AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara: ‘ಕಾಂತಾರ’ ವೇಷ ಧರಿಸಿ ಮೊದಲ ಬಹುಮಾನ ಪಡೆದ ತಹಶೀಲ್ದಾರ್​; ಇಲ್ಲಿದೆ ವೈರಲ್​ ವಿಡಿಯೋ

Kantara Movie Dance: ‘ಕಾಂತಾರ’ ಚಿತ್ರದ ಹಾಡಿಗೆ ವೇದಿಕೆಯಲ್ಲಿ ತಹಶೀಲ್ದಾರ್ ಪ್ರಸಾದ್​ ರಾವ್ ಪರ್ಫಾರ್ಮ್​ ಮಾಡಿದ್ದಾರೆ. ಸರ್ಕಾರಿ ಅಧಿಕಾರಿಗಳ ನಡುವೆ ನಡೆದ ಈ ಸ್ಪರ್ಧೆಯಲ್ಲಿ ಅವರಿಗೆ ಪ್ರಥಮ ಬಹುಮಾನ ನೀಡಲಾಗಿದೆ.

Kantara: ‘ಕಾಂತಾರ’ ವೇಷ ಧರಿಸಿ ಮೊದಲ ಬಹುಮಾನ ಪಡೆದ ತಹಶೀಲ್ದಾರ್​; ಇಲ್ಲಿದೆ ವೈರಲ್​ ವಿಡಿಯೋ
ತಹಶೀಲ್ದಾರ್ ಪ್ರಸಾದ್ ರಾವ್
TV9 Web
| Edited By: |

Updated on:Nov 22, 2022 | 4:08 PM

Share

ಆಂಧ್ರ ಪ್ರದೇಶದ ಸರ್ಕಾರಿ ಅಧಿಕಾರಿಯೊಬ್ಬರು ‘ಕಾಂತಾರ’ (Kantara Movie) ಸಿನಿಮಾದ ರೀತಿ ವೇಷ ಧರಿಸಿ ಗಮನ ಸೆಳೆದಿದ್ದು ಕೆಲವೇ ದಿನಗಳ ಹಿಂದೆ ಸುದ್ದಿ ಆಗಿತ್ತು. ವಿಜಯನಗರಂ ಜಿಲ್ಲೆಯ ತಹಶೀಲ್ದಾರ್​ (Tahsildar) ಪ್ರಸಾದ್​ ರಾವ್​ ಅವರು ‘ಕಾಂತಾರ’ ಸಿನಿಮಾದ ಗೆಟಪ್​ನಲ್ಲಿ ಕಾಣಿಸಿಕೊಂಡಿರುವ ವಿಡಿಯೋ ಈಗ ವೈರಲ್​ ಆಗಿದೆ. ಅಚ್ಚರಿ ಏನೆಂದರೆ, ಈ ರೀತಿ ವೇಷ ಧರಿಸಿದ್ದಕ್ಕಾಗಿ ಅವರಿಗೆ ಮೊದಲ ಬಹುಮಾನ ಸಿಕ್ಕಿದೆ. ವೇದಿಕೆಯ ಮೇಲೆ ಕಾಂತಾರ ಚಿತ್ರದ ಹಾಡಿಗೆ ಅವರು ನೃತ್ಯ ಮಾಡಿದ್ದಾರೆ. ಭೂತಕೋಲದ (Buta Kola) ರೀತಿಯಲ್ಲಿ ಗೆಟಪ್​ ಹಾಕಿಕೊಂಡು ಎಲ್ಲರನ್ನೂ ರಂಜಿಸಿದ್ದಾರೆ. ಮೊದಲ ಬಹುಮಾನ ಪಡೆದ ಅವರಿಗೆ ನೆಟ್ಟಿಗರು ಅಭಿನಂದನೆ ಸಲ್ಲಿಸುತ್ತಿದ್ದಾರೆ.

ಗುಂಟೂರಿನ ನಾಗಾರ್ಜುನ ಯೂನಿವರ್ಸಿಟಿಯಲ್ಲಿ ಆಂಧ್ರ ಪ್ರದೇಶ ತೆರಿಗೆ ಇಲಾಖೆಯ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆದಿದೆ. ಇದರಲ್ಲಿ ಹಲವು ಅಧಿಕಾರಿಗಳು ಭಾಗಿ ಆಗಿದ್ದಾರೆ. ತಹಶೀಲ್ದಾರ್​ ಪ್ರಸಾದ್​ ರಾವ್​ ಅವರು ‘ಕಾಂತಾರ’ ಸಿನಿಮಾದ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದು, ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ಪ್ರಸಾದ್​ ರಾವ್​ ಅವರಿಗೆ ಕಲೆಯಲ್ಲಿ ಹೆಚ್ಚು ಆಸಕ್ತಿ ಇದೆ. ಈ ಕಾರ್ಯಕ್ರಮಕ್ಕೆ ‘ಕಾಂತಾರ’ ಚಿತ್ರದ ರೀತಿ ವೇಷ ಹಾಕಿಕೊಂಡು ಬಂದಿದ್ದನ್ನು ನೋಡಿ ಜಿಲ್ಲಾಧಿಕಾರಿಗೂ ಅಚ್ಚರಿ ಆಯಿತು. ಅವರು ಕೂಡ ತಹಶೀಲ್ದಾರ್​ ಜೊತೆ ಸೆಲ್ಫಿ ತೆಗೆದುಕೊಂಡರು ಎಂದು ಕೆಲವು ಮಾಧ್ಯಮಗಳಲ್ಲಿ ವರದಿ ಆಗಿದೆ. ವೇದಿಕೆ ಮೇಲೆ ಪರ್ಫಾರ್ಮ್​ ಮಾಡಿದ ಪ್ರಸಾದ್​ ರಾವ್ ಅವರಿಗೆ ಪ್ರಥಮ ಬಹುಮಾನ ನೀಡಲಾಗಿದೆ.

ಇದನ್ನೂ ಓದಿ
Image
Rishab Shetty: ಪಂಚೆ ಧರಿಸಿದ ರಿಷಬ್​ ಶೆಟ್ಟಿ ಗತ್ತು ಹೇಗಿದೆ ನೋಡಿ; ಇಲ್ಲಿದೆ ‘ಕಾಂತಾರ’ ಹೀರೋ ಫೋಟೋ ಗ್ಯಾಲರಿ
Image
Kantara: ಕರ್ನಾಟಕದಲ್ಲಿ ‘ಕಾಂತಾರ’ ಚಿತ್ರದ 1 ಕೋಟಿ ಟಿಕೆಟ್ಸ್​ ಮಾರಾಟ; ದಾಖಲೆಗೆ ಹಿಗ್ಗಿದ ‘ಹೊಂಬಾಳೆ ಫಿಲ್ಮ್ಸ್​’
Image
Kantara: ಬೆಂಗಳೂರಿಗೆ ಕಾಲಿಡುತ್ತಲೇ ‘ಕಾಂತಾರ’ ಬಗ್ಗೆ ಮಾತಾಡಿದ ಎಬಿ ಡಿವಿಲಿಯರ್ಸ್; ರಿಷಬ್​ ಶೆಟ್ಟಿ ಹೇಳಿದ್ದೇನು?
Image
Kantara: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ರಿಷಬ್​ ಶೆಟ್ಟಿ ಏನು ಮಾಡ್ತಿದ್ದಾರೆ? ಪ್ರೈವೇಟ್​ ಜೆಟ್​ ಏರಿದ ಶಿವ

ವಿಶ್ವಾದ್ಯಂತ ‘ಕಾಂತಾರ’ ಸಿನಿಮಾ ಅಬ್ಬರಿಸಿದೆ. ಇದು ತುಳುನಾಡಿನ ಕಥೆ ಆಗಿದ್ದರೂ ಕೂಡ ಎಲ್ಲ ರಾಜ್ಯಗಳ ಜನರಿಗೆ ಇಷ್ಟ ಆಗಿದೆ. ಕನ್ನಡದ ಜೊತೆಗೆ ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿಗೂ ಡಬ್​ ಆಗಿ ಬಿಡುಗಡೆಗೊಂಡು ಭರ್ಜರಿ ಕಲೆಕ್ಷನ್​ ಮಾಡಿದೆ. ಆಂಧ್ರ ಮತ್ತು ತೆಲಂಗಾಣದಲ್ಲಿ ಈ ಚಿತ್ರಕ್ಕೆ ಪ್ರೇಕ್ಷಕರ ಮನಸೋತಿದ್ದಾರೆ.

ರಿಷಬ್​ ಶೆಟ್ಟಿ ನಿರ್ದೇಶನದ, ಹೊಂಬಾಳೆ ಫಿಲ್ಮ್ಸ್​ ನಿರ್ಮಾಣದಲ್ಲಿ ‘ಕಾಂತಾರ’ ಮೂಡಿಬಂದಿದೆ. ಸಪ್ತಮಿ ಗೌಡ, ಅಚ್ಯುತ್​ ಕುಮಾರ್​, ಕಿಶೋರ್​, ಮಾನಸಿ ಸುಧೀರ್​, ಪ್ರಮೋದ್​ ಶೆಟ್ಟಿ ಮುಂತಾದವರು ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ. ಎಲ್ಲರ ಪಾತ್ರಗಳೂ ಈ ಸಿನಿಮಾದಲ್ಲಿ ಹೈಲೈಟ್​ ಆಗಿವೆ. ಅದರಲ್ಲೂ ರಿಷಬ್​ ಶೆಟ್ಟಿ ಅವರು ಕ್ಲೈಮ್ಯಾಕ್ಸ್​ನಲ್ಲಿ ಅಬ್ಬರಿಸುವ ಮೂಲಕ ಅಭಿಮಾನಿಗಳನ್ನು ಸೆಳೆದುಕೊಂಡಿದ್ದಾರೆ.

ಚಿತ್ರಮಂದಿರದಲ್ಲಿ ‘ಕಾಂತಾರ’ ಸಿನಿಮಾ ಸೂಪರ್​ ಹಿಟ್​ ಆಗಿದೆ. ಶೀಘ್ರದಲ್ಲೇ ಈ ಚಿತ್ರ ಒಟಿಟಿಗೆ ಕಾಲಿಡಲಿದೆ. ಮನೆಯಲ್ಲಿ ಕುಳಿತು ಚಿತ್ರವನ್ನು ಎಂಜಾಯ್​ ಮಾಡಲು ಸಿನಿಪ್ರಿಯರು ಕಾದಿದ್ದಾರೆ. ಒಟಿಟಿ ಪ್ರಸಾರ ದಿನಾಂಕದ ಬಗ್ಗೆ ಸದ್ಯದಲ್ಲೇ ಅನೌನ್ಸ್​ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:08 pm, Tue, 22 November 22

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ