AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಮಲ್ ಹಾಸನ್ ಹುಟ್ಟುಹಬ್ಬಕ್ಕೆ ಹೊಸ ಚಿತ್ರದ ಟೈಟಲ್ ಟೀಸರ್ ಬಿಡುಗಡೆಯಾಯ್ತು!

ಕಮಲ್ ಹಾಸನ್ ಅಭಿನಯಿಸಲಿರುವ ಹೊಸ ಚಿತ್ರದ ಟೈಟಲ್ ಟೀಸರನ್ನು ಕಮಲ್ 66ನೇ ಹುಟ್ಟುಹಬ್ಬದ ದಿನವಾದ ಇಂದು ಬಿಡುಗಡೆಗೊಳಿಸಲಾಗಿದೆ. ‘ವಿಕ್ರಮ್’ ಹೆಸರಿನ ಚಿತ್ರದ ಟೀಸರ್ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ. ಚಿತ್ರವನ್ನು ಕಮಲ್ ರಾಜ್ ಫಿಲ್ಮ್ಸ್ ಇಂಟರ್ನ್ಯಾಷನಲ್ ಸಂಸ್ಥೆ ನಿರ್ಮಿಸುತ್ತಿದ್ದು, ಅನಿರುದ್ಧ್ ರವಿಚಂದರ್ ಸಂಗೀತ ಇರಲಿದೆ. ಲೋಕೇಶ್ ಕನಗರಾಜ್ ನಿರ್ದೇಶಿಸಲಿರುವ ಚಿತ್ರದ ಶೂಟಿಂಗ್ ಇನ್ನಷ್ಟೇ ಆರಂಭವಾಗಬೇಕಿದೆ. ಕಮಲ್ ಹಾಸನ್ ಸುಂದರ ಪರಿಸರದ ಮನೆಯೊಳಗೆ ಇರುವಂತೆ ಟೀಸರ್ ತೆರೆದುಕೊಳ್ಳುತ್ತದೆ. ಊಟಕ್ಕೆ ಬಾಳೆ ಎಲೆಯನ್ನು ಹರಡಿ, ಬಗೆಬಗೆಯ ಖಾದ್ಯಗಳನ್ನು ಎಲೆಗೆ ಬಡಿಸುತ್ತಾ, ವಿವಿಧ […]

ಕಮಲ್ ಹಾಸನ್ ಹುಟ್ಟುಹಬ್ಬಕ್ಕೆ ಹೊಸ ಚಿತ್ರದ ಟೈಟಲ್ ಟೀಸರ್ ಬಿಡುಗಡೆಯಾಯ್ತು!
ಸಾಧು ಶ್ರೀನಾಥ್​
|

Updated on: Nov 09, 2020 | 12:56 PM

Share

ಕಮಲ್ ಹಾಸನ್ ಅಭಿನಯಿಸಲಿರುವ ಹೊಸ ಚಿತ್ರದ ಟೈಟಲ್ ಟೀಸರನ್ನು ಕಮಲ್ 66ನೇ ಹುಟ್ಟುಹಬ್ಬದ ದಿನವಾದ ಇಂದು ಬಿಡುಗಡೆಗೊಳಿಸಲಾಗಿದೆ. ‘ವಿಕ್ರಮ್’ ಹೆಸರಿನ ಚಿತ್ರದ ಟೀಸರ್ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ. ಚಿತ್ರವನ್ನು ಕಮಲ್ ರಾಜ್ ಫಿಲ್ಮ್ಸ್ ಇಂಟರ್ನ್ಯಾಷನಲ್ ಸಂಸ್ಥೆ ನಿರ್ಮಿಸುತ್ತಿದ್ದು, ಅನಿರುದ್ಧ್ ರವಿಚಂದರ್ ಸಂಗೀತ ಇರಲಿದೆ. ಲೋಕೇಶ್ ಕನಗರಾಜ್ ನಿರ್ದೇಶಿಸಲಿರುವ ಚಿತ್ರದ ಶೂಟಿಂಗ್ ಇನ್ನಷ್ಟೇ ಆರಂಭವಾಗಬೇಕಿದೆ.

ಕಮಲ್ ಹಾಸನ್ ಸುಂದರ ಪರಿಸರದ ಮನೆಯೊಳಗೆ ಇರುವಂತೆ ಟೀಸರ್ ತೆರೆದುಕೊಳ್ಳುತ್ತದೆ. ಊಟಕ್ಕೆ ಬಾಳೆ ಎಲೆಯನ್ನು ಹರಡಿ, ಬಗೆಬಗೆಯ ಖಾದ್ಯಗಳನ್ನು ಎಲೆಗೆ ಬಡಿಸುತ್ತಾ, ವಿವಿಧ ಆಯುಧಗಳನ್ನು ಗೌಪ್ಯವಾಗಿ ಜೋಡಿಸಿಡುವ ಕಮಲ್ ಹಾಸನ್ ಖಡಕ್ ಲುಕ್ ಅಭಿಮಾನಿಗಳನ್ನು ರೋಮಾಂಚನಗೊಳಿಸುವಂತಿದೆ.

ಚಿತ್ರಕ್ಕೆ ‘ವಿಕ್ರಮ್’ ಎಂಬ ಶೀರ್ಷಿಕೆಯನ್ನು ಘೋಷಿಸಲಾಗಿದ್ದು, ಇದು 1986ರಲ್ಲಿ ತೆರೆಕಂಡ ಕಮಲ್ ಹಾಸನ್ ಅಭಿನಯದ ಆಕ್ಷನ್ ಚಿತ್ರದ ಹೆಸರಾಗಿದೆ. ಆ ಚಿತ್ರಕ್ಕೂ ಈ ಚಿತ್ರಕ್ಕೂ ಏನಾದರೂ ಸಂಬಂಧ ಇರಲಿದೆಯೇ? ಇದು 1986ರ ವಿಕ್ರಮ್ ಸಿನಿಮಾದ ಮುಂದುವರಿದ ಭಾಗವೇ ಎಂಬ ಪ್ರಶ್ನೆ ಅಭಿಮಾನಿಗಳ ಮನದಲ್ಲಿ ಮೂಡುವಂತೆ ಮಾಡಿದೆ. ಚಿತ್ರವು ಚೆನ್ನೈ ಸುತ್ತಮುತ್ತ ಚಿತ್ರೀಕರಣಗೊಳ್ಳಲಿದ್ದು, ಮುಂದಿನ ಏಪ್ರಿಲ್ ವೇಳೆಗೆ ತೆರೆಕಾಣುವ ನಿರೀಕ್ಷೆ ಇದೆ.

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ