AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ಗೆ ತಮಿಳುನಾಡು ವಿಧಾನಸಭೆ ಅಧಿವೇಶನದಲ್ಲಿ ಗೌರವ; ಮೊದಲ ದಿನವೇ ಅಪ್ಪು ಬಗ್ಗೆ ಮಾತು

ತಮಿಳುನಾಡಿನ ವಿಧಾನಸಭೆ ಅಧಿವೇಷನ ಬುಧವಾರ (ಜ.5) ಆರಂಭ ಆಯಿತು. ಮೊದಲ ದಿನವೇ ಪುನೀತ್​ ರಾಜ್​ಕುಮಾರ್​ ಬಗ್ಗೆ ಮಾತನಾಡಲಾಗಿದ್ದು, ಆ ವಿಡಿಯೋ ವೈರಲ್​ ಆಗುತ್ತಿದೆ.

ಪುನೀತ್​ಗೆ ತಮಿಳುನಾಡು ವಿಧಾನಸಭೆ ಅಧಿವೇಶನದಲ್ಲಿ ಗೌರವ; ಮೊದಲ ದಿನವೇ ಅಪ್ಪು ಬಗ್ಗೆ ಮಾತು
ಪುನೀತ್​ ರಾಜ್​ಕುಮಾರ್
TV9 Web
| Updated By: ಮದನ್​ ಕುಮಾರ್​|

Updated on:Jan 07, 2022 | 1:19 PM

Share

ನಟ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರು ಕೇವಲ ನಟನಾಗಿ ಮಾತ್ರವಲ್ಲದೇ ಅನೇಕ ಸಮಾಜಮುಖಿ ಕಾರ್ಯಗಳ ಮೂಲಕವೂ ಜನರಿಗೆ ಹತ್ತಿರ ಆಗಿದ್ದರು. ಅವರ ಕಾರ್ಯಗಳನ್ನು ಪ್ರತಿ ದಿನ ಸ್ಮರಿಸಿಕೊಳ್ಳಲಾಗುತ್ತಿದೆ. ಪಕ್ಕದ ರಾಜ್ಯಗಳಲ್ಲೂ ಅಪ್ಪು ಕುರಿತು ಮಾತನಾಡುತ್ತಿದ್ದಾರೆ. ವಿಶೇಷ ಏನೆಂದರೆ ತಮಿಳುನಾಡು ವಿಧಾನಸಭೆಯ ಅಧಿವೇಶನದಲ್ಲಿ (Tamil Nadu Assembly Session) ಪುನೀತ್​ ರಾಜ್​ಕುಮಾರ್​ ಅವರಿಗೆ ಗೌರವ ಸಲ್ಲಿಸಲಾಗಿದೆ. ‘ಪವರ್​ ಸ್ಟಾರ್​’ ವ್ಯಕ್ತಿತ್ವ ಮತ್ತು ಸಾಧನೆಗಳನ್ನು ಸ್ಮರಿಸಲಾಗಿದೆ. ಇದು ಅಪ್ಪು ಅಭಿಮಾನಿಗಳಿಗೆ ನಿಜಕ್ಕೂ ಹೆಮ್ಮೆ ಎನಿಸುವ ಕ್ಷಣ. ಪುನೀತ್​ ನಿಧನರಾದಾಗ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್​ (M K Stalin) ಅವರು ಸಂತಾಪ ಸೂಚಿಸಿದ್ದರು. ಈಗ ಅಲ್ಲಿನ ವಿಧಾನಸಭೆಯಲ್ಲಿ ಕನ್ನಡದ ನಟನಿಗೆ ಗೌರವ ಸಲ್ಲಿಕೆ ಆಗಿದೆ. 

ಅಕ್ಕಪಕ್ಕದ ರಾಜ್ಯಗಳ ಸೆಲೆಬ್ರಿಟಿಗಳು ಮತ್ತು ಬೇರೆ ಬೇರೆ ಕ್ಷೇತ್ರದ ಗಣ್ಯರ ಜೊತೆಗೆ ಪುನೀತ್​ ರಾಜ್​ಕುಮಾರ್​ ಅವರು ಉತ್ತಮ ಬಾಂಧವ್ಯ ಹೊಂದಿದ್ದರು. ತಮಿಳುನಾಡಿನ ವಿಧಾನಸಭೆ ಅಧಿವೇಷನ ಬುಧವಾರ (ಜ.5) ಆರಂಭ ಆಯಿತು. ಇತ್ತೀಚೆಗೆ ಅಗಲಿದ ಗಣ್ಯರಿಗೆ ಅಧಿವೇಷದಲ್ಲಿ ಗೌರವ ಸಲ್ಲಿಸಲಾಯಿತು. ಅಧಿವೇಷನದ ಮೊದಲ ದಿನವೇ ಪುನೀತ್​ ಬಗ್ಗೆ ಮಾತನಾಡಲಾಗಿದ್ದು, ಆ ವಿಡಿಯೋ ಕೂಡ ವೈರಲ್​ ಆಗುತ್ತಿದೆ.

ಪತ್ರ ಬರೆದಿದ್ದ ಸ್ಟಾಲಿನ್​:

ಪುನೀತ್ ರಾಜ್​ಕುಮಾರ್ ನಿಧನದ ಬಳಿಕ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಶಿವರಾಜ್​ಕುಮಾರ್​ಗೆ ಸಂತಾಪ ಪತ್ರ ಬರೆದಿದ್ದರು. ‘ಸಹೋದರ ಪುನೀತ್​ ಅವರ ದಿಢೀರ್ ಸಾವು ನನಗೆ ಭರಿಸಲಾಗದ ನೋವುಂಟು ಮಾಡಿದೆ. ಸಂತಾಪ ಸೂಚಿಸಲು ನನಗೆ ಮಾತೇ ಬರುತ್ತಿಲ್ಲ. ನಮ್ಮ ಎರಡೂ ಕುಟುಂಬಗಳು ಹಲವು ದಶಕಗಳಿಂದ ಸೌಹಾರ್ದಯುತ ಬಾಂಧವ್ಯವನ್ನು ಹೊಂದಿವೆ. ನನಗೆ ಪುನೀತ್ ಅಗಲಿಕೆ ವೈಯಕ್ತಿಕವಾಗಿ ನಷ್ಟವನ್ನುಂಟು ಮಾಡಿದೆ’ ಎಂದು ಪತ್ರದಲ್ಲಿ ಬರೆಯಲಾಗಿತ್ತು.

‘ನನ್ನ ತಂದೆ ಕರುಣಾನಿಧಿ ಅವರ ಸಾವಿಗೆ ಸಂತಾಪ ಸೂಚಿಸಲು ಗೋಪಾಲಪುರಂಗೆ ಬಂದಿದ್ದ ಪುನೀತ್​ ಅವರ ಆ ಕ್ಷಣಗಳು ನನ್ನ ಮನದಲ್ಲಿ ಅಚ್ಚಳಿಯದೆ ಉಳಿದಿದೆ. ದಯಬಿಟ್ಟು ನನ್ನ ಸಂತಾಪವನ್ನು ನಿಮ್ಮ ಕುಟುಂಬಕ್ಕೆ ಮತ್ತು ಕರ್ನಾಟಕದ ಜನತೆಗೆ ತಿಳಿಸಿ. ಕರ್ನಾಟಕವು ಅಮೂಲ್ಯವಾದ ರತ್ನವನ್ನು, ಮಾನವತಾವಾದಿಯನ್ನು ಕಳೆದುಕೊಂಡಿದೆ. ಅಪ್ಪು ನಮ್ಮ ಮಧ್ಯೆ ಇಲ್ಲವಾದರೂ ಅವರ ನೆನೆಪು ಸದಾ ನಮ್ಮೊಂದಿಗೆ ಇರುತ್ತದೆ. ದಿ. ರಾಜ್​ಕುಮಾರ್​ ಹಿರಿಯ ಮಗನಾದ ನೀವು ಈ ಕಹಿ ಗಳಿಗೆಯಲ್ಲಿ ಆತ್ಮಸ್ಥರ್ಯ ತುಂಬಿಕೊಂಡು ಕುಟುಂಬಸ್ಥರೊಂದಿಗೆ ನಿಲ್ಲುತ್ತೀರಿ ಅಂತ ಭಾವಿಸುತ್ತೇನೆ’ ಎಂದು ಎಂ.ಕೆ. ಸ್ಟಾಲಿನ್ ಪತ್ರ ಬರೆದಿದ್ದರು.

ಡಿ.13ರಂದು ಬೆಳಗಾವಿಯಲ್ಲಿ ನಡೆದ ವಿಧಾನಸಭೆ ಚಳಿಗಾಲದ ಅಧಿವೇಶನದಲ್ಲೂ ಪುನೀತ್​ ರಾಜ್​ಕುಮಾರ್​ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದ್ದರು. ಅಪ್ಪು ನಿಧನರಾದ ದಿನ ಪರಿಸ್ಥಿತಿ ಹೇಗಿತ್ತು ಎಂಬುದನ್ನು ಅವರು ವಿವರಿಸಿದರು. ‘ಅಲ್ಪ ಸಮಯದಲ್ಲಿ ಒಬ್ಬ ನಟ ಇಷ್ಟು ಜನರ ಹೃದಯದಲ್ಲಿ ಸ್ಥಾನ ಗಳಿಸಬಲ್ಲ ಎಂಬುದು ಪುನೀತ್​ ರಾಜ್​ಕುಮಾರ್​ ಅವರ ನಿಧನದ ಬಳಿಕ ತಿಳಿಯಿತು. ಅವರು​ ಕೇವಲ ಚಿತ್ರರಂಗಕ್ಕೆ ಸಂಬಂಧಿಸಿದ ವ್ಯಕ್ತಿ ಆಗಿರಲಿಲ್ಲ’ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದರು.

ಇದನ್ನೂ ಓದಿ:

‘ಪುನೀತ್​ ಇಲ್ಲದೇ ‘ಜೇಮ್ಸ್​’ ಶೂಟಿಂಗ್​ ಮಾಡೋದು ಕಷ್ಟ ಆಗ್ತಿದೆ’: ನಟ ಅವಿನಾಶ್​ ಭಾವುಕ ನುಡಿ

ಪುನೀತ್​ ರಾಜ್​ಕುಮಾರ್​ಗೆ ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿ; ವೇದಿಕೆಯಲ್ಲಿ ಭಾವುಕರಾದ ಶಿವಣ್ಣ

Published On - 7:57 am, Fri, 7 January 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!