AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನಿಷಾ ಕುಪ್ಪಂಡ, ಎಟಿಎಂ ಮಂಜು, ಸೋನಿಯಾ ರಾವುತ್ ಹೊಸ ಸಿನಿಮಾ ‘ಕೆಎ 18’; ಏನಿದರ ಕಹಾನಿ?

ಹೊಸ ಚಿತ್ರಕ್ಕೆ ‘ಕೆಎ 18’ ಎಂಬ ಟೈಟಲ್ ಇದೆ. ಈ ಶೀರ್ಷಿಕೆ ಕೇಳಿದ ಕೂಡಲೇ ಇದು ಚಿಕ್ಕಮಗಳೂರು ಸುತ್ತಮುತ್ತ ನಡೆಯುವ ಕಥೆ ಎಂಬುದು ಗೊತ್ತಾಗುತ್ತದೆ. ಕನ್ನಡದ ಈ ಸಿನಿಮಾವನ್ನು ತೆಲುಗು, ಹಿಂದಿ, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆ ಮಾಡುವ ಪ್ಲ್ಯಾನ್ ಚಿತ್ರತಂಡಕ್ಕಿದೆ.

ತನಿಷಾ ಕುಪ್ಪಂಡ, ಎಟಿಎಂ ಮಂಜು, ಸೋನಿಯಾ ರಾವುತ್ ಹೊಸ ಸಿನಿಮಾ ‘ಕೆಎ 18’; ಏನಿದರ ಕಹಾನಿ?
Ka 18 Movie Cast
ಮದನ್​ ಕುಮಾರ್​
|

Updated on: Jun 23, 2026 | 7:31 PM

Share

ಎಟಿಎಂ ಮಂಜು, ತನಿಷಾ ಕುಪ್ಪಂಡ (Tanisha Kuppanda) ಹಾಗೂ ಸೋನಿಯಾ ರಾವುತ್ ಅವರು ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ ಸಿನಿಮಾಗೆ ‘ಕೆಎ 18’ (KA 18) ಎಂದು ಡಿಫರೆಂಟ್ ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾದ ಮುಹೂರ್ತ ಸಮಾರಂಭವು ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ಇತ್ತೀಚೆಗೆ ನೆರವೇರಿತು. ವಿ. ನಾಗೇಂದ್ರ ಪ್ರಸಾದ್ ಅವರು ಮೊದಲ ದೃಶ್ಯಕ್ಕೆ ಕ್ಲ್ಯಾಪ್ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು. ನಟ ದರ್ಶನ್ ಅವರ ಅಳಿಯ ಮನೋಜ್ ಅವರು ಕ್ಯಾಮೆರಾ ಚಾಲನೆ ಮಾಡಿದರು. ‘ಅಪ್ಪಾಜಿ ಪ್ರೊಡಕ್ಷನ್ಸ್’ ಮೂಲಕ ಹಿರೇಮಗಳೂರು ಮೂಲದ ಎಟಿಎಂ ಮಂಜು ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ನಿರ್ಮಾಣ ಮಾಡುವುದರ ಜತೆಗೆ ನಾಯಕನಾಗಿಯೂ ಎಟಿಎಂ ಮಂಜು ಅವರು ನಟಿಸುತ್ತಿದ್ದಾರೆ. ನಟನಾಗಿ ಇದು ಅವರಿಗೆ ಮೊದಲ ಅನುಭವ. ಮೋಹನ್ ಚಿಕ್ಕಿ ಅವರು ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಉತ್ತರಕಾಂಡದ ಸೋನಿಯಾ ರಾವುತ್ ಅವರು ಸಹ-ನಿರ್ಮಾಪಕಿ ಆಗಿದ್ದಾರೆ. ಅಲ್ಲದೇ, ಒಂದು ಹಾಡಿಗೆ ಹೆಜ್ಜೆ ಹಾಕುತ್ತಿದ್ದಾರೆ.

ಎಟಿಎಂ ಮಂಜು, ತನಿಷಾ ಕುಪ್ಪಂಡ, ಸೋನಿಯಾ ರಾವುತ್ ಮಾತ್ರವಲ್ಲದೇ ದೀಪು, ವಿಜಿ, ಪೂಜಾ ಮುಂತಾದ ಕಲಾವಿದರ ಕೂಡ ‘ಕೆಎ 18’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಶಶಿಕುಮಾರ್ ಜೆ.ಕೆ. ಅವರು ಸಾಹಿತ್ಯ ಬರೆದಿದ್ದಾರೆ, ಮುಂಜಾನೆ ಮಂಜು ಅವರ ಛಾಯಾಗ್ರಹಣ, ರಘು ಶಿವರಾಮ್ ಅವರ ಸಂಕಲನ, ವೈಲೆಂಟ್ ವೇಲು ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕೆ ಇರಲಿದೆ. ಮಂಜುನಾಥ್ ದೈವಜ್ಞ ಅವರು ನಿರ್ಮಾಣ ನಿರ್ವಹಣೆ ಮಾಡುತ್ತಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ‘ಕೆಎ 18’ ಸಿನಿಮಾದ ಬಗ್ಗೆ ನಿರ್ದೇಶಕ ಮೋಹನ್ ಚಿಕ್ಕಿ ಅವರು ಮಾಹಿತಿ ನೀಡಿದರು. ‘ನಿರ್ಮಾಪಕರು ಹೇಳಿದ ಒಂದು ಎಳೆಯನ್ನು ಬಳಸಿಕೊಂಡು ಅದನ್ನು ವಿಸ್ತಾರ ಮಾಡಿಕೊಳ್ಳಲಾಗಿದೆ. ಚಿತ್ರವು ಎರಡು ಪಾತ್ರಗಳ ಸುತ್ತ ನಡೆಯುತ್ತಿದೆ. ಸಂಜೆ 6 ಗಂಟೆಯಿಂದ ಬೆಳಿಗ್ಗೆ 6 ಗಂಟೆ ತನಕ ನಡೆಯುವ ಘಟನೆಯಲ್ಲಿ ನಾಲ್ಕೈದು ಅಂಶಗಳು ಬರುತ್ತದೆ. ಚಿಕ್ಕಮಗಳೂರು ಸುತ್ತಮುತ್ತ ಸಂಪೂರ್ಣ ಶೂಟಿಂಗ್ ಮಾಡಲಾಗುತ್ತದೆ’ ಎಂದು ಅವರು ಹೇಳಿದರು.

ಇದನ್ನೂ ಓದಿ: ತನಿಷಾ ಕುಪ್ಪಂಡ ಜೊತೆ ಅಸಭ್ಯವಾಗಿ ವರ್ತಿಸಿದ ಫೋಟೋಗ್ರಾಫರ್; ನಟಿಯ ನೇರ ಕ್ಲಾಸ್

ನಿರ್ಮಾಪಕ, ನಟ ಎಟಿಎಂ ಮಂಜು ಅವರು ಚಿತ್ರದ ಬಗ್ಗೆ ಮಾತನಾಡಿದರು. ‘ಶಾಲೆ ಕಾಲೇಜು ದಿನಗಳಿಂದಲೂ ನಾಟಕ ಪ್ರೇಮಿ. ಅಂದಿನಿಂದಲೇ ಸಿನಿಮಾ ಮಾಡಬೇಕೆಂಬ ಆಸೆ ಇತ್ತು. ಅದಕ್ಕೆ ಈಗ ಕಾಲ ಕೂಡಿಬಂದಿದೆ. 2000ನೇ ಇಸವಿಯಲ್ಲಿ ಅಪ್ಪನೊಂದಿಗೆ ಕೆಮ್ಮಣ್ಣುಗುಂಡಿಗೆ ಹೋಗಿದ್ದಾಗ ಅಲ್ಲಿ ನೋಡಿದ ಘಟನೆಯನ್ನು ನಿರ್ದೇಶಕರಿಗೆ ಹೇಳಿದೆ. ಅದರ ಬಗ್ಗೆ ಕಥೆ ಇದೆ. ಅಲ್ಲದೇ ಮೂಢನಂಬಿಕೆ ಅಂಶವನ್ನು ತೆಗೆದುಕೊಳ್ಳಲಾಗಿದೆ’ ಎಂದು ಅವರು ತಿಳಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ