AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಪಿ ಬಾಲಸುಬ್ರಹ್ಮಣ್ಯಂ ನಾಲ್ಕನೇ ಪುಣ್ಯತಿಥಿ; ಮುಖ್ಯ ರಸ್ತೆಯೊಂದಕ್ಕೆ ಗಾಯಕನ ಹೆಸರಿಟ್ಟ ಸಿಎಂ

ಎಸ್​​ಪಿ ಬಾಲಸುಬ್ರಹ್ಮಣ್ಯಂ ಅವರು 40 ಸಾವಿರಕ್ಕೂ ಅಧಿಕ ಹಾಡುಗಳನ್ನು ಹಾಡಿದ್ದಾರೆ. 16 ಭಾಷೆಗಳಲ್ಲಿ ಹಾಡಿಗೆ ಅವರು ಧ್ವನಿ ಆಗಿದ್ದಾರೆ. ಅವರ ಧ್ವನಿಗೆ ಮಾರು ಹೋಗದವರೇ ಇಲ್ಲ. ಒಂದೇ ದಿನ ಹಲವು ಹಾಡುಗಳನ್ನು ರೆಕಾರ್ಡ್​ ಮಾಡಿ ದಾಖಲೆ ಬರೆದಿದ್ದಾರೆ. ಈಗ ಅವರ ಹೆಸರನ್ನು ರಸ್ತೆ ಒಂದಕ್ಕೆ ಇಡಲಾಗಿದೆ.

ಎಸ್​ಪಿ ಬಾಲಸುಬ್ರಹ್ಮಣ್ಯಂ ನಾಲ್ಕನೇ ಪುಣ್ಯತಿಥಿ; ಮುಖ್ಯ ರಸ್ತೆಯೊಂದಕ್ಕೆ ಗಾಯಕನ ಹೆಸರಿಟ್ಟ ಸಿಎಂ
ಎಸ್​ಪಿಬಿ
ರಾಜೇಶ್ ದುಗ್ಗುಮನೆ
|

Updated on: Sep 26, 2024 | 7:30 AM

Share

ಎಸ್​ಪಿ ಬಾಲಸುಬ್ರಹ್ಮಣ್ಯಂ ಅವರು ಕನ್ನಡ, ಹಿಂದಿ ಸೇರಿದಂತೆ ಅನೇಕ ಭಾಷೆಗಳಲ್ಲಿ ಸಾವಿರಾರು ಹಾಡುಗಳನ್ನು ಹಾಡಿದ್ದಾರೆ. ಅವರು ಇಂದು ನಮ್ಮ ಜೊತೆಗೆ ಇಲ್ಲ. ಆದರೆ, ಅವರು ಹಾಡಿದ ಹಾಡುಗಳು ಎವರ್​ಗ್ರೀನ್ ಆಗಿವೆ. ಈಗ ಅವರಿಗೆ ವಿಶೇಷ ಗೌರವ ಸಲ್ಲಿಕೆ ಆಗಿದೆ. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಚೆನ್ನೈನ ರಸ್ತೆ ಒಂದಕ್ಕೆ ಎಸ್​ಪಿಬಿ ಅವರ ಹೆಸರನ್ನು ಇಟ್ಟಿದ್ದಾರೆ. ನಾಲ್ಕನೇ ಪುಣ್ಯತಿಥಿ ಸಂದರ್ಭದಲ್ಲಿ ಈ ಘೋಷಣೆ ಮಾಡಿದ್ದಾರೆ. ಐದು ದಶಕಗಳ ಕಾಲ ಎಸ್​ಪಿಬಿ ಅವರು ಚಿತ್ರರಂಗದಲ್ಲಿ ಇದ್ದರು. ಅವರು 40 ಸಾವಿರಕ್ಕೂ ಅಧಿಕ ಹಾಡುಗಳನ್ನು ಹಾಡಿದ್ದಾರೆ. 16 ಭಾಷೆಗಳ ಹಾಡಿಗೆ ಅವರು ಧ್ವನಿ ಆಗಿದ್ದಾರೆ. ಅವರ ಧ್ವನಿಗೆ ಮಾರು ಹೋಗದವರೇ ಇಲ್ಲ. ಒಂದೇ ದಿನ ಹಲವು ಹಾಡುಗಳನ್ನು ರೆಕಾರ್ಡ್​ ಮಾಡಿ ದಾಖಲೆ ಬರೆದಿದ್ದಾರೆ. ಸೆಪ್ಟೆಂಬರ್ 25ರಂದು ಅವರು ಮೃತಪಟ್ಟು ನಾಲ್ಕು ವರ್ಷ ಕಳೆದಿದೆ. ಹೀಗಾಗಿ ಈ ಘೋಷಣೆ ಮಾಡಲಾಗಿದೆ.

‘ಹಲವು ಭಾಷೆಗಳಲ್ಲಿ ಎಸ್​ಪಿಬಿ ಅವರು 40 ಸಾವಿರ ಹಾಡುಗಳನ್ನು ಹಾಡಿದ್ದಾರೆ. ಅರ್ಧ ಶತಮಾನಗಳ ಕಾಲ ತಮಿಳು ಜನತೆಯನ್ನು ಅವರು ರಂಜಿಸಿದರು. ಹಾಡುವ ಮೂಲಕ, ಸಂಗೀತ ಸಂಯೋಜನೆ ಮಾಡುವ ಮೂಲಕ, ಸಿನಿಮಾಗಳಲ್ಲಿ ನಟಿಸುವ ಮೂಲಕ ಅವರು ಗಮನ ಸೆಳೆದರು. 2020ರ ಸೆಪ್ಟೆಂಬರ್ 25ರಂದು ಅವರು ನಮ್ಮನ್ನು ಅಗಲಿದರು. ಅವರು ಇಂದಿಗೂ ನಮ್ಮ ಹೃದಯದಲ್ಲಿ ಇದ್ದಾರೆ. ಹೀಗಾಗಿ, ಎಸ್​ಪಿಬಿ ವಾಸ ಇದ್ದ ನುಂಗಂಬಾಕ್ಕಂ ಕಾಮ್ದಾರ್ ನಗರದ ಮುಖ್ಯರಸ್ತೆಗೆ ಎಸ್​ಪಿ ಬಾಲಸುಬ್ರಹ್ಮಣ್ಯಂ ಸಲಾಯಿ (ರಸ್ತೆ) ಎಂದು ನಾಮಕರಣ ಮಾಡಲಾಗಿದೆ’ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ‘ಕೀಡ ಕೋಲ’ ಚಿತ್ರತಂಡಕ್ಕೆ ನೋಟೀಸ್ ನೀಡಿದ ಎಸ್​ಪಿ ಬಾಲಸುಬ್ರಹ್ಮಣ್ಯಂ ಕುಟುಂಬ

‘ಬಾಲುವಿನ ಲಕ್ಷಾಂತರ ಅಭಿಮಾನಿಗಳಲ್ಲಿ ನಾನೂ ಒಬ್ಬ. ಅವರು ವಾಸವಿದ್ದ ನಗರದ ಮುಖ್ಯ ರಸ್ತೆಗೆ ಅವರದ್ದೇ ಹೆಸರು ಇಡುತ್ತಿರುವುದು ನಿಜಕ್ಕೂ ಖುಷಿಯ ವಿಚಾರ’ ಎಂದು ಸ್ಟಾಲಿನ್ ಟ್ವೀಟ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ