AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪೆನ್​ಡ್ರೈವ್’ ಚಿತ್ರದಲ್ಲಿ ನಟಿಸಲಿದ್ದಾರೆ ತನಿಷಾ ಕುಪ್ಪಂಡ; ಸೆಬಾಸ್ಟಿನ್ ನಿರ್ದೇಶನದಲ್ಲಿರೋ ಸಿನಿಮಾದ ಕಥೆ ಏನು?

ಸದ್ಯ ಪೆನ್​ಡ್ರೈವ್ ವಿಚಾರ ರಾಜ್ಯಾದ್ಯಂತ ಚರ್ಚೆಯಲ್ಲಿದೆ. ಹೀಗಿರುವಾಗಲೇ ‘ಪೆನ್​ಡ್ರೈವ್’ ಶೀರ್ಷಿಕೆ ಅಡಿ ಸಿನಿಮಾ ಬರುತ್ತಿದೆ. ‘ಬಿಗ್ ಬಾಸ್’ ಖ್ಯಾತಿಯ ತನಿಷಾ ಕುಪ್ಪಂಡ ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಹಾಗಾದರೆ, ಈ ಸಿನಿಮಾದ ಕಥೆ ಏನು? ಈ ಚಿತ್ರದಲ್ಲಿರೋ ವಿಚಾರಗಳೇನು ಎನ್ನುವ ಬಗ್ಗೆ ಈ ಸ್ಟೋರಿಯಲ್ಲಿದೆ ಉತ್ತರ.

‘ಪೆನ್​ಡ್ರೈವ್’ ಚಿತ್ರದಲ್ಲಿ ನಟಿಸಲಿದ್ದಾರೆ ತನಿಷಾ ಕುಪ್ಪಂಡ; ಸೆಬಾಸ್ಟಿನ್ ನಿರ್ದೇಶನದಲ್ಲಿರೋ ಸಿನಿಮಾದ ಕಥೆ ಏನು?
‘ಪೆನ್​ಡ್ರೈವ್’ ಚಿತ್ರದಲ್ಲಿ ನಟಿಸಲಿದ್ದಾರೆ ತನಿಷಾ ಕುಪ್ಪಂಡ; ಸೆಬಾಸ್ಟಿನ್ ನಿರ್ದೇಶನದಲ್ಲಿರೋ ಕಥೆ ಏನು?
ರಾಜೇಶ್ ದುಗ್ಗುಮನೆ
|

Updated on:Jul 03, 2024 | 11:02 AM

Share

ಇತ್ತೀಚೆಗೆ ಪೆನ್​ಡ್ರೈವ್ ವಿಚಾರ ಸಾಕಷ್ಟು ಸದ್ದು ಮಾಡಿತ್ತು. ಇದಕ್ಕೆ ಕಾರಣ ಆಗಿದ್ದು ಪ್ರಜ್ವಲ್ ರೇವಣ್ಣ. ಮಾಜಿ ಸಂಸದನ ಖಾಸಗಿ ವಿಡಿಯೋಗಳನ್ನು ಪೆನ್​ಡ್ರೈವ್​ನಲ್ಲಿ ಹಾಕಿ ವೈರಲ್ ಮಾಡಲಾಗಿತ್ತು. ಈ ಪ್ರಕರಣ ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿತ್ತು. ಪ್ರಜ್ವಲ್ ಸದ್ಯ ಕೇಂದ್ರ ಕಾರಾಗೃಹದಲ್ಲಿ ಇದ್ದಾರೆ. ಈ ಮಧ್ಯೆ ಪೆನ್​ಡ್ರೈವ್ ಶೀರ್ಷಿಕೆ ಅಡಿಯಲ್ಲಿ ಸಿನಿಮಾ ಒಂದು ಬರುತ್ತಿದೆ. ಆದರೆ, ಈ ಚಿತ್ರಕ್ಕೂ ಅವರ ಕಥೆಗೂ ಯಾವುದೇ ಲಿಂಕ್ ಇಲ್ಲ ಎಂಬುದು ನಿರ್ದೇಶಕ ಸೆಬಾಸ್ಟಿನ್ ಡೇವಿಡ್ ಮಾತು. ಜುಲೈ 4ರಂದು ಈ ಚಿತ್ರದ ಶೀರ್ಷಿಕೆ ಅನಾವರಣ ಆಗಲಿದೆ.

‘ಪೆನ್​ಡ್ರೈವ್’ ಚಿತ್ರವನ್ನು ಲಯನ್ ಆರ್​. ವೆಂಕಟೇಶ್ ಮತ್ತು ಲಯನ್ ಎಸ್ ವೆಂಕಟೇಶ್​ ನಿರ್ಮಿಸುತ್ತಿದ್ದಾರೆ. ‘ಬಿಗ್ ಬಾಸ್’ ಖ್ಯಾತಿಯ  ತನಿಷಾ ಕುಪ್ಪಂಡ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ ಅನ್ನೋದು ವಿಶೇಷ. ರಾಧಿಕಾ, ಸಂಜನಾ ನಾಯ್ಡು, ಅರ್ಚನ, ರೇಣುಕಾ, ಭಾಗ್ಯ, ಗೀತಪ್ರಿಯಾ, ಗೀತಾ ಮೊದಲಾದವರು ಈ ಸಿನಿಮಾದಲ್ಲಿ ಬಣ್ಣ ಹಚ್ಚುತ್ತಿದ್ದಾರೆ.

ಜುಲೈ 4ರ ಬೆಳಿಗ್ಗೆ ಈ ಚಿತ್ರದ ಶೀರ್ಷಿಕೆ ಅನಾವರಣ ಆಗಲಿದೆ. ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್ ಅವರು ಈ ಚಿತ್ರದ ಟೈಟಲ್​ನ ಅನಾವರಣ ಮಾಡಲಿದ್ದಾರೆ. ತನಿಷಾ ಕುಪ್ಪಂಡ ಅವರು ‘ಬಿಗ್ ಬಾಸ್’ ಬಳಿಕ ಸಾಕಷ್ಟು ಜನಪ್ರಿಯತೆ ಪಡೆದರು. ಅವರು ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟೀವ್ ಆಗಿದ್ದಾರೆ. ಈ ಕಾರಣದಿಂದಲೇ ಅವರಿಗೆ ಈ ಸಿನಿಮಾದಲ್ಲಿ ನಟಿಸೋಕೆ ಚಾನ್ಸ್ ಸಿಕ್ಕಿದೆ.

ಇದನ್ನೂ ಓದಿ: ಕಿರಣ್ ರಾಜ್ ಸಿನಿಮಾದಲ್ಲಿ ತನಿಷಾ ಕುಪ್ಪಂಡ ರಗಡ್ ಪೋಲೀಸ್ ಅವತಾರ

ಹಾಗಾದರೆ ಈ ಸಿನಿಮಾದ ಕಥೆ ಏನು? ಈ ಬಗ್ಗೆ ನಿರ್ದೇಶಕ ಸೆಬಾಸ್ಟಿನ್ ಡೇವಿಡ್ ಮಾತನಾಡಿದ್ದಾರೆ. ‘ಇದೊಂದು ಪಕ್ಕಾ ಸಸ್ಪೆನ್ಸ್​ ಥ್ರಿಲ್ಲರ್ ಸಿನಿಮಾ. ಈ ಕಾರಣದಿಂದಲೇ ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ. ಈ ಚಿತ್ರವನ್ನು ಮಾಡಬೇಕು ಎನ್ನುವ ಆಲೋಚನೆ ಮೊದಲೇ ಇತ್ತು. ಆದರೆ, ಟೈಟಲ್ ರಿಜಿಸ್ಟರ್ ಮಾಡಿರಲಿಲ್ಲ. ಈಗ ಪೆನ್​ಡ್ರೈವ್ ವಿಚಾರ ಚರ್ಚೆಯಲ್ಲಿರುವುದರಿಂದ ಸ್ವಲ್ಪ ಬೇಗ ಸಿನಿಮಾ ಮಾಡಬೇಕು ಎನಿಸಿತು ಅಷ್ಟೇ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:01 am, Wed, 3 July 24

Follow Us
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!