AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಮೃದ್ಧಿ ರಂಗತಂಡ’ ಉದ್ಘಾಟಿಸಿದ ಬಿಗ್ ಬಾಸ್ ತನಿಷಾ, ಎನ್.ಎಂ. ಸುರೇಶ್

‘ಬಿಗ್ ಬಾಸ್ ಕನ್ನಡ’ ಶೋ ಮೂಲಕ ಖ್ಯಾತಿ ಹೆಚ್ಚಿಸಿಕೊಂಡ ನಟಿ ತನಿಷಾ ಕುಪ್ಪಂಡ ಅವರು ಹಲವು ಕಾರ್ಯಕ್ರಮಗಳಿಗೆ ಮುಖ್ಯ ಅಥಿತಿಯಾಗಿ ತೆರಳುತ್ತಿದ್ದಾರೆ. ಈಗ ಅವರು ‘ಸಮೃದ್ಧಿ ರಂಗತಂಡ’ ಸಂಸ್ಥೆಯನ್ನು ಉದ್ಘಾಟಿಸಿದ್ದಾರೆ. ಅವರ ಜೊತೆ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್​.ಎಂ. ಸುರೇಶ್ ಕೂಡ ಸಾಥ್ ನೀಡಿದ್ದಾರೆ. ಸಮೃದ್ಧಿ ರಂಗತಂಡದ ಬಗ್ಗೆ ಇಲ್ಲಿದೆ ಮಾಹಿತಿ..

‘ಸಮೃದ್ಧಿ ರಂಗತಂಡ’ ಉದ್ಘಾಟಿಸಿದ ಬಿಗ್ ಬಾಸ್ ತನಿಷಾ, ಎನ್.ಎಂ. ಸುರೇಶ್
‘ಸಮೃದ್ಧಿ ರಂಗತಂಡ’ ಉದ್ಘಾಟನೆ
ಮದನ್​ ಕುಮಾರ್​
|

Updated on: Nov 14, 2024 | 9:06 PM

Share

ಬಣ್ಣದ ಲೋಕಕ್ಕೆ ಎಂಟ್ರಿ ನೀಡುವವರಿಗೆ ಸೂಕ್ತ ತರಬೇತಿ ಬೇಕು. ಅಂಥವರಿಗಾಗಿಯೇ ‘ಸಮೃದ್ಧಿ ರಂಗತಂಡ’ ಆರಂಭ ಆಗಿದೆ. ಈ ತರಬೇತಿ ಸಂಸ್ಥೆಗೆ ಇತ್ತೀಚೆಗೆ ಚಾಲನೆ ನೀಡಲಾಯಿತು. ಸಿನಿಮಾ, ರಂಗಭೂಮಿ, ಕಿರುತೆರೆ ಕ್ಷೇತ್ರದಲ್ಲಿ ಕಲಾವಿದರು ಅಥವಾ ತಂತ್ರಜ್ಞರಾಗಲು ಬಯಸುವವರಿಗೆ ಈ ಸಂಸ್ಥೆಯಲ್ಲಿ ತರಬೇತಿ ನೀಡಲಾಗುತ್ತದೆ. ಮನರಂಜನಾ ಕ್ಷೇತ್ರದಲ್ಲಿ ತೊಡಗಿಕೊಳ್ಳಲು ಆಸಕ್ತಿ ಇರುವವರಿಗೆ ತರಬೇತಿ ಮತ್ತು ಮಾರ್ಗದರ್ಶನ ನೀಡುವ ಸಲುವಾಗಿ ಈ ಸಂಸ್ಥೆ ಆರಂಭ ಆಗಿದೆ. ತನಿಷಾ ಕುಪ್ಪಂಡ ಮತ್ತು ಎನ್​.ಎಂ. ಸುರೇಶ್​ ಅವರು ಚಾಲನೆ ನೀಡಿದರು.

ಚಂದನ್ ಬಿ. ಮತ್ತು ನೇತ್ರಾವತಿ ಚಂದನ್ ಅವರು ‘ಸಮೃದ್ಧಿ ರಂಗತಂಡ’ ತರಬೇತಿ ಸಂಸ್ಥೆಯನ್ನು ಶುರು ಮಾಡಿದ್ದಾರೆ. ಬಾಣಾವರ, ಜಾಲಹಳ್ಳಿ, ಹೆಸರುಘಟ್ಟ, ಯಶವಂತಪುರ, ನೆಲಮಂಗಲ, ಮತ್ತೀಕೆರೆ ಭಾಗದಲ್ಲಿನ ಸಿನಿಮಾಸಕ್ತರಿಗೆ ಅನುಕೂಲ ಆಗಲಿ ಎಂಬ ಉದ್ದೇಶದಲ್ಲಿ ಅವರು ಸಂಸ್ಥೆಯನ್ನು ಪ್ರಾರಂಭಿಸಿದ್ದಾರೆ. ಚಿಕ್ಕಬಾಣಾವರದ ಆಚಾರ್ಯ ಕಾಲೇಜ್ ರಸ್ತೆಯ ಶಾಂತಿನಗರ ಆರ್ಚ್ ಸಮೀಪ ಚಂದನ್ ಹಾಗೂ ನೇತ್ರಾವತಿ ಅವರು ‘ಸಮೃದ್ಧಿ ರಂಗತಂಡ’ವನ್ನು ಆರಂಭಿಸಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್​ 10’ ಮೂಲಕ ತನಿಷಾ ಕುಪ್ಪಂಡ ಅವರು ಸಾಕಷ್ಟು ಖ್ಯಾತಿ ಗಳಿಸಿದ್ದಾರೆ. ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆಗಿದ್ದಾರೆ. ಅವರು ‘ಸಮೃದ್ಧಿ ರಂಗತಂಡ’ದ ಲೋಗೋ ಅನಾವರಣ ಮಾಡಿದರು. ‘ಕಲೆ ಕಲಿಯಿರಿ’ ಎನ್ನುವ ಘೋಷವಾಕ್ಯದೊಂದಿಗೆ ಈ ಸಂಸ್ಥೆಯನ್ನು ಪ್ರಾರಂಭಿಸಲಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ಎನ್.ಎಂ. ಸುರೇಶ್ ಅವರು ಈ ಸಂಸ್ಥೆಯ ವೆಬ್​ಸೈಟ್​ಗೆ ಚಾಲನೆ ನೀಡುವ ಮೂಲಕ ಶುಭ ಕೋರಿದರು.

ಇದನ್ನೂ ಓದಿ: ಹೊಸ ಫೋಟೋಶೂಟ್​ನಲ್ಲಿ ಮಿಂಚಿದ ತನಿಷಾ ಕುಪ್ಪಂಡ

ಚಂದನ್ ಬಿ. ಅವರು ‘ಸಮೃದ್ಧಿ ರಂಗತಂಡ’ ಬಗ್ಗೆ ಮಾಹಿತಿ ಹಂಚಿಕೊಂಡರು. ಸಿನಿಮಾ, ರಂಗಭೂಮಿ, ಅಭಿನಯ, ಎಡಿಟಿಂಗ್, ಫೋಟೋಗ್ರಫಿ ಮುಂತಾದ ವಿಭಾಗಗಳಲ್ಲಿ ತರಬೇತಿ ಸಿಗಲಿದೆ ಎಂದು ಅವರು ಹೇಳಿದರು. ‘ಚಂದನ್ ಅವರ ಪ್ರಯತ್ನಕ್ಕೆ ಒಳ್ಳೆಯದಾಗಲಿ. ಸಮೃದ್ದಿ, ಈ ಹೆಸರಲ್ಲೇ ಒಂದು ಬೆಳವಣಿಗೆ ಇದೆ. ಈ ಸಂಸ್ಥೆಯಿಂದ ಅನೇಕ ಪ್ರತಿಭಾವಂತರು ಹೊರಬರಲಿ’ ಎಂದು ತನಿಷಾ ಕುಪ್ಪಂಡ ವಿಶ್ ಮಾಡಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!