತ್ತೆ ಒಂದಾಗಲು ಸಮಯ ಕೂಡಿ ಬಂದಿದೆ.

ಶಿವ, ಚಿಟ್ಟೆ ಮತ್ತು ಡಾಲಿ: ಮತ್ತೆ ಒಂದಾದ ‘ಟಗರು’ ಕಾಂಬಿನೇಷನ್
ಶಿವ, ಚಿಟ್ಟೆ ಮತ್ತು ಡಾಲಿ: ಮತ್ತೆ ಒಂದಾದ ‘ಟಗರು’ ಕಾಂಬಿನೇಷನ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jun 20, 2022 | 9:53 PM

ಶಿವರಾಜ್​ಕುಮಾರ್ (Shivarajkumar) ನಟನೆಯ ‘ಟಗರು’ ಸಿನಿಮಾ (Tagaru Movie) ಸ್ಯಾಂಡಲ್​ವುಡ್​ನಲ್ಲಿ ಮಾಡಿದ ಮೋಡಿ ತುಂಬಾನೇ ದೊಡ್ಡದು. ಶಿವರಾಜ್​ಕುಮಾರ್ ಅವರು ಶಿವ ಹೆಸರಿನ ಖಡಕ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡರೆ, ಧನಂಜಯ ಹಾಗೂ ವಸಿಷ್ಠ ಸಿಂಹ ವಿಲನ್ ಪಾತ್ರಗಳಲ್ಲಿ ಮಿಂಚಿದರು. ಈ ಚಿತ್ರದ ಮೂಲಕ ಡಾಲಿ ಎಂದು ಫೇಮಸ್ ಆದರು ಧನಂಜಯ (Dhananjay). ವಸಿಷ್ಠ ಸಿಂಹ ಚಿಟ್ಟೆ ಎಂದು ಗುರುತಿಸಿಕೊಂಡರು. ಈಗ ಈ ಮೂವರು ಮತ್ತೆ ಒಂದಾಗಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

ಧನಂಜಯ ಹಾಗೂ ವಸಿಷ್ಠ ಸಿಂಹ ತೆರೆಮೇಲೆ ಮಾತ್ರವಲ್ಲ, ತೆರೆ ಹಿಂದೆಯೂ ಗೆಳೆಯರು. ಇವರಿಬ್ಬರಿಗೂ ಶಿವಣ್ಣ ನೆಚ್ಚಿನ ಹೀರೋ. ಈಗ ಇವರು ಮತ್ತೆ ಒಂದಾಗಲು ಸಮಯ ಕೂಡಿ ಬಂದಿದೆ. ಹಾಗಂತ ಈ ಮೂವರು ಒಟ್ಟಾಗಿ ನಟಿಸುತ್ತಿಲ್ಲ. ಬದಲಿಗೆ ಶಿವರಾಜ್​ಕುಮಾರ್​-ಧನಂಜಯ ನಟನೆಯ ‘ಬೈರಾಗಿ’ ಸಿನಿಮಾಗೆ ವಸಿಷ್ಠ ಸಿಂಹ ಹಾಡೊಂದನ್ನು ಹಾಡಿದ್ದಾರೆ. ಈ ಬಗ್ಗೆ ಚಿತ್ರತಂಡ ಅಪ್​ಡೇಟ್ ನೀಡಿದೆ.

ಶಿವರಾಜ್​ಕುಮಾರ್ ಅವರು ಜುಲೈ 12ರಂದು ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. 11 ದಿನ ಮೊದಲು ಅಂದರೆ ಜುಲೈ 1ರಂದು ಸಿನಿಮಾ ತೆರೆಗೆ ಬರುತ್ತಿದೆ. ಶಿವಣ್ಣ ಫ್ಯಾನ್ಸ್​ಗೆ ಇದು ಅಡ್ವಾನ್ಸ್​ ಬರ್ತ್​ಡೇ ಗಿಫ್ಟ್​ ಎಂದರೂ ತಪ್ಪಾಗಲಾರದು.

ಇದನ್ನೂ ಓದಿ
Image
ಜುಲೈ 1ಕ್ಕೆ ‘ಬೈರಾಗಿ’ ರಿಲೀಸ್​; ದೊಡ್ಡ ಮೊತ್ತಕ್ಕೆ ಸೇಲ್ ಆಯ್ತು ಶಿವಣ್ಣ ಸಿನಿಮಾದ ಟಿವಿ​ ರೈಟ್ಸ್​
Image
ರವಿಚಂದ್ರನ್​ ಜನ್ಮದಿನ: ಪುತ್ರನ ‘ತ್ರಿವಿಕ್ರಮ’ ಚಿತ್ರದಿಂದ ಬಂತು ವಿಡಿಯೋ ಸಾಂಗ್​​; ಸಾಥ್​ ನೀಡಿದ ಶಿವಣ್ಣ
Image
Yogaraj Bhat: ಶಿವಣ್ಣ- ಪ್ರಭುದೇವ ಕಾಂಬಿನೇಷನ್​ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿರುವ ಯೋಗರಾಜ್ ಭಟ್; ಚಿತ್ರೀಕರಣ ಯಾವಾಗ?
Image
ಸೂಪರ್​ ಹೀರೋ ಆಗ್ತಾರೆ ಶಿವಣ್ಣ; ಹೊಸ ಚಿತ್ರಕ್ಕೆ ‘ಅವನೇ ಶ್ರೀಮನ್ನಾರಾಯಣ’ ಖ್ಯಾತಿಯ ಸಚಿನ್​ ನಿರ್ದೇಶನ

‘ಬೈರಾಗಿ’ ಚಿತ್ರದ ಟಿವಿ ಹಕ್ಕು ಈಗಾಗಲೇ ಮಾರಾಟವಾಗಿದೆ. ಸಿನಿಮಾ ರಿಲೀಸ್​ಗೂ ಮೊದಲೇ ನಿರ್ಮಾಪಕರು ಸೇಫ್ ಆಗಿದ್ದಾರೆ. ಈ ಬಗ್ಗೆ ನಿರ್ಮಾಪಕರು ಮಾಹಿತಿ ಹಂಚಿಕೊಂಡಿದ್ದರು. ಟಿವಿ ಹಕ್ಕು 10‌ ಕೋಟಿ ರೂಪಾಯಿಗೂ ಹೆಚ್ಚಿನ ಮೊತ್ತಕ್ಕೆ ಸೇಲ್ ಆಗಿರುವ ಬಗ್ಗೆ ಮಾಹಿತಿ ನೀಡಿದ್ದರು.

ಇದು ಶಿವರಾಜ್​ಕುಮಾರ್​ ನಟನೆಯ 123ನೇ ಸಿನಿಮಾ. ಇದರಲ್ಲಿ ಅವರು ಡಿಫರೆಂಟ್​ ಗೆಟಪ್​ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹುಲಿ ವೇಷದಲ್ಲಿ ಅಭಿಮಾನಿಗಳಿಗೆ ಮಸ್ತ್​ ಮನರಂಜನೆ ನೀಡಲಿದ್ದಾರೆ. ಅಂಜಲಿ, ಯಶ ಶಿವಕುಮಾರ್​, ಶಶಿ ಕುಮಾರ್​ ಕೂಡ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.  ಕೃಷ್ಣ ಸಾರ್ಥಕ್​ ಅವರು ಬಂಡವಾಳ ಹೂಡಿದ್ದಾರೆ. ಅನೂಪ್​ ಸೀಳಿನ್​ ಸಂಗೀತ ನಿರ್ದೇಶನ, ದೀಪು ಎಸ್​. ಕುಮಾರ್​ ಸಂಕಲನದಲ್ಲಿ ಈ ಸಿನಿಮಾ ತಯಾರಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:35 pm, Mon, 20 June 22

ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!