AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪುವನ್ನು ಸಹೋದರ ಎಂದೇ ಸಂಬೋಧಿಸಿ ಶಿವರಾಜ್ ಕುಮಾರ್​ಗೆ ಸಂತಾಪ ಪತ್ರ ಬರೆದ ತಮಿಳುನಾಡು ಸಿಎಂ ಸ್ಟಾಲಿನ್

ಪುನೀತ್ ರಾಜ್ಕುಮಾರ್ ನಿಧನಕ್ಕೆ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅಪ್ಪುವನ್ನು ಸಹೋದರ ಎಂದೇ ಸಂಬೋಧಿಸಿ ಶಿವರಾಜ್ ಕುಮಾರ್ಗೆ ಸಂತಾಪ ಪತ್ರ ಬರೆದಿದ್ದಾರೆ.

ಅಪ್ಪುವನ್ನು ಸಹೋದರ ಎಂದೇ ಸಂಬೋಧಿಸಿ  ಶಿವರಾಜ್ ಕುಮಾರ್​ಗೆ ಸಂತಾಪ ಪತ್ರ ಬರೆದ ತಮಿಳುನಾಡು ಸಿಎಂ ಸ್ಟಾಲಿನ್
ಅಪ್ಪುವನ್ನು ಸಹೋದರ ಎಂದೇ ಸಂಬೋಧಿಸಿ ಶಿವರಾಜ್ ಕುಮಾರ್ಗೆ ಸಂತಾಪ ಪತ್ರ ಬರೆದ ತಮಿಳುನಾಡು ಸಿಎಂ ಸ್ಟ್ಯಾಲಿನ್
TV9 Web
| Edited By: |

Updated on:Jan 07, 2022 | 7:22 AM

Share

ನಟ ಪುನೀತ್ ರಾಜ್ಕುಮಾರ್ ನಿಧನದಿಂದ ಇಡೀ ಚಿತ್ರರಂಗ ಶಾಕ್ಗೆ ಒಳಗಾಗಿದೆ. ಸದಾ ಹಸನ್ಮುಖಿಯಾಗಿದ್ದ ನಗು ಮರೆಯಾಗಿದೆ ಮಗುವಂತಹ ಮಾತುಗಳಿಂದ ಎಲ್ಲರಿಗೂ ಹತ್ತಿರವಾಗುತ್ತಿದ್ದ ಮಾತುಗಳು ಮೌನಕ್ಕೆ ಶರಣಾಗಿದೆ ಎಂಬ ಸತ್ಯವನ್ನು ನಂಬಲು ಅಸಾಧ್ಯವಾಗುತ್ತಿದೆ. ಪುನೀತ್ ರಾಜ್ ಕುಮಾರ್ ನಿಧನಕ್ಕೆ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅಪ್ಪುವನ್ನು ಸಹೋದರ ಎಂದೇ ಸಂಬೋಧಿಸಿ ಶಿವರಾಜ್ ಕುಮಾರ್​ಗೆ ಸಂತಾಪ ಪತ್ರ ಬರೆದಿದ್ದಾರೆ.

ತಮ್ಮ ಸಹೋದರ ಪುನೀತ್ರ ದಿಢೀರ್ ಸಾವು ನನಗೆ ಭರಿಸಲಾಗದ ನೋವುಂಟು ಮಾಡಿದೆ. ಸಂತಾಪ ಸೂಚಿಸಲು ನನಗೆ ಮಾತೇ ಬರುತ್ತಿಲ್ಲ. ನಮ್ಮ ಎರಡೂ ಕುಟುಂಬಗಳು ಹಲವು ದಶಕಗಳಿಂದ ಸೌಹಾರ್ದಯುತ ಬಾಂಧವ್ಯವನ್ನು ಹೊಂದಿದೆ. ನನಗೆ ಪುನೀತ್ ಅಗಲಿಕೆ ವೈಯಕ್ತಿಕವಾಗಿ ನಷ್ಟವನ್ನುಂಟು ಮಾಡಿದೆ.

ನನ್ನ ತಂದೆ ಕರುಣಾನಿಧಿ ಅವರ ಸಾವಿಗೆ ಸಂತಾಪ ಸೂಚಿಸಲು ಗೋಪಾಲಪುರಂಗೆ ಬಂದಿದ್ದ ಪುನೀತ್ರ ಆ ಕ್ಷಣಗಳು ನನ್ನ ಮನದಲ್ಲಿ ಅಚ್ಚಳಿಯದೆ ಉಳಿದಿದೆ. ದಯಬಿಟ್ಟು ನನ್ನ ಸಂತಾಪವನ್ನು ತಮ್ಮ ಕುಟುಂಬಕ್ಕೆ ಮತ್ತು ಕರ್ನಾಟಕದ ಜನತೆಗೆ ತಿಳಿಸಿ. ಕರ್ನಾಟಕವು ಅಮೂಲ್ಯವಾದ ರತ್ನವನ್ನು ಮಾನವತಾವಾದಿಯನ್ನು ಕಳೆದುಕೊಂಡಿದೆ. ಅಪ್ಪು ನಮ್ಮ ಮಧ್ಯೆ ಇಲ್ಲವಾದರೂ ಅವರ ನೆನೆಪು ಸದಾ ನಮ್ಮೊಂದಿಗೆ ಇರುತ್ತದೆ. ದಿ. ರಾಜ್ಕುಮಾರ್ರ ಹಿರಿಯ ಮಗನಾದ ನೀವು ಈ ಕಹಿ ಗಳಿಗೆಯಲ್ಲಿ ಆತ್ಮಸ್ಥರ್ಯ ತುಂಬಿಕೊಂಡು ಕುಟುಂಬಸ್ಥರೊಂದಿಗೆ ನಿಲ್ಲುತ್ತೀರಿ ಎಂದು ಭಾವಿಸುತ್ತೇನೆ ಎಂದು ಎಂ.ಕೆ ಸ್ಟಾಲಿನ್ ಅಪ್ಪುವನ್ನು ಸಹೋದರ ಎಂದೇ ಸಂಬೋಧಿಸಿ ಶಿವರಾಜ್ ಕುಮಾರ್ಗೆ ಸಂತಾಪ ಪತ್ರ ಬರೆದಿದ್ದಾರೆ.

ತಮಿಳುನಾಡಿನಿಂದ ಆಗಮಿಸಿದ ಪುನೀತ್ ಅಭಿಮಾನಿ ಅಪ್ಪು ಅಂತಿಮ ದರ್ಶನ ಪಡೆಯಲು ತಮಿಳುನಾಡಿನಿಂದ ಅಭಿಮಾನಿಗಳು ಆಗಮಿಸಿದ್ದಾರೆ. ದಿವ್ಯಾಂಗ ಅಭಿಮಾನಿ ದೇವು ಸ್ನೇಹಿತನ ಹೆಗಲ ಮೇಲೆ ಹತ್ತಿ ಪುನೀತ್ ಅಂತಿಮ ದರ್ಶನ ಪಡೆದಿದ್ದಾರೆ. ಅಪ್ಪು ನಿಧನದ ಸುದ್ದಿಕೇಳುತ್ತಿದ್ದಂತೆ ಧಾವಿಸಿ ಬಂದು ಅಂತಿಮ ದರ್ಶನ ಪಡೆದಿದ್ದಾರೆ.

ಇದನ್ನೂ ಓದಿ: ಅಪ್ಪುನನ್ನು ಶಾಂತಯುತವಾಗಿ ಕಳಿಸಿಕೊಡೋಣ, ಎಲ್ಲರೂ ಸಹಕರಿಸಬೇಕು ಎಂದು ವಿನಂತಿಸಿಕೊಂಡರು ರಾಘವೇಂದ್ರ ರಾಜ್​ಕುಮಾರ್

Published On - 9:25 am, Sat, 30 October 21

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ