AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಯ ಡಾರ್ಲಿಂಗ್​​ಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ತನಿಷಾ ಕುಪ್ಪಂಡ

ತನಿಷಾ ಕುಪ್ಪಂಡ ಅವರು ಹಂಚಿಕೊಂಡಿರೋ ವಿಡಿಯೋದ ಕ್ಯಾಪ್ಶನ್ ನೋಡಿದರೆ ಕೆಲವರು ಅಶ್ಲೀಲವಾಗಿ ಕಮೆಂಟ್ ಮಾಡುತ್ತಿದ್ದಾರೆ. ಇದನ್ನು ನೋಡಿದ ಅನೇಕರು ಕಮೆಂಟ್ ಮಾಡುವವರಿಗೆ ಬುದ್ಧಿ ಹೇಳುವ ಪ್ರಯತ್ನ ಮಾಡಿದ್ದಾರೆ. ಆದಾಗ್ಯೂ ಈ ವಿಡಿಯೋಗೆ ವಿವಿಧ ರೀತಿಯ ಕಮೆಂಟ್​ಗಳು ಬರುತ್ತಿವೆ.

ಪ್ರೀತಿಯ ಡಾರ್ಲಿಂಗ್​​ಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ತನಿಷಾ ಕುಪ್ಪಂಡ
ತನಿಷಾ
ರಾಜೇಶ್ ದುಗ್ಗುಮನೆ
|

Updated on:Jul 15, 2024 | 11:58 AM

Share

ಕಿರುತೆರೆ ಹಾಗೂ ಹಿರಿತೆರೆ ಮೂಲಕ ಫೇಮಸ್ ಆದವರು ತನಿಷಾ ಕುಪ್ಪಂಡ. ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ನೀಡಿದ್ದು ‘ಬಿಗ್ ಬಾಸ್ ಕನ್ನಡ ಸೀಸನ್ 10’. ಈಗ ಅವರು ಏನೇ ಮಾಡಿದರೂ ಸುದ್ದಿ ಆಗುತ್ತದೆ. ಸೋಶಿಯಲ್ ಮೀಡಿಯಾದಲ್ಲಿ ಹಾಕುವ ಪೋಸ್ಟ್ ಸಾಕಷ್ಟು ಚರ್ಚೆ ಆಗುತ್ತದೆ. ಈಗ ಅವರು ಪ್ರೀತಿಯಿಂದ ಪೋಸ್ಟ್ ಒಂದನ್ನು ಹಾಕಿದ್ದಾರೆ. ಈ ಪೋಸ್ಟ್ ಭರ್ಜರಿ ಸದ್ದು ಮಾಡುತ್ತಿದೆ. ಅಷ್ಟಕ್ಕೂ ಅವರು ಹಾಕಿರೋ ವಿಡಿಯೋದಲ್ಲಿ ಏನಿದೆ ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

‘ಹ್ಯಾಪಿ ಬರ್ತ್ ​ಡೇ ಡಾರ್ಲಿಂಗ್’ ಎಂದು ಪೋಸ್ಟ್ ಹಾಕಿದ್ದಾರೆ ತನಿಷಾ ಕುಪ್ಪಂಡ. ಇದರಲ್ಲಿ ಅವರು ವ್ಯಕ್ತಿಯೊಬ್ಬರ ಜೊತೆ ಇದ್ದಾರೆ. ಈ ವಿಡಿಯೋದಲ್ಲಿ ಅವರು ಸ್ವಿಮ್ಮಿಂಗ್ ಮಾಡುತ್ತಿದ್ದಾರೆ. ಅಂದಹಾಗೆ ಅವರ ಜೊತೆ ಇರೋದು ತನಿಷಾ ಅವರ ಅಣ್ಣ. ‘ನಿಮಗೆ ಬೆಂಬಲ, ಯಶಸ್ಸು, ನೆಮ್ಮದಿ ಎಲ್ಲವೂ ಸಿಗಲಿ. ಲವ್ ಯೂ ಸೋ ಮಚ್ ಅಪ್ಪು. ಮೊದ್ಲೆಲ್ಲಾ ತಮ್ಮ ಅಂತಿದ್ರು, ಇವಾಗ ಅಣ್ಣ ಅಂತಾರೆ. ಸ್ವಲ್ಪ ಕಮ್ಮಿ ಕಿತ್ತಾಡು. ಇಷ್ಟೇ ಲೈಫ್. ಸಾಕು ಅಲ್ವಾ ಮರ ಯಾಕೆ. ಒಳ್ಳೆಯ ದಿನಗಳು ಬರಲಿ’ ಎಂದು ಅವರು ಕೋರಿದ್ದಾರೆ.

ಈ ವಿಡಿಯೋದ ಕ್ಯಾಪ್ಶನ್ ನೋಡಿದರೆ ಕೆಲವರು ಅಶ್ಲೀಲವಾಗಿ ಕಮೆಂಟ್ ಮಾಡುತ್ತಿದ್ದಾರೆ. ಇದನ್ನು ನೋಡಿದ ಅನೇಕರು ಕಮೆಂಟ್ ಮಾಡುವವರಿಗೆ ಬುದ್ಧಿ ಹೇಳುವ ಪ್ರಯತ್ನ ಮಾಡಿದ್ದಾರೆ. ‘ಅವರು ತನಿಷಾರ ಸಹೋದರ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಆದಾಗ್ಯೂ ಈ ವಿಡಿಯೋಗೆ ವಿವಿಧ ರೀತಿಯ ಕಮೆಂಟ್​ಗಳು ಬರುತ್ತಿವೆ.

ಇದನ್ನೂ ಓದಿ: ‘ಪೆನ್​ಡ್ರೈವ್’ ಚಿತ್ರದಲ್ಲಿ ನಟಿಸಲಿದ್ದಾರೆ ತನಿಷಾ ಕುಪ್ಪಂಡ; ಸೆಬಾಸ್ಟಿನ್ ನಿರ್ದೇಶನದಲ್ಲಿರೋ ಸಿನಿಮಾದ ಕಥೆ ಏನು?

ಬಿಗ್ ಬಾಸ್​ನಿಂದ ಬಂದ ಬಳಿಕ ತನಿಷಾ ಕುಪ್ಪಂಡ ಅವರ ಖ್ಯಾತಿ ಹೆಚ್ಚಿದೆ. ಅವರು ಹಲವು ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ಅವರಿಗೆ ಇತ್ತೀಚೆಗೆ ‘ಪೆನ್​ಡ್ರೈವ್’ ಹೆಸರಿನ ಸಿನಿಮಾ ಆಫರ್ ಸಿಕ್ಕಿದೆ. ಈ ಚಿತ್ರದಲ್ಲಿ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯಲ್ಲಿ ಸಿನಿಮಾ ಮೂಡಿ ಬರುತ್ತಿದೆ. ಡೇವಿಡ್ ಸೆಬಾಸ್ಟಿಯನ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:54 am, Mon, 15 July 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್