‘ಪೆನ್​ಡ್ರೈವ್’ ಚಿತ್ರದಲ್ಲಿ ನಟಿಸಲಿದ್ದಾರೆ ತನಿಷಾ ಕುಪ್ಪಂಡ; ಸೆಬಾಸ್ಟಿನ್ ನಿರ್ದೇಶನದಲ್ಲಿರೋ ಸಿನಿಮಾದ ಕಥೆ ಏನು?

ಸದ್ಯ ಪೆನ್​ಡ್ರೈವ್ ವಿಚಾರ ರಾಜ್ಯಾದ್ಯಂತ ಚರ್ಚೆಯಲ್ಲಿದೆ. ಹೀಗಿರುವಾಗಲೇ ‘ಪೆನ್​ಡ್ರೈವ್’ ಶೀರ್ಷಿಕೆ ಅಡಿ ಸಿನಿಮಾ ಬರುತ್ತಿದೆ. ‘ಬಿಗ್ ಬಾಸ್’ ಖ್ಯಾತಿಯ ತನಿಷಾ ಕುಪ್ಪಂಡ ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಹಾಗಾದರೆ, ಈ ಸಿನಿಮಾದ ಕಥೆ ಏನು? ಈ ಚಿತ್ರದಲ್ಲಿರೋ ವಿಚಾರಗಳೇನು ಎನ್ನುವ ಬಗ್ಗೆ ಈ ಸ್ಟೋರಿಯಲ್ಲಿದೆ ಉತ್ತರ.

‘ಪೆನ್​ಡ್ರೈವ್’ ಚಿತ್ರದಲ್ಲಿ ನಟಿಸಲಿದ್ದಾರೆ ತನಿಷಾ ಕುಪ್ಪಂಡ; ಸೆಬಾಸ್ಟಿನ್ ನಿರ್ದೇಶನದಲ್ಲಿರೋ ಸಿನಿಮಾದ ಕಥೆ ಏನು?
‘ಪೆನ್​ಡ್ರೈವ್’ ಚಿತ್ರದಲ್ಲಿ ನಟಿಸಲಿದ್ದಾರೆ ತನಿಷಾ ಕುಪ್ಪಂಡ; ಸೆಬಾಸ್ಟಿನ್ ನಿರ್ದೇಶನದಲ್ಲಿರೋ ಕಥೆ ಏನು?
Follow us
|

Updated on:Jul 03, 2024 | 11:02 AM

ಇತ್ತೀಚೆಗೆ ಪೆನ್​ಡ್ರೈವ್ ವಿಚಾರ ಸಾಕಷ್ಟು ಸದ್ದು ಮಾಡಿತ್ತು. ಇದಕ್ಕೆ ಕಾರಣ ಆಗಿದ್ದು ಪ್ರಜ್ವಲ್ ರೇವಣ್ಣ. ಮಾಜಿ ಸಂಸದನ ಖಾಸಗಿ ವಿಡಿಯೋಗಳನ್ನು ಪೆನ್​ಡ್ರೈವ್​ನಲ್ಲಿ ಹಾಕಿ ವೈರಲ್ ಮಾಡಲಾಗಿತ್ತು. ಈ ಪ್ರಕರಣ ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿತ್ತು. ಪ್ರಜ್ವಲ್ ಸದ್ಯ ಕೇಂದ್ರ ಕಾರಾಗೃಹದಲ್ಲಿ ಇದ್ದಾರೆ. ಈ ಮಧ್ಯೆ ಪೆನ್​ಡ್ರೈವ್ ಶೀರ್ಷಿಕೆ ಅಡಿಯಲ್ಲಿ ಸಿನಿಮಾ ಒಂದು ಬರುತ್ತಿದೆ. ಆದರೆ, ಈ ಚಿತ್ರಕ್ಕೂ ಅವರ ಕಥೆಗೂ ಯಾವುದೇ ಲಿಂಕ್ ಇಲ್ಲ ಎಂಬುದು ನಿರ್ದೇಶಕ ಸೆಬಾಸ್ಟಿನ್ ಡೇವಿಡ್ ಮಾತು. ಜುಲೈ 4ರಂದು ಈ ಚಿತ್ರದ ಶೀರ್ಷಿಕೆ ಅನಾವರಣ ಆಗಲಿದೆ.

‘ಪೆನ್​ಡ್ರೈವ್’ ಚಿತ್ರವನ್ನು ಲಯನ್ ಆರ್​. ವೆಂಕಟೇಶ್ ಮತ್ತು ಲಯನ್ ಎಸ್ ವೆಂಕಟೇಶ್​ ನಿರ್ಮಿಸುತ್ತಿದ್ದಾರೆ. ‘ಬಿಗ್ ಬಾಸ್’ ಖ್ಯಾತಿಯ  ತನಿಷಾ ಕುಪ್ಪಂಡ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ ಅನ್ನೋದು ವಿಶೇಷ. ರಾಧಿಕಾ, ಸಂಜನಾ ನಾಯ್ಡು, ಅರ್ಚನ, ರೇಣುಕಾ, ಭಾಗ್ಯ, ಗೀತಪ್ರಿಯಾ, ಗೀತಾ ಮೊದಲಾದವರು ಈ ಸಿನಿಮಾದಲ್ಲಿ ಬಣ್ಣ ಹಚ್ಚುತ್ತಿದ್ದಾರೆ.

ಜುಲೈ 4ರ ಬೆಳಿಗ್ಗೆ ಈ ಚಿತ್ರದ ಶೀರ್ಷಿಕೆ ಅನಾವರಣ ಆಗಲಿದೆ. ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್ ಅವರು ಈ ಚಿತ್ರದ ಟೈಟಲ್​ನ ಅನಾವರಣ ಮಾಡಲಿದ್ದಾರೆ. ತನಿಷಾ ಕುಪ್ಪಂಡ ಅವರು ‘ಬಿಗ್ ಬಾಸ್’ ಬಳಿಕ ಸಾಕಷ್ಟು ಜನಪ್ರಿಯತೆ ಪಡೆದರು. ಅವರು ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟೀವ್ ಆಗಿದ್ದಾರೆ. ಈ ಕಾರಣದಿಂದಲೇ ಅವರಿಗೆ ಈ ಸಿನಿಮಾದಲ್ಲಿ ನಟಿಸೋಕೆ ಚಾನ್ಸ್ ಸಿಕ್ಕಿದೆ.

ಇದನ್ನೂ ಓದಿ: ಕಿರಣ್ ರಾಜ್ ಸಿನಿಮಾದಲ್ಲಿ ತನಿಷಾ ಕುಪ್ಪಂಡ ರಗಡ್ ಪೋಲೀಸ್ ಅವತಾರ

ಹಾಗಾದರೆ ಈ ಸಿನಿಮಾದ ಕಥೆ ಏನು? ಈ ಬಗ್ಗೆ ನಿರ್ದೇಶಕ ಸೆಬಾಸ್ಟಿನ್ ಡೇವಿಡ್ ಮಾತನಾಡಿದ್ದಾರೆ. ‘ಇದೊಂದು ಪಕ್ಕಾ ಸಸ್ಪೆನ್ಸ್​ ಥ್ರಿಲ್ಲರ್ ಸಿನಿಮಾ. ಈ ಕಾರಣದಿಂದಲೇ ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ. ಈ ಚಿತ್ರವನ್ನು ಮಾಡಬೇಕು ಎನ್ನುವ ಆಲೋಚನೆ ಮೊದಲೇ ಇತ್ತು. ಆದರೆ, ಟೈಟಲ್ ರಿಜಿಸ್ಟರ್ ಮಾಡಿರಲಿಲ್ಲ. ಈಗ ಪೆನ್​ಡ್ರೈವ್ ವಿಚಾರ ಚರ್ಚೆಯಲ್ಲಿರುವುದರಿಂದ ಸ್ವಲ್ಪ ಬೇಗ ಸಿನಿಮಾ ಮಾಡಬೇಕು ಎನಿಸಿತು ಅಷ್ಟೇ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:01 am, Wed, 3 July 24

ತಾಜಾ ಸುದ್ದಿ
ಪ್ರೈಮ್ ಡೇ ವಿಶೇಷ ಆಫರ್ ಸೇಲ್ ದಿನಾಂಕ ಪ್ರಕಟಿಸಿದ ಅಮೆಜಾನ್
ಪ್ರೈಮ್ ಡೇ ವಿಶೇಷ ಆಫರ್ ಸೇಲ್ ದಿನಾಂಕ ಪ್ರಕಟಿಸಿದ ಅಮೆಜಾನ್
ಆಷಾಢ ಮಾಸದಲ್ಲಿ ಮೆಹಂದಿ ಹಚ್ಚಿಕೊಳ್ಳುವುದರ ಮಹತ್ವ ತಿಳಿದುಕೊಳ್ಳಿ
ಆಷಾಢ ಮಾಸದಲ್ಲಿ ಮೆಹಂದಿ ಹಚ್ಚಿಕೊಳ್ಳುವುದರ ಮಹತ್ವ ತಿಳಿದುಕೊಳ್ಳಿ
ಆಷಾಢ ಅಮಾವಾಸ್ಯೆ ದಿನ ಲಕ್ಷ್ಮಿ ದರ್ಶನ, ಗೋವು ಸ್ಪರ್ಶದಿಂದ ಒಳಿತಾಗಲಿದೆ
ಆಷಾಢ ಅಮಾವಾಸ್ಯೆ ದಿನ ಲಕ್ಷ್ಮಿ ದರ್ಶನ, ಗೋವು ಸ್ಪರ್ಶದಿಂದ ಒಳಿತಾಗಲಿದೆ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ರಾತ್ರಿ ಆದ್ರೂ ಜನಸಾಗರ ಕಂಡು ಕೈ ಎತ್ತಿ ಮುಗಿದ ರೋಹಿತ್, ಕೊಹ್ಲಿ
ರಾತ್ರಿ ಆದ್ರೂ ಜನಸಾಗರ ಕಂಡು ಕೈ ಎತ್ತಿ ಮುಗಿದ ರೋಹಿತ್, ಕೊಹ್ಲಿ
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌