Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರದ ಮಧ್ಯದಲ್ಲಿ ನಡೆಯಿತು ಎಲಿಮಿನೇಷನ್; ಬಿಗ್ ಬಾಸ್​ನಿಂದ ಪ್ರಮುಖರೇ ಔಟ್​

ಈ ವಾರ ತನಿಷಾ ಕುಪ್ಪಂಡ, ಕಾರ್ತಿಕ್, ವರ್ತೂರು ಸಂತೋಷ್, ಪ್ರತಾಪ್, ವಿನಯ್, ನಮ್ರತಾ ನಾಮಿನೇಟ್ ಆಗಿದ್ದರು. ತುಕಾಲಿ ಸಂತೋಷ್ ಹಾಗೂ ಸಂಗೀತಾ ನಾಮಿನೇಷನ್​ನಿಂದ ಬಚಾವ್ ಆಗಿದ್ದರು. ಈಗ ದೊಡ್ಮನೆಯಿಂದ ಹೊರ ಹೋಗಿದ್ದಾರೆ.

ವಾರದ ಮಧ್ಯದಲ್ಲಿ ನಡೆಯಿತು ಎಲಿಮಿನೇಷನ್; ಬಿಗ್ ಬಾಸ್​ನಿಂದ ಪ್ರಮುಖರೇ ಔಟ್​
ಬಿಗ್ ಬಾಸ್ ಮನೆ
Follow us
ರಾಜೇಶ್ ದುಗ್ಗುಮನೆ
|

Updated on: Jan 18, 2024 | 7:16 AM

ಬಿಗ್ ಬಾಸ್ ಮನೆಯಲ್ಲಿ ಕಳೆದ ವಾರ ಯಾವುದೇ ಎಲಿಮಿನೇಷನ್ ನಡೆದಿರಲಿಲ್ಲ. ಹೀಗಾಗಿ, ಈ ವಾರ ಡಬಲ್ ಎಲಿಮಿನೇಷನ್, ಮುಂದಿನ ವಾರದ ಮಧ್ಯದಲ್ಲಿ ಒಂದು ಎಲಿಮಿನೇಷನ್ ನಡೆಯಬಹುದ ಎಂದು ಎಲ್ಲರೂ ಭಾವಿಸಿದ್ದರು. ಈಗ ಬಿಗ್ ಬಾಸ್ ಟ್ವಿಸ್ಟ್ ನೀಡಿದ್ದಾರೆ. ಈ ವಾರದ ಮಧ್ಯವೇ ಒಂದು ಎಲಿಮಿನೇಷನ್ ನಡೆದಿದೆ. ಪ್ರಮುಖ ಸ್ಪರ್ಧಿಯೇ ಎಲಿಮಿನೇಟ್ ಆಗಿದ್ದಾರೆ. ಈ ಮೂಲಕ ಬಿಗ್ ಬಾಸ್ (Bigg Boss) ಮನೆಯಲ್ಲಿ ಈಗ ಉಳಿದುಕೊಂಡಿದ್ದು ಏಳು ಮಂದಿ ಮಾತ್ರ. ಇವರಲ್ಲಿ ಐವರು ಫಿನಾಲೆ ತಲುಪಲಿದ್ದಾರೆ.

ಬಿಗ್ ಬಾಸ್ ಮನೆ ಆರಂಭದಲ್ಲಿ ತುಂಬಿತ್ತು. ಆ ಬಳಿಕ ಒಬ್ಬೊಬ್ಬರೇ ಎಲಿಮಿನೇಟ್ ಆಗುತ್ತಾ ಬಂದರು. ನಂತರ ಇಬ್ಬರು ವೈಲ್ಡ್ ಕಾರ್ಡ್ ಮೂಲಕ ಬಂದವರು, ಬಂದಷ್ಟೇ ವೇಗದಲ್ಲಿ ಹೊರ ಹೋದರು. ಎಲಿಮಿನೇಟ್ ಆದ ಹಲವು ಸ್ಪರ್ಧಿಗಳು ದೊಡ್ಮನೆಗೆ ಬಂದಿದ್ದಾರೆ. ಅವರು ಸಂಭ್ರಮದಿಂದ ಕಾಲ ಕಳೆದಿದ್ದಾರೆ. ಒಂದು ದಿನ ಇದ್ದು ಅವರು ದೊಡ್ಮನೆಯಿಂದ ಹೋಗಿದ್ದಾರೆ. ಇದಾದ ಬಳಿಕವೇ ಎಲಿಮಿನೇಷನ್ ನಡೆದಿದೆ.

ಈ ವಾರ ತನಿಷಾ ಕುಪ್ಪಂಡ, ವರ್ತೂರು ಸಂತೋಷ್, ಕಾರ್ತಿಕ್, ಪ್ರತಾಪ್, ವಿನಯ್, ನಮ್ರತಾ ನಾಮಿನೇಟ್ ಆಗಿದ್ದರು. ಸಂಗೀತಾ ಹಾಗೂ ತುಕಾಲಿ ಸಂತೋಷ್ ನಾಮಿನೇಷನ್​ನಿಂದ ಬಚಾವ್ ಆಗಿದ್ದರು. ಈ ಪೈಕಿ ತನಿಷಾ ವಾರದ ಮಧ್ಯೆ ಔಟ್ ಆಗಿದ್ದಾರೆ ಎಂದು ತಿಳಿದು ಬಂದಿದೆ. ಇಂದು (ಜನವರಿ 18) ಈ ಎಪಿಸೋಡ್ ಪ್ರಸಾರ ಕಾಣುವ ಸಾಧ್ಯತೆ ಇದೆ. ತನಿಷಾ ಕುಪ್ಪಂಡ ಅವರು ಆರಂಭದಲ್ಲಿ ಸಖತ್ ಫೈಟ್ ನೀಡಿದ್ದರು. ಆ ಬಳಿಕ ಅವರ ಕಾಲಿಗೆ ಏಟಾಯಿತು. ಇದಾದ ಬಳಿಕ ಅವರು ಡಲ್ ಆಗುತ್ತಾ ಬಂದರು.

ಇದನ್ನೂ ಓದಿ: ಬಂದ ಅತಿಥಿಗಳು ಹೊರಗೆ ಹೋಗಲಿ ಎಂದ ನಮ್ರತಾ: ಕಾರಣ?

ಇತ್ತೀಚೆಗೆ ತನಿಷಾ ಅವರು ಅಂದುಕೊಂಡ ರೀತಿಯಲ್ಲಿ ಆಟ ಪ್ರದರ್ಶನ ನೀಡಿಲ್ಲ. ಇದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿತ್ತು. ಕಪ್ ಎತ್ತಬೇಕು ಎನ್ನುವ ಅವರ ಕನಸು ನುಚ್ಚು ನೂರಾಗಿದೆ. ಫಿನಾಲೆ ಸಮೀಪದಲ್ಲೇ ಅವರು ಎಡವಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ