AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಣ್ಣು ಭ್ರೂಣ ಹತ್ಯೆ ವಿರುದ್ಧ ಸಿನಿಮಾ ಸಂದೇಶ: ‘ತಾರಿಣಿ’ ಇದು ಗರ್ಭಿಣಿಯ ಕತೆ

Tarini: ಹೆಣ್ಣು ಭ್ರೂಣ ಹತ್ಯೆಯಂಥಹಾ ಪಿಡುಗಿನ ವಿರುದ್ಧ ಸಂದೇಶ ಹೊಂದಿರುವ ಸಿನಿಮಾ ಒಂದನ್ನು ನಿರ್ಮಾಣ ಮಾಡಲಾಗಿದೆ. ಮಮತಾ ರಾಹುತ್ ನಾಯಕಿಯಾಗಿ ನಟಿಸಿ, ಸಿದ್ದು ಪೂರ್ಣಚಂದ್ರ ನಿರ್ದೇಶನ ಮಾಡಿರುವ 'ತಾರಿಣಿ' ಸಿನಿಮಾದ ಫಸ್ಟ್ ಲುಕ್ ಇತ್ತೀಚೆಗೆ ಬಿಡುಗಡೆ ಆಗಿದೆ.

ಹೆಣ್ಣು ಭ್ರೂಣ ಹತ್ಯೆ ವಿರುದ್ಧ ಸಿನಿಮಾ ಸಂದೇಶ: 'ತಾರಿಣಿ' ಇದು ಗರ್ಭಿಣಿಯ ಕತೆ
ಮಂಜುನಾಥ ಸಿ.
|

Updated on: Oct 01, 2023 | 10:02 PM

Share

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು. ಹೆಣ್ಣು ಭ್ರೂಣ ಹತ್ಯೆ ಕುರಿತಾಗಿ ಸರ್ಕಾರ, ಚಿತ್ರರಂಗದ (Sandalwood) ಹಲವು ತಾರೆಯರು ಸಂದೇಶಗಳನ್ನು ಜಾಗೃತಿಗಳನ್ನು ಮೂಡಿಸಿದ್ದಾರೆ. ಹಾಗಿದ್ದರೂ ಸಹ ಹೆಣ್ಣು ಭ್ರೂಣ ಹತ್ಯೆ ಪೂರ್ಣವಾಗಿ ನಿರ್ನಾಮವಾಗಿಲ್ಲ. ಇದೀಗ ಹೆಣ್ಣು ಭ್ರೂಣ ಹತ್ಯೆಯಂಥಹಾ ಪಿಡುಗಿನ ವಿರುದ್ಧ ಸಂದೇಶ ಹೊಂದಿರುವ ಸಿನಿಮಾ ಒಂದನ್ನು ನಿರ್ಮಾಣ ಮಾಡಲಾಗಿದೆ. ಮಮತಾ ರಾಹುತ್ ನಾಯಕಿಯಾಗಿ ನಟಿಸಿ, ಸಿದ್ದು ಪೂರ್ಣಚಂದ್ರ ನಿರ್ದೇಶನ ಮಾಡಿರುವ ‘ತಾರಿಣಿ’ ಸಿನಿಮಾದ ಫಸ್ಟ್ ಲುಕ್ ಇತ್ತೀಚೆಗೆ ಬಿಡುಗಡೆ ಆಗಿದೆ. ಸಾಹಿತಿ, ಹೋರಾಟಗಾರ್ತಿ ಬಿ.ಟಿ.ಲಲಿತಾ ನಾಯಕ್ ಸೇರಿದಂತೆ ಹಲವು ಗಣ್ಯರು ‘ತಾರಿಣಿ’ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಹಾರೈಸಿದರು.

ಗರ್ಭಿಣಿ ಹೆಣ್ಣಿನ ಕಥೆಯನ್ನು ಹೊಂದಿರುವ ಚಿತ್ರ “ತಾರಿಣಿ” ಎಂದು ಮಾತು ಆರಂಭಿಸಿದ ನಿರ್ದೇಶಕ ಸಿದ್ದು ಪೂರ್ಣಚಂದ್ರ, ”ಈ ಸಿನಿಮಾದ ವಿಶೇಷತೆಯೆಂದರೆ, ನಾಯಕಿ ಮಮತಾ ರಾಹುತ್, ಗರ್ಭಿಣಿ ಆಗಿರುವಾಗಲೇ ಈ ಸಿನಿಮಾದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು. ಗರ್ಭಿಣಿ ಕುರಿತಾದ ಚಿತ್ರದಲ್ಲಿ ನಿಜವಾದ ಗರ್ಭಿಣಿಯೇ ನಟಿಸಿದ್ದಾರೆ. ಮಗು ಆದ ಬಳಿಕವೂ ನಟಿಸಿದ್ದಾರೆ. ಅವರಿಗೆ ಧನ್ಯವಾದಗಳು. ಹೆಣ್ಣು ಭ್ರೂಣ ಹತ್ಯೆ ಮಾಡಬೇಡಿ ಎಂಬ ಉತ್ತಮ ಸಂದೇಶವಿರುವ ಈ ಚಿತ್ರವನ್ನು ಮಮತಾ ರಾಹುತ್ ಅವರ ಪತಿ ಸುರೇಶ್ ಕೊಟ್ಯಾನ್ ಚಿತ್ರಾಪು ಅವರು ಶ್ರೀಗಜನಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸಿದ್ದಾರೆ. ಸಿನಿಮಾ ತೆರೆಗೆ ಬರಲು ಸಿದ್ದವಾಗಿದೆ ಎಂದರು.

”ನಾನು ಏಳು ತಿಂಗಳ ಗರ್ಭಿಣಿ ಆಗಿದ್ದಾಗ ಈ ಸಿನಿಮಾದ ಚಿತ್ರೀಕರಣದಲ್ಲಿ ಪಾಲ್ಗೊಂಡೆ. ಕೆಲವು ದಿನಗಳ ಚಿತ್ರೀಕರಣ ನಂತರ ನನಗೆ ಅವಧಿಗೂ ಕೆಲವು ದಿನಗಳ ಮುಂಚೆಯೇ ಹೆರಿಗೆ ಆಯಿತು. ಆನಂತರ ಕೂಡ ನಾನು ಚಿತ್ರೀಕರಣದಲ್ಲಿ ಭಾಗಿಯಾದೆ. ನನ್ನ ಮಗು ಕೂಡ ಈ ಚಿತ್ರದಲ್ಲಿ ಅಭಿನಯಿಸಿದೆ. ಇದು ನಮ್ಮ ಮೊದಲ ನಿರ್ಮಾಣದ ಸಿನಿಮಾ ಆಗಿರುವ ಕಾರಣ ಹೆಚ್ಚಿನ ಜವಾಬ್ದಾರಿ ನನ್ನ ಮೇಲಿತ್ತು. ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ. ಸಹಕಾರ ನೀಡಿದ ಇಡೀ ತಂಡಕ್ಕೆ ಧನ್ಯವಾದ ಎಂದರು ನಾಯಕಿ ಮಮತಾ ರಾಹುತ್.

ಇದನ್ನೂ ಓದಿ:ಹಬ್ಬದ ಖುಷಿಯಲ್ಲಿ ಸೀರೆ ಧರಿಸಿ ಮಿಂಚಿದ ಚಂದನವನದ ಸುಂದರಿಯರು

ಇದು ನಮ್ಮ ಮೊದಲ ನಿರ್ಮಾಣದ ಸಿನಿಮಾ. ನಿರ್ದೇಶಕರು ಒಳ್ಳೆಯ ಕತೆ ನೀಡಿದ್ದಾರೆ. ಆ ಕಥೆಗೆ ಕಲಾವಿದರು ಜೀವತುಂಬಿದ್ದಾರೆ. ತಂತ್ರಜ್ಞರು ಸಹ ಸಿನಿಮಾಕ್ಕೆ ಜೀವ ತುಂಭಿದ್ದಾರೆ. ಅವರೆಲ್ಲರಿಗೂ ಧನ್ಯವಾದ. ಸಮಾಜಕ್ಕೆ ಈ ಚಿತ್ರ ಉತ್ತಮ ಸಂದೇಶ ಕೊಡಲಿದೆ ಎಂದು ನಿರ್ಮಾಪಕ ಸುರೇಶ್ ಕೊಟ್ಯಾನ್ ಚಿತ್ರಾಪು ಹೇಳಿದರು. ಚಿತ್ರದ ನಾಯಕ ರೋಹಿತ್ ಸೇರಿದಂತೆ ಅನೇಕ ಕಲಾವಿದರು ಹಾಗೂ ತಂತ್ರಜ್ಞರು ‘ತಾರಿಣಿ’ ಚಿತ್ರದ ಕುರಿತು ಮಾತನಾಡಿದರು.

“ತಾರಿಣಿ” ಪಾತ್ರದಲ್ಲಿ ಮಮತಾ ರಾಹುತ್ ನಟಿಸಿದ್ದು, ನಾಯಕನಾಗಿ ರೋಹಿತ್ ಅಭಿನಯಿಸಿದ್ದಾರೆ. ಭವಾನಿ ಪ್ರಕಾಶ್, ಸುಧಾ ಪ್ರಸನ್ನ, ಡಾ ಸುರೇಶ್ ಚಿತ್ರಾಪು, ಪ್ರಮಿಳಾ ಸುಬ್ರಹ್ಮಣ್ಯಂ, ವಿಜಯಲಕ್ಷ್ಮಿ, ದೀಪಿಕಾಗೌಡ, ಸನ್ನಿ, ತೇಜಸ್ವಿನಿ, ಕವಿತ ಕಂಬಾರ್, ಬೇಬಿ ನಿಶಿತಾ, ಬೇಬಿ ರಿಧಿ, ಪ್ರಿನ್ಸ್ ಜಿತಿನ್ ಕೋಟ್ಯಾನ್, ಮಟಿಲ್ಡಾ ಡಿಸೋಜ, ಅರ್ಚನ ಗಾಯಕ್ವಾಡ್, ಶೀಬಾ ಮೂರ್ತಿ, ಶ್ವೇತಾ, ಚೈತ್ರ, ಮಂಜು ನಂಜನಗೂಡು, ರಘು ಸಮರ್ಥ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್