AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಗರು ಪಲ್ಯ’ ಹೀರೋ ನಾಗಭೂಷಣ ಈಗ ‘ವಿದ್ಯಾಪತಿ’; ಡಾಲಿ ಧನಂಜಯ ನಿರ್ಮಾಣ

‘ಟಗರು ಪಲ್ಯ’ ಸಿನಿಮಾದ ನಟ ನಾಗಭೂಷಣ ಹಾಗೂ ನಿರ್ಮಾಪಕ ಡಾಲಿ ಧನಂಜಯ ಅವರ ಕಾಂಬಿನೇಷನ್​ನಲ್ಲಿ ಹೊಸ ಸಿನಿಮಾ ‘ವಿದ್ಯಾಪತಿ’ ಮೂಡಿಬರುತ್ತಿದೆ. ಈ ಸಿನಿಮಾದಲ್ಲಿ ನಾಗಭೂಷಣ ಅವರಿಗೆ ಮಲೈಕಾ ವಸೂಪಾಲ್ ಜೋಡಿಯಾಗಿದ್ದಾರೆ. ಚಿತ್ರದ ಪ್ರೋಮೋ ಗಮನ ಸೆಳೆಯುತ್ತಿದೆ. ಇದು ಕೂಡ ಕಾಮಿಡಿ ಸಿನಿಮಾ ಆಗಿರಲಿದ್ದು, ಒಂದಷ್ಟು ಮಾಹಿತಿ ಇಲ್ಲಿದೆ..

‘ಟಗರು ಪಲ್ಯ’ ಹೀರೋ ನಾಗಭೂಷಣ ಈಗ ‘ವಿದ್ಯಾಪತಿ’; ಡಾಲಿ ಧನಂಜಯ ನಿರ್ಮಾಣ
ನಾಗಭೂಷಣ
ಮದನ್​ ಕುಮಾರ್​
|

Updated on:Aug 20, 2024 | 8:44 PM

Share

ನಟ ನಾಗಭೂಷಣ ಅವರು ಕಾಮಿಡಿ ಪಾತ್ರಗಳ ಮೂಲಕ ಜನರನ್ನು ರಂಜಿಸುತ್ತಿದ್ದಾರೆ. ಮುಖ್ಯ ಭೂಮಿಕೆಯಲ್ಲಿ ನಟಿಸುವ ಮೂಲಕವೂ ಅವರು ಸೈ ಎನಿಸಿಕೊಂಡಿದ್ದಾರೆ. ಈಗಾಗಲೇ ಅವರು ತಮ್ಮ ಛಾಪು ಮೂಡಿಸಿದ್ದಾರೆ. ‘ಡಾಲಿ ಪಿಕ್ಚರ್ಸ್’ ನಿರ್ಮಾಣ ಮಾಡಿದ್ದ ‘ಟಗರು ಪಲ್ಯ’ ಸಿನಿಮಾದಲ್ಲಿ ನಾಗಭೂಷಣ್​ ಅವರು ಹೀರೋ ಆಗಿ ಮನರಂಜನೆ ನೀಡಿದ್ದರು. ಈಗ ಮತ್ತೆ ಅವರು ‘ಡಾಲಿ ಪಿಕ್ಚರ್ಸ್​’ ಜೊತೆ ಕೈ ಜೋಡಿಸಿದ್ದಾರೆ. ಹೌದು, ಡಾಲಿ ಧನಂಜಯ ನಿರ್ಮಾಣ ಮಾಡಲಿರುವ ಹೊಸ ಸಿನಿಮಾದಲ್ಲಿ ನಾಗಭೂಷಣ ಅವರು ಹೀರೋ ಆಗಿದ್ದಾರೆ. ಈ ಸಿನಿಮಾಗೆ ‘ವಿದ್ಯಾಪತಿ’ ಎಂದು ಶೀರ್ಷಿಕೆ ಇಡಲಾಗಿದೆ.

2023ರಲ್ಲಿ ‘ಟಗರು ಪಲ್ಯ’ ಚಿತ್ರವು ಫ್ಯಾಮಿಲಿ ಪ್ರೇಕ್ಷಕರಿಗೆ ಮನರಂಜನೆ ನೀಡಿತ್ತು. ಈಗ ‘ವಿದ್ಯಾಪತಿ’ ಸಿನಿಮಾದಲ್ಲಿ ಬೇರೊಂದು ಬಗೆಯ ಪಾತ್ರದ ಮೂಲಕ ನಾಗಭೂಷಣ ಅವರು ಜನರನ್ನು ರಂಜಿಸಲು ಸಜ್ಜಾಗಿದ್ದಾರೆ. ವಿದ್ಯಾಪತಿಯ ಮೇಕಿಂಗ್ ವಿಡಿಯೋ, ಫೋಟೋಗಳನ್ನು ನೋಡಿ ಸಿನಿಪ್ರಿಯರಿಗೆ ಕೌತುಕ ಮೂಡಿದೆ. ಈ ಸಿನಿಮಾದ ಹೊಸ ಪೋಸ್ಟರ್​ ಮತ್ತು ಪ್ರೋಮೋ ಬಿಡುಗಡೆ ಮಾಡುವ ಮೂಲಕ ನಿರೀಕ್ಷೆ ಹೆಚ್ಚಿಸಲಾಗಿದೆ. ಈ ಸಿನಿಮಾದಲ್ಲಿ ನಾಗಭೂಷಣ ಅವರಿಗೆ ಜೋಡಿಯಾಗಿ ‘ಉಪಾಧ್ಯಕ್ಷ’ ಖ್ಯಾತಿಯ ನಟಿ ಮಲೈಕಾ ವಸೂಪಾಲ್ ಅಭಿನಯಿಸಲಿದ್ದಾರೆ. ರಂಗಾಯಣ ರಘು ಅವರಿಗೂ ಒಂದು ಪ್ರಮುಖ ಪಾತ್ರವಿದೆ. ಶೂಟಿಂಗ್ ಪ್ರಗತಿಯಲ್ಲಿದೆ.

ಇತ್ತೀಚೆಗೆ ನಾಗಭೂಷಣ್ ಅವರು ಹುಟ್ಟುಹಬ್ಬ ಆಚರಿಸಿಕೊಂಡರು. ಆ ಪ್ರಯುಕ್ತ ‘ವಿದ್ಯಾಪತಿ’ ಸಿನಿಮಾದ ಪ್ರೋಮೋ ಅನಾವರಣ ಮಾಡಲಾಯಿತು. ‘ಜೇಬು ತುಂಬ ಕಾಸಿರೋನು ಕೊಟ್ಯಾಧಿಪತಿ, ನಿಮ್ಮನ್ನೆಲ್ಲ ಹೊಟ್ಟೆ ತುಂಬ ನಗಿಸುವವನೇ ನಮ್ಮ ವಿದ್ಯಾಪತಿ’ ಎಂದು ಹೀರೋ ಪಾತ್ರವನ್ನು ಪರಿಚಯಿಸಲಾಗಿದೆ. ‘ಕರಾಟೆ ಕಿಂಗ್’ ವೇಷ ಧರಿಸಿರುವ ನಾಗಭೂಷಣ ಅವರು ಮಾಡುವ ಕಿತಾಪತಿ ಏನು ಎಂಬುದರ ಝಲಕ್​ ತೋರಿಸುವ ತುಣುಕು ಇದಾಗಿದೆ.

ಇದನ್ನೂ ಓದಿ: ಕೆಂಪೇಗೌಡ ಪಾತ್ರದಲ್ಲಿ ಡಾಲಿ ಧನಂಜಯ್, ನಾಗಾಭರಣ ನಿರ್ದೇಶಕ

ಕರಾಟೆ ಕಲಿಯುವ ಸಮಯದಲ್ಲಿ ‘ವಿದ್ಯಾಪತಿ’ ಮಾಡುವ ಯಡವಟ್ಟು ಕಂಡು ಪ್ರೇಕ್ಷಕರಿಗೆ ನಗು ಮೂಡಿದೆ. ‘ಇಕ್ಕಟ್’ ಸಿನಿಮಾದ ನಿರ್ದೇಶಕರಾದ ಇಶಾಂ ಮತ್ತು ಹಸೀಂ ಖಾನ್ ಅವರು ಈಗ ‘ವಿದ್ಯಾಪತಿ’ ಸಿನಿಮಾವನ್ನು ನಿರ್ದೇಶಿಸಿದ್ದಾರೆ. ಜೊತೆಗೆ ಸಿನಿಮಾಗೆ ಅವರೇ ಸಂಕಲನ ಮಾಡುತ್ತಿದ್ದಾರೆ. ನಾಗಭೂಷಣ ಅವರು ಈ ಸಿನಿಮಾದಲ್ಲಿ ಹಲವು ಗೆಟಪ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಲವಿತ್ ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ. ಡಾಸ್ ಮೋಡ್ ಅವರ ಸಂಗೀತ, ಮುರಳಿ ಅವರ ನೃತ್ಯ ನಿರ್ದೇಶನ, ಅರ್ಜುನ್ ಅವರ ಸಾಹಸ ನಿರ್ದೇಶನ ‘ವಿದ್ಯಾಪತಿ’ ಸಿನಿಮಾಗೆ ಇರಲಿದೆ. ಸುಜಿತ್ ವೆಂಕಟರಾಮಯ್ಯ ಅವರು ಸಾಹಿತ್ಯ ಬರೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:12 pm, Tue, 20 August 24

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!