AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ‘ತಮಿಳರಸನ್’ ಸಿನಿಮಾ ಹಕ್ಕು ನೀಡುವುದಾಗಿ 16 ಲಕ್ಷ ಪಡೆದು ಮೋಸ; ದೂರು ದಾಖಲು

38 ಲಕ್ಷ ರೂಪಾಯಿಗೆ ‘ತಮಿಳರಸನ್’ ಚಿತ್ರದ ತಮಿಳು ಹಾಗು ತೆಲುಗು ವರ್ಷನ್ ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಅಗ್ರಿಮೆಂಟ್ ಆಗಿತ್ತು. ಅಡ್ವಾನ್ಸ್ ರೂಪದಲ್ಲಿ 16 ಲಕ್ಷ ರೂಪಾಯಿ ಹಣವನ್ನು ಧೀರಜ್ ಪೈ ಅವರು ಕೌಸಲ್ಯ ರಾಣಿಗೆ ನೀಡಿದ್ದರು. ಉಳಿದ ಹಣ ಚಿತ್ರ ಬಿಡುಗಡೆ ಬಳಿಕ ನೀಡುವುದಾಗಿ ಒಪ್ಪಂದ ಆಗಿತ್ತು.

ಕರ್ನಾಟಕದಲ್ಲಿ ‘ತಮಿಳರಸನ್’ ಸಿನಿಮಾ ಹಕ್ಕು ನೀಡುವುದಾಗಿ 16 ಲಕ್ಷ ಪಡೆದು ಮೋಸ; ದೂರು ದಾಖಲು
ತಮಿಳರಸನ್
ಪ್ರಜ್ವಲ್​ ಕುಮಾರ್ ಎನ್​ ವೈ
| Updated By: ರಾಜೇಶ್ ದುಗ್ಗುಮನೆ|

Updated on: Sep 17, 2023 | 11:09 AM

Share

ತಮಿಳು ಸಿನಿಮಾ ‘ತಮಿಳರಸನ್’ (Tamilarasan Movie)) ನಿರ್ಮಾಪಕಿಯಿಂದ ವಂಚನೆ ನಡೆದಿದೆ. ವಿಜಯ್ ಆ್ಯಂಟನಿ ನಟನೆಯ ಈ ಸಿನಿಮಾ ಹಂಚಿಕೆ ಹಕ್ಕನ್ನು ನೀಡುವುದಾಗಿ ನಂಬಿಸಿ ಮೋಸ ಮಾಡಲಾಗಿದೆ ಎಂದು ನಿರ್ಮಾಪಕಿ ಕೌಸಲ್ಯ ರಾಣಿ ವಿರುದ್ಧ ಧೀರಜ್ ಎಂಟರ್ ಪ್ರೈಸಸ್​ನ ವಿತರಕ ಮೋಹನ್ ದಾಸ್ ಪೈ ದೂರು ನೀಡಿದ್ದಾರೆ. ಈ ದೂರನ್ನು ಆಧರಿಸಿ ಕೇಸ್ ದಾಖಲು ಮಾಡಿಕೊಳ್ಳಲಾಗಿದೆ. ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

‘ತಮಿಳರಸನ್’ ಸಿನಿಮಾ ಏಪ್ರಿಲ್ 22ರಂದು ಥಿಯೇಟರ್​ನಲ್ಲಿ ರಿಲೀಸ್ ಆಗಿದೆ. ಕರ್ನಾಟಕದಲ್ಲಿ ಚಿತ್ರದ ತಮಿಳು ಹಾಗೂ ತೆಲುಗು ವರ್ಷನ್​ನ ಪ್ರದರ್ಶನದ ಹಕ್ಕನ್ನು ನೀಡುವುದಾಗಿ ಕೌಸಲ್ಯ ರಾಣಿ ಅವರು ಮೋಹನ್ ದಾಸ್ ಪೈಗೆ ಹೇಳಿದ್ದರು. 38 ಲಕ್ಷ ರೂಪಾಯಿಗೆ ತಮಿಳು ಹಾಗು ತೆಲುಗು ವರ್ಷನ್ ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಅಗ್ರಿಮೆಂಟ್ ಆಗಿತ್ತು. ಅಡ್ವಾನ್ಸ್ ರೂಪದಲ್ಲಿ 16 ಲಕ್ಷ ರೂಪಾಯಿ ಹಣವನ್ನು ಧೀರಜ್ ಪೈ ಅವರು ಕೌಸಲ್ಯ ರಾಣಿಗೆ ನೀಡಿದ್ದರು. ಉಳಿದ ಹಣ ಚಿತ್ರ ಬಿಡುಗಡೆ ಬಳಿಕ ನೀಡುವುದಾಗಿ ಒಪ್ಪಂದ ಆಗಿತ್ತು.

‘ಚಿತ್ರ ಬಿಡುಗಡೆಯನ್ನ ನಾನಾ ಕಾರಣದಿಂದ ಮುಂದೂಡಿದ್ದಾರೆ. ಇತ್ತ ಹಣ ಕೂಡ ನೀಡದೆ ಸತಾಯಿಸಿದ್ದಾರೆ. ಕೌಸಲ್ಯ ರಾಣಿ ಮೇಲೆ ಕ್ರಮ ಕೈಗೊಳ್ಳಬೇಕು’ ಎಂದು ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಧೀರಜ್ ಪೈ ದೂರು ನೀಡಿದ್ದರು. ನ್ಯಾಯಾಲಯದ ಆದೇಶ ಹಿನ್ನಲೆ ಕೇಸ್ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಹನ್ಸಿಕಾ ಅವರಿಂದ ನಯನತಾರಾವರೆಗೆ; ಖಾಸಗಿ ಫೋಟೋ ಲೀಕ್ ಆಗಿ ಸಂಕಷ್ಟ ಅನುಭವಿಸಿದ್ದ ದಕ್ಷಿಣದ ನಟಿಯರಿವರು

‘ತಮಿಳರಸನ್’ ಸಿನಿಮಾದಲ್ಲಿ ವಿಜಯ್ ಆ್ಯಂಟನಿ ಅವರು ಇನ್ಸ್​ಪೆಕ್ಟರ್ ತಮಿಳರಸನ್ ಪಾತ್ರದಲ್ಲಿ ನಟಿಸಿದ್ದರು. ಸುರೇಶ್ ಗೋಪಿ, ಸಂಗೀತಾ, ಯೋಗಿ ಬಾಬು, ಕಸ್ತೂರಿ ಶಂಕರ್ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ