AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರದ ಮಧ್ಯದಲ್ಲಿ ನಡೆಯಿತು ಎಲಿಮಿನೇಷನ್; ಬಿಗ್ ಬಾಸ್​ನಿಂದ ಪ್ರಮುಖರೇ ಔಟ್​

ಈ ವಾರ ತನಿಷಾ ಕುಪ್ಪಂಡ, ಕಾರ್ತಿಕ್, ವರ್ತೂರು ಸಂತೋಷ್, ಪ್ರತಾಪ್, ವಿನಯ್, ನಮ್ರತಾ ನಾಮಿನೇಟ್ ಆಗಿದ್ದರು. ತುಕಾಲಿ ಸಂತೋಷ್ ಹಾಗೂ ಸಂಗೀತಾ ನಾಮಿನೇಷನ್​ನಿಂದ ಬಚಾವ್ ಆಗಿದ್ದರು. ಈಗ ದೊಡ್ಮನೆಯಿಂದ ಹೊರ ಹೋಗಿದ್ದಾರೆ.

ವಾರದ ಮಧ್ಯದಲ್ಲಿ ನಡೆಯಿತು ಎಲಿಮಿನೇಷನ್; ಬಿಗ್ ಬಾಸ್​ನಿಂದ ಪ್ರಮುಖರೇ ಔಟ್​
ಬಿಗ್ ಬಾಸ್ ಮನೆ
ರಾಜೇಶ್ ದುಗ್ಗುಮನೆ
|

Updated on: Jan 18, 2024 | 7:16 AM

Share

ಬಿಗ್ ಬಾಸ್ ಮನೆಯಲ್ಲಿ ಕಳೆದ ವಾರ ಯಾವುದೇ ಎಲಿಮಿನೇಷನ್ ನಡೆದಿರಲಿಲ್ಲ. ಹೀಗಾಗಿ, ಈ ವಾರ ಡಬಲ್ ಎಲಿಮಿನೇಷನ್, ಮುಂದಿನ ವಾರದ ಮಧ್ಯದಲ್ಲಿ ಒಂದು ಎಲಿಮಿನೇಷನ್ ನಡೆಯಬಹುದ ಎಂದು ಎಲ್ಲರೂ ಭಾವಿಸಿದ್ದರು. ಈಗ ಬಿಗ್ ಬಾಸ್ ಟ್ವಿಸ್ಟ್ ನೀಡಿದ್ದಾರೆ. ಈ ವಾರದ ಮಧ್ಯವೇ ಒಂದು ಎಲಿಮಿನೇಷನ್ ನಡೆದಿದೆ. ಪ್ರಮುಖ ಸ್ಪರ್ಧಿಯೇ ಎಲಿಮಿನೇಟ್ ಆಗಿದ್ದಾರೆ. ಈ ಮೂಲಕ ಬಿಗ್ ಬಾಸ್ (Bigg Boss) ಮನೆಯಲ್ಲಿ ಈಗ ಉಳಿದುಕೊಂಡಿದ್ದು ಏಳು ಮಂದಿ ಮಾತ್ರ. ಇವರಲ್ಲಿ ಐವರು ಫಿನಾಲೆ ತಲುಪಲಿದ್ದಾರೆ.

ಬಿಗ್ ಬಾಸ್ ಮನೆ ಆರಂಭದಲ್ಲಿ ತುಂಬಿತ್ತು. ಆ ಬಳಿಕ ಒಬ್ಬೊಬ್ಬರೇ ಎಲಿಮಿನೇಟ್ ಆಗುತ್ತಾ ಬಂದರು. ನಂತರ ಇಬ್ಬರು ವೈಲ್ಡ್ ಕಾರ್ಡ್ ಮೂಲಕ ಬಂದವರು, ಬಂದಷ್ಟೇ ವೇಗದಲ್ಲಿ ಹೊರ ಹೋದರು. ಎಲಿಮಿನೇಟ್ ಆದ ಹಲವು ಸ್ಪರ್ಧಿಗಳು ದೊಡ್ಮನೆಗೆ ಬಂದಿದ್ದಾರೆ. ಅವರು ಸಂಭ್ರಮದಿಂದ ಕಾಲ ಕಳೆದಿದ್ದಾರೆ. ಒಂದು ದಿನ ಇದ್ದು ಅವರು ದೊಡ್ಮನೆಯಿಂದ ಹೋಗಿದ್ದಾರೆ. ಇದಾದ ಬಳಿಕವೇ ಎಲಿಮಿನೇಷನ್ ನಡೆದಿದೆ.

ಈ ವಾರ ತನಿಷಾ ಕುಪ್ಪಂಡ, ವರ್ತೂರು ಸಂತೋಷ್, ಕಾರ್ತಿಕ್, ಪ್ರತಾಪ್, ವಿನಯ್, ನಮ್ರತಾ ನಾಮಿನೇಟ್ ಆಗಿದ್ದರು. ಸಂಗೀತಾ ಹಾಗೂ ತುಕಾಲಿ ಸಂತೋಷ್ ನಾಮಿನೇಷನ್​ನಿಂದ ಬಚಾವ್ ಆಗಿದ್ದರು. ಈ ಪೈಕಿ ತನಿಷಾ ವಾರದ ಮಧ್ಯೆ ಔಟ್ ಆಗಿದ್ದಾರೆ ಎಂದು ತಿಳಿದು ಬಂದಿದೆ. ಇಂದು (ಜನವರಿ 18) ಈ ಎಪಿಸೋಡ್ ಪ್ರಸಾರ ಕಾಣುವ ಸಾಧ್ಯತೆ ಇದೆ. ತನಿಷಾ ಕುಪ್ಪಂಡ ಅವರು ಆರಂಭದಲ್ಲಿ ಸಖತ್ ಫೈಟ್ ನೀಡಿದ್ದರು. ಆ ಬಳಿಕ ಅವರ ಕಾಲಿಗೆ ಏಟಾಯಿತು. ಇದಾದ ಬಳಿಕ ಅವರು ಡಲ್ ಆಗುತ್ತಾ ಬಂದರು.

ಇದನ್ನೂ ಓದಿ: ಬಂದ ಅತಿಥಿಗಳು ಹೊರಗೆ ಹೋಗಲಿ ಎಂದ ನಮ್ರತಾ: ಕಾರಣ?

ಇತ್ತೀಚೆಗೆ ತನಿಷಾ ಅವರು ಅಂದುಕೊಂಡ ರೀತಿಯಲ್ಲಿ ಆಟ ಪ್ರದರ್ಶನ ನೀಡಿಲ್ಲ. ಇದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿತ್ತು. ಕಪ್ ಎತ್ತಬೇಕು ಎನ್ನುವ ಅವರ ಕನಸು ನುಚ್ಚು ನೂರಾಗಿದೆ. ಫಿನಾಲೆ ಸಮೀಪದಲ್ಲೇ ಅವರು ಎಡವಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ