AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾರಾ ನಟನೆಯ ‘ಸೈನೈಡ್’ ಸಿನಿಮಾ ಮರು ಬಿಡುಗಡೆ; 20 ವರ್ಷಗಳ ಬಳಿಕ ಮತ್ತೆ ತೆರೆಗೆ

‘ಸೈನೈಡ್’ ಸಿನಿಮಾ 2006ರಲ್ಲಿ ಬಿಡುಗಡೆ ಆಗಿತ್ತು. ಈಗ ಆ ಸಿನಿಮಾವನ್ನು ಮತ್ತೆ ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಚಿತ್ರಕ್ಕೆ ಪ್ರೀಕ್ವೆಲ್ ಸಹ ಬರಲಿದೆ ಎಂದು ನಿರ್ದೇಶಕ ಎಎಂಆರ್ ರಮೇಶ್ ಅವರು ಹೇಳಿದ್ದಾರೆ. ಮರುಬಿಡುಗಡೆ ಕುರಿತು ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಚಿತ್ರತಂಡದವರು ಭಾಗಿಯಾಗಿದ್ದರು.

ತಾರಾ ನಟನೆಯ ‘ಸೈನೈಡ್’ ಸಿನಿಮಾ ಮರು ಬಿಡುಗಡೆ; 20 ವರ್ಷಗಳ ಬಳಿಕ ಮತ್ತೆ ತೆರೆಗೆ
Cyanide Movie, Tara Anuradha
Follow us
ಮದನ್​ ಕುಮಾರ್​
|

Updated on: May 07, 2025 | 10:47 PM

ಹಲವು ಸಿನಿಮಾಗಳು ಮರು ಬಿಡುಗಡೆಯಾಗಿ ಗಮನ ಸೆಳೆಯುತ್ತಿವೆ. ಅಂತಹ ಸಿನಿಮಾಗಳ ಸಾಲಿಗೆ ‘ಸೈನೈಡ್’ (Cyanide) ಕೂಡ ಸೇರ್ಪಡೆ ಆಗಲಿದೆ. ಮಾಜಿ ಪ್ರಧಾನ ಮಂತ್ರಿ ರಾಜೀವ್ ಗಾಂಧಿ ಹತ್ಯೆಯ ನಂತರ ನಡೆದ ಘಟನೆಗಳನ್ನು ಆಧರಿಸಿ ‘ಸೈನೈಡ್’ ಸಿನಿಮಾ (Cyanide Kannada Movie) ಮೂಡಿಬಂದಿತ್ತು. ಕೆಂಚಪ್ಪ ಗೌಡ ಮತ್ತು ಎಸ್. ಇಂದುಮತಿ ಅವರು ‘ಅಕ್ಷಯ್ ಕ್ರಿಯೇಷನ್ಸ್’ ಮೂಲಕ ನಿರ್ಮಾಣ ಮಾಡಿದ್ದ ಈ ಸಿನಿಮಾವನ್ನು ಎಎಂಆರ್ ರಮೇಶ್ ಅವರು ನಿರ್ದೇಶಿಸಿದ್ದರು. ತಾರಾ (Tara Anuradha), ರವಿಕಾಳೆ, ರಂಗಾಯಣ ರಘು, ಮಾಳವಿಕಾ, ಉಷಾ ಭಂಡಾರಿ, ಅವಿನಾಶ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಮೇ 23ಕ್ಕೆ ‘ಸೈನೈಡ್’ ಸಿನಿಮಾ ಮರು ಬಿಡುಗಡೆ ಆಗಲಿದೆ.

‘ಸೈನೈಡ್’ ಸಿನಿಮಾ 2006ರಲ್ಲಿ ಬಿಡುಗಡೆ ಆಗಿತ್ತು. ಈಗ 20 ವರ್ಷಗಳ ನಂತರ ಕೂಡ ಈ ಸಿನಿಮಾದ ವಿಷಯ ಪ್ರಸ್ತುತವಾಗಿದೆ. ಹಾಗಾಗಿ ಮರು ಬಿಡುಗಡೆ ಮಾಡಲು ಚಿತ್ರತಂಡ ಮುಂದಾಗಿದೆ. ಈ ಕುರಿತು ಮಾಹಿತಿ ನೀಡಲು ಸುದ್ದಿಗೋಷ್ಠಿ ನಡೆಸಲಾಯಿತು. ಶಾಸಕ ಹ್ಯಾರಿಸ್ ಅವರು ಮುಖ್ಯ ಅತಿಥಿಗಳಾಗಿ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದರು. ಈ ಸಿನಿಮಾದಲ್ಲಿನ ನಟನೆಗೆ ನಟಿ ತಾರಾ ಅವರಿಗೆ ರಾಜ್ಯ ಪ್ರಶಸ್ತಿ ಸಿಕ್ಕಿತ್ತು. ಅವರು ಕೂಡ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ನಿರ್ದೇಶಕ ಎಎಂಆರ್ ರಮೇಶ್ ಮಾತನಾಡಿ, ‘ಇದು ಸೂಕ್ಷ್ಮವಾದ ವಿಷಯ ಹೊಂದಿರುವ ಸಿನಿಮಾ ಆದ್ದರಿಂದ 2006ರಲ್ಲಿ ಬಿಡುಗಡೆ ಮಾಡುವಾಗ ಆತಂಕ ಇತ್ತು. ಆದರೆ ರಿಲೀಸ್ ಬಳಿಕ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿತು. ತಾರಾ ಅವರ ಪಾತ್ರಕ್ಕೆ ರಾಜ್ಯ ಪ್ರಶಸ್ತಿ ಬಂತು. ಈಗ ಮತ್ತೆ ಹೊಸ ತಂತ್ರಜ್ಞಾನ ಅಳವಡಿಸಿ‌, 10 ನಿಮಿಷ ಅವಧಿಯನ್ನು ಹೆಚ್ಚಿಸಿ ಮರು ಬಿಡುಗಡೆ ಮಾಡುತ್ತಿದ್ದೇವೆ’ ಎಂದು ಹೇಳಿದರು.

ಇದನ್ನೂ ಓದಿ
Image
‘ಕಾಂತಾರ: ಚಾಪ್ಟರ್ 1’ ಸಿನಿಮಾದ ಕಲಾವಿದ ನಿಧನ; ಚಿತ್ರತಂಡಕ್ಕೆ ಸಂಕಷ್ಟ
Image
‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸೇರಿಕೊಂಡ ನಟಿ ರಾಗಿಣಿ; ಚಿತ್ರೀಕರಣ ಶುರು
Image
ಸೋನು ನಿಗಂ ಹಾಡು ತೆಗೆದು ಹಾಕಿದ ಸಿನಿಮಾ ತಂಡ
Image
ರಮೇಶ್ ಅರವಿಂದ್-ದಿಗಂತ್ ಈಗ ಅಣ್ಣ-ತಮ್ಮ; ‘ದೈಜಿ’ ಚಿತ್ರದಲ್ಲಿ ಒಟ್ಟಾಗಿ ನಟನೆ

‘ಸೈನೈಡ್’ ಸಿನಿಮಾಗೆ ಪ್ರೀಕ್ವೆಲ್ ಕೂಡ ಬರಲಿದೆ. ಅದರ ಕಾರ್ಯ ಪ್ರಗತಿಯಲ್ಲಿದೆ ಎಂದು ಎಎಂಆರ್ ರಮೇಶ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಟೆರರಿಸ್ಟ್ ಪಾತ್ರ ಮಾಡಿದ್ದನ್ನು ಉಷಾ ಭಂಡಾರಿ ನೆನಪಿಕೊಂಡರು. ನಿರ್ಮಾಪಕರಾದ ಕೆಂಚಪ್ಪ ಗೌಡ ಮತ್ತು ಎಸ್. ಇಂದುಮತಿ ಕೂಡ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ: ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ

ನಟಿ ತಾರಾ ಕೂಡ ಆ ದಿನಗಳನ್ನು ನೆನಪಿಸಿಕೊಂಡರು. ‘ನಾನು ಈ ಸಿನಿಮಾದಲ್ಲಿ ಮೃದುಲಾ ಎಂಬ ಮುಗ್ಧ ಹೆಣ್ಣು ಮಗಳ ಪಾತ್ರ ಮಾಡಿದ್ದೆ. 20 ವರ್ಷಗಳ ಹಿಂದೆ ಶೂಟಿಂಗ್ ಮಾಡುವಾಗ ಮೃದುಲಾ ಅವರನ್ನು ಭೇಟಿ ಮಾಡಲು ಪ್ರಯತ್ನ ಪಟ್ಟಿದ್ದೆ. ಆದರೆ ಆಗಲಿಲ್ಲ. ಅವರ ಪತಿ ರಂಗನಾಥ್ ಶೂಟಿಂಗ್ ಸ್ಥಳಕ್ಕೆ ಬರುತ್ತಿದ್ದರು. ಅವರಿಂದ ಮೃದುಲಾ ಬಗ್ಗೆ ತಿಳಿದುಕೊಂಡು ಅಭಿನಯಿಸಿದ್ದೆ. ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸಿನಿಮಾದ ತುಣುಕು ನೋಡಿದರು’ ಎಂದು ತಾರಾ ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?