AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

8 ಗೆಟಪ್​ನಲ್ಲಿ ಬರ್ತಾರೆ ತನುಷ್ ಶಿವಣ್ಣ; ಫೆ.23ಕ್ಕೆ ‘ನಟ್ವರ್​ಲಾಲ್’ ಸಿನಿಮಾ ಬಿಡುಗಡೆ

ಕ್ರೈಂ-ಥ್ರಿಲ್ಲರ್​, ಆ್ಯಕ್ಷನ್​ ಮತ್ತು ಸಸ್ಪೆನ್ಸ್​ ಅಂಶಗಳಿಂದ ಕೂಡಿದ ‘ಮಿಸ್ಟರ್​ ನಟ್ವರ್​ಲಾಲ್’ ಸಿನಿಮಾದಲ್ಲಿ ತನುಷ್​ ಶಿವಣ್ಣ ಅವರು ಹೀರೋ ಆಗಿ ನಟಿಸಿದ್ದಾರೆ. ಅವರ ಪಾತ್ರಕ್ಕೆ ಹಲವು ಗೆಟಪ್​ಗಳಿವೆ. ಈ ಸಿನಿಮಾಗೆ ಸೋನಾಲ್ ಮೊಂತೆರೊ ನಾಯಕಿ. ವಿ. ಲವ ನಿರ್ದೇಶನ ಮಾಡಿದ್ದಾರೆ. ಸ್ಯಾಂಡಲ್​ವುಡ್​ನ ಗಣ್ಯರ ಸಮ್ಮುಖನಲ್ಲಿ ಈ ಸಿನಿಮಾದ ಟ್ರೇಲರ್​ ಬಿಡುಗಡೆ ಮಾಡಲಾಗಿದೆ.

8 ಗೆಟಪ್​ನಲ್ಲಿ ಬರ್ತಾರೆ ತನುಷ್ ಶಿವಣ್ಣ; ಫೆ.23ಕ್ಕೆ ‘ನಟ್ವರ್​ಲಾಲ್’ ಸಿನಿಮಾ ಬಿಡುಗಡೆ
‘Mr. ನಟ್ವರ್​ಲಾಲ್​’ ಚಿತ್ರತಂಡ
ಮದನ್​ ಕುಮಾರ್​
|

Updated on: Feb 12, 2024 | 8:42 PM

Share

ನಟ ತನುಷ್​ ಶಿವಣ್ಣ (Tanush Shivanna) ಅವರು ನಿರ್ಮಾಪಕನಾಗಿಯೂ ಚಂದನವನದಲ್ಲಿ ಸಕ್ರಿಯರಾಗಿದ್ದಾರೆ. ‘ತನುಷ್ ಸಿನಿಮಾಸ್’ ಮೂಲಕ ಅವರು ಈಗ ‘ಮಿಸ್ಟರ್​ ನಟ್ವರ್​ಲಾಲ್’ (Mr Natwarlal) ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಈ ಚಿತ್ರದಲ್ಲಿ ಹೀರೋ ಆಗಿಯೂ ಅವರು ನಟಿಸಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಟ್ರೇಲರ್​ ಬಿಡುಗಡೆ ಮಾಡಲಾಯಿತು. ಅನೇಕ ಗಣ್ಯರು ಬಂದು ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ‘ಆನಂದ್ ಆಡಿಯೋ’ ಮೂಲಕ ‘ನಟ್ವರ್​ಲಾಲ್’ ಸಿನಿಮಾದ ಟ್ರೇಲರ್​ ಅನಾವರಣ ಆಗಿದೆ. ಈ ಸಿನಿಮಾಗೆ ವಿ. ಲವ ಅವರು ನಿರ್ದೇಶನ ಮಾಡಿದ್ದಾರೆ. ಟ್ರೇಲರ್​ (Mr Natwarlal Trailer) ನೋಡಿದ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಫೆಬ್ರವರಿ 23ರಂದು ‘ನಟ್ವರ್​ಲಾಲ್’ ಸಿನಿಮಾ ರಾಜ್ಯಾದ್ಯಂತ ರಿಲೀಸ್​ ಆಗಲಿದೆ.

ಕುಣಿಗಲ್ ಶಾಸಕ ರಂಗನಾಥ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್.ಎಂ. ಸುರೇಶ್, ನಿರ್ಮಾಪಕರಾದ ಶಿಲ್ಪ ಶ್ರೀನಿವಾಸ್, ಭಾ.ಮ. ಹರೀಶ್, ಚಿಂಗಾರಿ ಮಹದೇವ್, ಟಿ.ಪಿ. ಸಿದ್ದರಾಜು, ಕುಶಾಲ್, ಭಾ.ಮ. ಗಿರೀಶ್, ವಿತರಕರ ವಲಯದ ಅಧ್ಯಕ್ಷ ವೆಂಕಟೇಶ್, ನಿರ್ದೇಶಕ-ಗೀತರಚನಕಾರ ‘ಭರ್ಜರಿ’ ಚೇತನ್ ಕುಮಾರ್​ ಮುಂತಾದವರು ‘ನಟ್ವರ್​ಲಾಲ್’ ಸಿನಿಮಾದ ಟ್ರೇಲರ್​ ಬಿಡುಗಡೆ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದ್ದಾರೆ.

ಇದನ್ನೂ ಓದಿ: ‘ಪುಷ್ಪ 2’ ಚಿತ್ರದ ಶೂಟಿಂಗ್​ ಮಧ್ಯೆ ರಶ್ಮಿಕಾ ಮಂದಣ್ಣ ಮಾಡಿದ ಕೆಲಸ ಇದು

ನಿರ್ದೇಶಕ ವಿ. ಲವ ಅವರು ‘ನಟ್ವರ್​ಲಾಲ್’ ಸಿನಿಮಾದ ಬಗ್ಗೆ ಮಾಹಿತಿ ನೀಡಿದ್ದಾರೆ. ‘ಇದೊಂದು ಕ್ರೈಂ-ಥ್ರಿಲ್ಲರ್ ಮತ್ತು ಆ್ಯಕ್ಷನ್ ಶೈಲಿಯ ಸಿನಿಮಾ. ಬೆಂಗಳೂರಿನಲ್ಲಿ ನಡೆದ ನೈಜ ಘಟನೆಯೇ ಈ ಸಿನಿಮಾಗೆ ಸ್ಫೂರ್ತಿ. ಟ್ರೇಲರ್​ನಲ್ಲಿ ಎರಡನೇ ಭಾಗದ ಸುಳಿವು ಸಹ ನೀಡಿದ್ದೇವೆ’ ಎಂದು ಅವರು ಹೇಳಿದ್ದಾರೆ. ‘ಬಹದ್ದೂರ್’ ಚೇತನ್ ಕುಮಾರ್​ ಅವರು ಎರಡು ಹಾಡುಗಳನ್ನು ಬರೆದಿದ್ದಾರೆ.

‘Mr. ನಟ್ವರ್​ಲಾಲ್​’ ಚಿತ್ರದ ಟ್ರೇಲರ್​ ಬಿಡುಗಡೆ ಸಮಾರಂಭ

ತನುಷ್​ ಶಿವಣ್ಣ ಅವರು ಹೀರೋ ಆಗಿ ನಟಿಸಿದ 4ನೇ ಸಿನಿಮಾ ‘ನಟ್ವರ್​ಲಾಲ್’. ‘ನಾನು ಈ ಚಿತ್ರದಲ್ಲಿ 8 ವಿವಿಧ ಗೆಟಪ್​ಗಳಲ್ಲಿ ಕಾಣಿಸಿಕೊಂಡಿದ್ದೇನೆ. ಇದು ಈ ಸಿನಿಮಾದ ವಿಶೇಷ. ನಿರ್ಮಾಣದ ಜವಾಬ್ದಾರಿ ಸಹ ನನ್ನದು. ಹಣದ ಸಮಸ್ಯೆಯಿಂದಾಗಿ ನಡುವೆ ಒಂದು ಹಂತದಲ್ಲಿ ಸಿನಿಮಾದ ಕೆಲಸ ನಿಲ್ಲಿಸೋಣ ಎಂದುಕೊಂಡೆ. ಆದರೆ, ನಾನು ನಂಬಿರುವ ದೇವರ ದಯೆಯಿಂದ ಸ್ನೇಹಿತರು ಸಹಾಯಕ್ಕೆ ಬಂದರು. ಅವರ ಸಹಾಯ ಮತ್ತು ನನ್ನ ತಂಡದ ಸಹಕಾರದಿಂದ ಸಿನಿಮಾ ಚೆನ್ನಾಗಿ ಮೂಡಿಬಂದಿದೆ’ ಎಂದು ಅವರು ಹೇಳಿದ್ದಾರೆ.

‘ನಟ್ವರ್​ಲಾಲ್’ ಸಿನಿಮಾದ ಟ್ರೇಲರ್​:

ಈ ಸಿನಿಮಾದಲ್ಲಿ ಸೋನಾಲ್ ಮೊಂತೆರೋ ಅವರು ನಾಯಕಿಯಾಗಿ ನಟಿಸಿದ್ದಾರೆ. ಕಾಕ್ರೋಜ್ ಸುಧಿ, ನಾಗಭೂಷಣ, ಯಶ್ ಶೆಟ್ಟಿ, ರಘು ರಾಮನಕೊಪ್ಪ, ರಾಜೇಶ್ ನಟರಂಗ, ಹರಿಣಿ ಶ್ರೀಕಾಂತ್, ಕಾಂತರಾಜು ಕಡ್ಡಿಪುಡಿ, ಸುಂದರ್​ ರಾಜ್, ಸುಜಯ್ ಶಾಸ್ತ್ರಿ ಮುಂತಾದ ಕಲಾವಿದರು ಈ ಸಿನಿಮಾದ ಪಾತ್ರವರ್ಗದಲ್ಲಿದ್ದಾರೆ. ಧರ್ಮವಿಶ್ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ವಿಲಿಯಂ ಡೇವಿಡ್ ಅವರ ಛಾಯಾಗ್ರಹಣ ಮತ್ತು ಕೆ‌.ಎಂ. ಪ್ರಕಾಶ್ ಅವರ ಸಂಕಲನ ಈ ಚಿತ್ರಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ