AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಮೃದ್ಧಿ ರಂಗತಂಡ’ ಉದ್ಘಾಟಿಸಿದ ಬಿಗ್ ಬಾಸ್ ತನಿಷಾ, ಎನ್.ಎಂ. ಸುರೇಶ್

‘ಬಿಗ್ ಬಾಸ್ ಕನ್ನಡ’ ಶೋ ಮೂಲಕ ಖ್ಯಾತಿ ಹೆಚ್ಚಿಸಿಕೊಂಡ ನಟಿ ತನಿಷಾ ಕುಪ್ಪಂಡ ಅವರು ಹಲವು ಕಾರ್ಯಕ್ರಮಗಳಿಗೆ ಮುಖ್ಯ ಅಥಿತಿಯಾಗಿ ತೆರಳುತ್ತಿದ್ದಾರೆ. ಈಗ ಅವರು ‘ಸಮೃದ್ಧಿ ರಂಗತಂಡ’ ಸಂಸ್ಥೆಯನ್ನು ಉದ್ಘಾಟಿಸಿದ್ದಾರೆ. ಅವರ ಜೊತೆ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್​.ಎಂ. ಸುರೇಶ್ ಕೂಡ ಸಾಥ್ ನೀಡಿದ್ದಾರೆ. ಸಮೃದ್ಧಿ ರಂಗತಂಡದ ಬಗ್ಗೆ ಇಲ್ಲಿದೆ ಮಾಹಿತಿ..

‘ಸಮೃದ್ಧಿ ರಂಗತಂಡ’ ಉದ್ಘಾಟಿಸಿದ ಬಿಗ್ ಬಾಸ್ ತನಿಷಾ, ಎನ್.ಎಂ. ಸುರೇಶ್
‘ಸಮೃದ್ಧಿ ರಂಗತಂಡ’ ಉದ್ಘಾಟನೆ
ಮದನ್​ ಕುಮಾರ್​
|

Updated on: Nov 14, 2024 | 9:06 PM

Share

ಬಣ್ಣದ ಲೋಕಕ್ಕೆ ಎಂಟ್ರಿ ನೀಡುವವರಿಗೆ ಸೂಕ್ತ ತರಬೇತಿ ಬೇಕು. ಅಂಥವರಿಗಾಗಿಯೇ ‘ಸಮೃದ್ಧಿ ರಂಗತಂಡ’ ಆರಂಭ ಆಗಿದೆ. ಈ ತರಬೇತಿ ಸಂಸ್ಥೆಗೆ ಇತ್ತೀಚೆಗೆ ಚಾಲನೆ ನೀಡಲಾಯಿತು. ಸಿನಿಮಾ, ರಂಗಭೂಮಿ, ಕಿರುತೆರೆ ಕ್ಷೇತ್ರದಲ್ಲಿ ಕಲಾವಿದರು ಅಥವಾ ತಂತ್ರಜ್ಞರಾಗಲು ಬಯಸುವವರಿಗೆ ಈ ಸಂಸ್ಥೆಯಲ್ಲಿ ತರಬೇತಿ ನೀಡಲಾಗುತ್ತದೆ. ಮನರಂಜನಾ ಕ್ಷೇತ್ರದಲ್ಲಿ ತೊಡಗಿಕೊಳ್ಳಲು ಆಸಕ್ತಿ ಇರುವವರಿಗೆ ತರಬೇತಿ ಮತ್ತು ಮಾರ್ಗದರ್ಶನ ನೀಡುವ ಸಲುವಾಗಿ ಈ ಸಂಸ್ಥೆ ಆರಂಭ ಆಗಿದೆ. ತನಿಷಾ ಕುಪ್ಪಂಡ ಮತ್ತು ಎನ್​.ಎಂ. ಸುರೇಶ್​ ಅವರು ಚಾಲನೆ ನೀಡಿದರು.

ಚಂದನ್ ಬಿ. ಮತ್ತು ನೇತ್ರಾವತಿ ಚಂದನ್ ಅವರು ‘ಸಮೃದ್ಧಿ ರಂಗತಂಡ’ ತರಬೇತಿ ಸಂಸ್ಥೆಯನ್ನು ಶುರು ಮಾಡಿದ್ದಾರೆ. ಬಾಣಾವರ, ಜಾಲಹಳ್ಳಿ, ಹೆಸರುಘಟ್ಟ, ಯಶವಂತಪುರ, ನೆಲಮಂಗಲ, ಮತ್ತೀಕೆರೆ ಭಾಗದಲ್ಲಿನ ಸಿನಿಮಾಸಕ್ತರಿಗೆ ಅನುಕೂಲ ಆಗಲಿ ಎಂಬ ಉದ್ದೇಶದಲ್ಲಿ ಅವರು ಸಂಸ್ಥೆಯನ್ನು ಪ್ರಾರಂಭಿಸಿದ್ದಾರೆ. ಚಿಕ್ಕಬಾಣಾವರದ ಆಚಾರ್ಯ ಕಾಲೇಜ್ ರಸ್ತೆಯ ಶಾಂತಿನಗರ ಆರ್ಚ್ ಸಮೀಪ ಚಂದನ್ ಹಾಗೂ ನೇತ್ರಾವತಿ ಅವರು ‘ಸಮೃದ್ಧಿ ರಂಗತಂಡ’ವನ್ನು ಆರಂಭಿಸಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್​ 10’ ಮೂಲಕ ತನಿಷಾ ಕುಪ್ಪಂಡ ಅವರು ಸಾಕಷ್ಟು ಖ್ಯಾತಿ ಗಳಿಸಿದ್ದಾರೆ. ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆಗಿದ್ದಾರೆ. ಅವರು ‘ಸಮೃದ್ಧಿ ರಂಗತಂಡ’ದ ಲೋಗೋ ಅನಾವರಣ ಮಾಡಿದರು. ‘ಕಲೆ ಕಲಿಯಿರಿ’ ಎನ್ನುವ ಘೋಷವಾಕ್ಯದೊಂದಿಗೆ ಈ ಸಂಸ್ಥೆಯನ್ನು ಪ್ರಾರಂಭಿಸಲಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ಎನ್.ಎಂ. ಸುರೇಶ್ ಅವರು ಈ ಸಂಸ್ಥೆಯ ವೆಬ್​ಸೈಟ್​ಗೆ ಚಾಲನೆ ನೀಡುವ ಮೂಲಕ ಶುಭ ಕೋರಿದರು.

ಇದನ್ನೂ ಓದಿ: ಹೊಸ ಫೋಟೋಶೂಟ್​ನಲ್ಲಿ ಮಿಂಚಿದ ತನಿಷಾ ಕುಪ್ಪಂಡ

ಚಂದನ್ ಬಿ. ಅವರು ‘ಸಮೃದ್ಧಿ ರಂಗತಂಡ’ ಬಗ್ಗೆ ಮಾಹಿತಿ ಹಂಚಿಕೊಂಡರು. ಸಿನಿಮಾ, ರಂಗಭೂಮಿ, ಅಭಿನಯ, ಎಡಿಟಿಂಗ್, ಫೋಟೋಗ್ರಫಿ ಮುಂತಾದ ವಿಭಾಗಗಳಲ್ಲಿ ತರಬೇತಿ ಸಿಗಲಿದೆ ಎಂದು ಅವರು ಹೇಳಿದರು. ‘ಚಂದನ್ ಅವರ ಪ್ರಯತ್ನಕ್ಕೆ ಒಳ್ಳೆಯದಾಗಲಿ. ಸಮೃದ್ದಿ, ಈ ಹೆಸರಲ್ಲೇ ಒಂದು ಬೆಳವಣಿಗೆ ಇದೆ. ಈ ಸಂಸ್ಥೆಯಿಂದ ಅನೇಕ ಪ್ರತಿಭಾವಂತರು ಹೊರಬರಲಿ’ ಎಂದು ತನಿಷಾ ಕುಪ್ಪಂಡ ವಿಶ್ ಮಾಡಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್