AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವ, ಚಿಟ್ಟೆ ಮತ್ತು ಡಾಲಿ: ಮತ್ತೆ ಒಂದಾದ ‘ಟಗರು’ ಕಾಂಬಿನೇಷನ್

ಧನಂಜಯ ಹಾಗೂ ವಸಿಷ್ಠ ಸಿಂಹ ತೆರೆಮೇಲೆ ಮಾತ್ರವಲ್ಲ, ತೆರೆ ಹಿಂದೆಯೂ ಗೆಳೆಯರು. ಇವರಿಬ್ಬರಿಗೂ ಶಿವಣ್ಣ ನೆಚ್ಚಿನ ಹೀರೋ. ಈಗ ಇವರು ಮತ್ತೆ ಒಂದಾಗಲು ಸಮಯ ಕೂಡಿ ಬಂದಿದೆ.

ಶಿವ, ಚಿಟ್ಟೆ ಮತ್ತು ಡಾಲಿ: ಮತ್ತೆ ಒಂದಾದ ‘ಟಗರು’ ಕಾಂಬಿನೇಷನ್
ಶಿವ, ಚಿಟ್ಟೆ ಮತ್ತು ಡಾಲಿ: ಮತ್ತೆ ಒಂದಾದ ‘ಟಗರು’ ಕಾಂಬಿನೇಷನ್
TV9 Web
| Edited By: |

Updated on:Jun 20, 2022 | 9:53 PM

Share

ಶಿವರಾಜ್​ಕುಮಾರ್ (Shivarajkumar) ನಟನೆಯ ‘ಟಗರು’ ಸಿನಿಮಾ (Tagaru Movie) ಸ್ಯಾಂಡಲ್​ವುಡ್​ನಲ್ಲಿ ಮಾಡಿದ ಮೋಡಿ ತುಂಬಾನೇ ದೊಡ್ಡದು. ಶಿವರಾಜ್​ಕುಮಾರ್ ಅವರು ಶಿವ ಹೆಸರಿನ ಖಡಕ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡರೆ, ಧನಂಜಯ ಹಾಗೂ ವಸಿಷ್ಠ ಸಿಂಹ ವಿಲನ್ ಪಾತ್ರಗಳಲ್ಲಿ ಮಿಂಚಿದರು. ಈ ಚಿತ್ರದ ಮೂಲಕ ಡಾಲಿ ಎಂದು ಫೇಮಸ್ ಆದರು ಧನಂಜಯ (Dhananjay). ವಸಿಷ್ಠ ಸಿಂಹ ಚಿಟ್ಟೆ ಎಂದು ಗುರುತಿಸಿಕೊಂಡರು. ಈಗ ಈ ಮೂವರು ಮತ್ತೆ ಒಂದಾಗಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

ಧನಂಜಯ ಹಾಗೂ ವಸಿಷ್ಠ ಸಿಂಹ ತೆರೆಮೇಲೆ ಮಾತ್ರವಲ್ಲ, ತೆರೆ ಹಿಂದೆಯೂ ಗೆಳೆಯರು. ಇವರಿಬ್ಬರಿಗೂ ಶಿವಣ್ಣ ನೆಚ್ಚಿನ ಹೀರೋ. ಈಗ ಇವರು ಮತ್ತೆ ಒಂದಾಗಲು ಸಮಯ ಕೂಡಿ ಬಂದಿದೆ. ಹಾಗಂತ ಈ ಮೂವರು ಒಟ್ಟಾಗಿ ನಟಿಸುತ್ತಿಲ್ಲ. ಬದಲಿಗೆ ಶಿವರಾಜ್​ಕುಮಾರ್​-ಧನಂಜಯ ನಟನೆಯ ‘ಬೈರಾಗಿ’ ಸಿನಿಮಾಗೆ ವಸಿಷ್ಠ ಸಿಂಹ ಹಾಡೊಂದನ್ನು ಹಾಡಿದ್ದಾರೆ. ಈ ಬಗ್ಗೆ ಚಿತ್ರತಂಡ ಅಪ್​ಡೇಟ್ ನೀಡಿದೆ.

ಶಿವರಾಜ್​ಕುಮಾರ್ ಅವರು ಜುಲೈ 12ರಂದು ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. 11 ದಿನ ಮೊದಲು ಅಂದರೆ ಜುಲೈ 1ರಂದು ಸಿನಿಮಾ ತೆರೆಗೆ ಬರುತ್ತಿದೆ. ಶಿವಣ್ಣ ಫ್ಯಾನ್ಸ್​ಗೆ ಇದು ಅಡ್ವಾನ್ಸ್​ ಬರ್ತ್​ಡೇ ಗಿಫ್ಟ್​ ಎಂದರೂ ತಪ್ಪಾಗಲಾರದು.

ಇದನ್ನೂ ಓದಿ
Image
ಜುಲೈ 1ಕ್ಕೆ ‘ಬೈರಾಗಿ’ ರಿಲೀಸ್​; ದೊಡ್ಡ ಮೊತ್ತಕ್ಕೆ ಸೇಲ್ ಆಯ್ತು ಶಿವಣ್ಣ ಸಿನಿಮಾದ ಟಿವಿ​ ರೈಟ್ಸ್​
Image
ರವಿಚಂದ್ರನ್​ ಜನ್ಮದಿನ: ಪುತ್ರನ ‘ತ್ರಿವಿಕ್ರಮ’ ಚಿತ್ರದಿಂದ ಬಂತು ವಿಡಿಯೋ ಸಾಂಗ್​​; ಸಾಥ್​ ನೀಡಿದ ಶಿವಣ್ಣ
Image
Yogaraj Bhat: ಶಿವಣ್ಣ- ಪ್ರಭುದೇವ ಕಾಂಬಿನೇಷನ್​ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿರುವ ಯೋಗರಾಜ್ ಭಟ್; ಚಿತ್ರೀಕರಣ ಯಾವಾಗ?
Image
ಸೂಪರ್​ ಹೀರೋ ಆಗ್ತಾರೆ ಶಿವಣ್ಣ; ಹೊಸ ಚಿತ್ರಕ್ಕೆ ‘ಅವನೇ ಶ್ರೀಮನ್ನಾರಾಯಣ’ ಖ್ಯಾತಿಯ ಸಚಿನ್​ ನಿರ್ದೇಶನ

‘ಬೈರಾಗಿ’ ಚಿತ್ರದ ಟಿವಿ ಹಕ್ಕು ಈಗಾಗಲೇ ಮಾರಾಟವಾಗಿದೆ. ಸಿನಿಮಾ ರಿಲೀಸ್​ಗೂ ಮೊದಲೇ ನಿರ್ಮಾಪಕರು ಸೇಫ್ ಆಗಿದ್ದಾರೆ. ಈ ಬಗ್ಗೆ ನಿರ್ಮಾಪಕರು ಮಾಹಿತಿ ಹಂಚಿಕೊಂಡಿದ್ದರು. ಟಿವಿ ಹಕ್ಕು 10‌ ಕೋಟಿ ರೂಪಾಯಿಗೂ ಹೆಚ್ಚಿನ ಮೊತ್ತಕ್ಕೆ ಸೇಲ್ ಆಗಿರುವ ಬಗ್ಗೆ ಮಾಹಿತಿ ನೀಡಿದ್ದರು.

ಇದು ಶಿವರಾಜ್​ಕುಮಾರ್​ ನಟನೆಯ 123ನೇ ಸಿನಿಮಾ. ಇದರಲ್ಲಿ ಅವರು ಡಿಫರೆಂಟ್​ ಗೆಟಪ್​ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹುಲಿ ವೇಷದಲ್ಲಿ ಅಭಿಮಾನಿಗಳಿಗೆ ಮಸ್ತ್​ ಮನರಂಜನೆ ನೀಡಲಿದ್ದಾರೆ. ಅಂಜಲಿ, ಯಶ ಶಿವಕುಮಾರ್​, ಶಶಿ ಕುಮಾರ್​ ಕೂಡ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.  ಕೃಷ್ಣ ಸಾರ್ಥಕ್​ ಅವರು ಬಂಡವಾಳ ಹೂಡಿದ್ದಾರೆ. ಅನೂಪ್​ ಸೀಳಿನ್​ ಸಂಗೀತ ನಿರ್ದೇಶನ, ದೀಪು ಎಸ್​. ಕುಮಾರ್​ ಸಂಕಲನದಲ್ಲಿ ಈ ಸಿನಿಮಾ ತಯಾರಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:35 pm, Mon, 20 June 22

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ