ಶಕ್ತಿಧಾಮ ನೋಡಿಕೊಳ್ಳುವ ಬಗ್ಗೆ ಅಶ್ವಿನಿ​ ಜತೆ ವಿಶಾಲ್​ ಚರ್ಚೆ; ಪುನೀತ್​​ ಕುಟುಂಬದಿಂದ ಅನುಮತಿ ಸಿಗೋದು ಯಾವಾಗ?

Vishal | Puneeth Rajkumar: ‘ಸಮಾಜಕ್ಕಾಗಿ ಪುನೀತ್​ ರಾಜ್​ಕುಮಾರ್​ ಅವರು ಎಷ್ಟೋ ಒಳ್ಳೆಯ ಕೆಲಸ ಮಾಡಿದ್ದಾರೆ. ಆ ಕೆಲಸಗಳು ಮುಂದುವರಿಯಬೇಕು’ ಎಂದು ವಿಶಾಲ್​ ಹೇಳಿದ್ದಾರೆ. ಆ ಸಲುವಾಗಿ ರಾಜ್​ ಕುಟುಂಬದ ಜತೆ ಅವರು ಚರ್ಚಿಸಿದ್ದಾರೆ.

ಶಕ್ತಿಧಾಮ ನೋಡಿಕೊಳ್ಳುವ ಬಗ್ಗೆ ಅಶ್ವಿನಿ​ ಜತೆ ವಿಶಾಲ್​ ಚರ್ಚೆ; ಪುನೀತ್​​ ಕುಟುಂಬದಿಂದ ಅನುಮತಿ ಸಿಗೋದು ಯಾವಾಗ?
ವಿಶಾಲ್​
Follow us
| Updated By: ಮದನ್​ ಕುಮಾರ್​

Updated on: Nov 17, 2021 | 1:57 PM

ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರು ನೋಡಿಕೊಳ್ಳುತ್ತಿದ್ದ ‘ಶಕ್ತಿಧಾಮ’ದ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಕಾಲಿವುಡ್​ ನಟ ವಿಶಾಲ್​ (Vishal) ಮುಂದೆ ಬಂದಿದ್ದಾರೆ. ಆದರೆ ಅದಕ್ಕೆ ಪುನೀತ್​ ಕುಟುಂಬದವರ ಒಪ್ಪಿಗೆ ಸಿಗಬೇಕಿದೆ. ಈ ಸಲುವಾಗಿ ಇಂದು (ನ.17) ಅಶ್ವಿನಿ ಪುನೀತ್​ ರಾಜ್​ಕುಮಾರ್​ (Ashwini Puneeth Rajkumar) ಜೊತೆಗೆ ವಿಶಾಲ್​ ಚರ್ಚೆ ನಡೆಸಿದ್ದಾರೆ. ಶಿವರಾಜ್​ಕುಮಾರ್​ (Shivarajkumar) ಜತೆಗೂ ವಿಶಾಲ್​ ಮಾತನಾಡಿದ್ದಾರೆ. ಕಂಠೀರವ ಸ್ಡುಡಿಯೋಗೆ ಭೇಟಿ ನೀಡಿ ರಾಜ್​ಕುಮಾರ್​ ಪಾರ್ವತಮ್ಮ ಮತ್ತು ಪುನೀತ್​ ಸಮಾಧಿಗೆ ಅವರು ನಮನ ಸಲ್ಲಿದ್ದಾರೆ. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿ ಒಂದಷ್ಟು ಮಾಹಿತಿ ಹಂಚಿಕೊಂಡಿದ್ದಾರೆ. ‘ಈಗತಾನೇ ಪುನೀತ್​ ಅವರ ಮನೆಗೆ ಹೋಗಿ ಬಂದಿದ್ದೇನೆ. ಅಶ್ವಿನಿ ಮೇಡಂ ಬಳಿ ಅನುಮತಿ ಕೇಳಿದ್ದೇನೆ. ಇನ್ನು ಮೂರು-ನಾಲ್ಕು ತಿಂಗಳಲ್ಲಿ ನಿಧಾರ ತಿಳಿಸುವುದಾಗಿ ಹೇಳಿದ್ದಾರೆ’ ಎಂದಿದ್ದಾರೆ ವಿಶಾಲ್​.

‘ಪುನೀತ್​ ರಾಜ್​ಕುಮಾರ್​ ಇಲ್ಲ ಎಂದುಕೊಳ್ಳಲು ಸಾಧ್ಯವಿಲ್ಲ. ಅವರ ಮುಖ ನನಗೆ ಇನ್ನೂ ಕಾಣಿಸುತ್ತಿದೆ. ಅವರ ನಿಧನ ಇಡೀ ಸಮಾಜಕ್ಕೆ ಮತ್ತು ಚಿತ್ರರಂಗಕ್ಕೆ ದೊಡ್ಡ ನಷ್ಟ ಉಂಟು ಮಾಡಿದೆ. ಸಮಾಜಕ್ಕಾಗಿ ಅವರು ಎಷ್ಟೋ ಒಳ್ಳೆಯ ಕೆಲಸ ಮಾಡಿದ್ದಾರೆ. ಆ ಕೆಲಸಗಳು ಮುಂದುವರಿಯಬೇಕು. ಅಶ್ವಿನಿ ಮೇಡಂ ಮತ್ತು ಅವರ ಮಕ್ಕಳಿಗೆ ದೇವರು ಶಕ್ತಿ ನೀಡಲಿ ಅಂತ ಬೇಡಿಕೊಳ್ಳುತ್ತೇನೆ’ ಎಂದು ವಿಶಾಲ್​ ಹೇಳಿದ್ದಾರೆ.

‘ಪುನೀತ್​ ಅವರು ಒಳ್ಳೆಯ ನಟ ಮಾತ್ರವಲ್ಲ. ಒಳ್ಳೆಯ ಮನುಷ್ಯ ಕೂಡ ಹೌದು. ಅವರಷ್ಟು ವಿನಯವಂತ ವ್ಯಕ್ತಿಯನ್ನು ನಾನು ನೋಡಿಲ್ಲ. ತಾನೊಬ್ಬ ಸೂಪರ್​ ಸ್ಟಾರ್​ ಎಂಬ ಭಾವನೆ ಅವರಿಗೆ ಇರಲಿಲ್ಲ. ಮೇಕಪ್​ ಹಚ್ಚಿದಾಗ ಮಾತ್ರ ಅವರು ಸೂಪರ್​ ಸ್ಟಾರ್​. ಬಾಕಿ ಸಮಯದಲ್ಲಿ ಜನಸಾಮಾನ್ಯರ ಹಾಗೆ ಅವರು ಇರುತ್ತಿದ್ದರು. ಎಲ್ಲರನ್ನೂ ಸಮನಾಗಿ ನೋಡುತ್ತಿದ್ದರು. 15 ವರ್ಷಗಳಿಗೂ ಹೆಚ್ಚು ಸಮಯದಿಂದ ನಾವು ಅವರನ್ನು ನೋಡುತ್ತಿದ್ದೇನೆ. ಆಗಿನಿಂದಲೂ ಒಂದೇ ರೀತಿ ಇದ್ದರು. ಇಂಥ ಒಳ್ಳೆಯ ಜನರನ್ನು ದೇವರ ಯಾಕೆ ಕರೆದುಕೊಳ್ಳುತ್ತಾನೆ ಎಂಬುದು ನಮಗೆ ಅರ್ಥವಾಗುವುದಿಲ್ಲ’ ಎಂದು ವಿಶಾಲ್​ ಹೇಳಿದ್ದಾರೆ.

ಮಂಗಳವಾರ (ನ.17) ನಡೆದ ‘ಪುನೀತ ನಮನ’ ಕಾರ್ಯಕ್ರಮಕ್ಕೂ ವಿಶಾಲ್​ ಆಗಮಿಸಿದ್ದರು. ‘ನನ್ನ ಸ್ನೇಹಿತ ಪುನೀತ್​ ಒಳ್ಳೆಯ ನಟ, ವ್ಯಕ್ತಿ ಆಗಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಸಹೋದರನಾಗಿ ಪುನೀತ್​ಗೆ ಪ್ರಾಮಿಸ್​ ಮಾಡುತ್ತಿದ್ದೇನೆ. ನಾನು ಹೇಳಿದ ಮಾತನ್ನು ನಡೆಸಿಕೊಡುತ್ತೇನೆ. ಅವರು ಬದುಕಿದ್ದಾಗ ತಾವು ಮಾಡಿದ ಸಮಾಜಸೇವೆಯನ್ನು ಎಲ್ಲಿಯೂ ಹೇಳಿಕೊಂಡಿಲ್ಲ. ನೀವು ಮೃತಪಟ್ಟ ನಂತರ ನಿಮ್ಮ ಕಾರ್ಯಗಳ ಬಗ್ಗೆ ಇಡೀ ದೇಶಕ್ಕೆ ತಿಳಿಯಿತು. ನೀವು ಮಾಡುತ್ತಿದ್ದ ಕಾರ್ಯವನ್ನು ನಾನು ಮುಂದುವರಿಸುತ್ತೇನೆ’ ಎಂದು ವಿಶಾಲ್​ ಹೇಳಿದ್ದರು.

ಇದನ್ನೂ ಓದಿ:

Puneetha Namana: ‘​ನಾನು ಮನೆ ಖರೀದಿಗಾಗಿ ಇಟ್ಟುಕೊಂಡ ಹಣದಲ್ಲಿ ಈ ಸಹಾಯ ಮಾಡ್ತೀನಿ’: ವಿಶಾಲ್

‘ಶಿವಣ್ಣ ಮತ್ತು ನಾನು ಮುಖ ನೋಡಿಕೊಂಡ್ರೆ ನಾಚಿಕೆ ಆಗತ್ತೆ​’: ನೋವಿನಲ್ಲಿ ಕಣ್ಣೀರು ಹಾಕಿದ ರಾಘಣ್ಣ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!