AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಮಲ್ ಹಾಸನ್ ಹುಟ್ಟುಹಬ್ಬಕ್ಕೆ ಹೊಸ ಚಿತ್ರದ ಟೈಟಲ್ ಟೀಸರ್ ಬಿಡುಗಡೆಯಾಯ್ತು!

ಕಮಲ್ ಹಾಸನ್ ಅಭಿನಯಿಸಲಿರುವ ಹೊಸ ಚಿತ್ರದ ಟೈಟಲ್ ಟೀಸರನ್ನು ಕಮಲ್ 66ನೇ ಹುಟ್ಟುಹಬ್ಬದ ದಿನವಾದ ಇಂದು ಬಿಡುಗಡೆಗೊಳಿಸಲಾಗಿದೆ. ‘ವಿಕ್ರಮ್’ ಹೆಸರಿನ ಚಿತ್ರದ ಟೀಸರ್ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ. ಚಿತ್ರವನ್ನು ಕಮಲ್ ರಾಜ್ ಫಿಲ್ಮ್ಸ್ ಇಂಟರ್ನ್ಯಾಷನಲ್ ಸಂಸ್ಥೆ ನಿರ್ಮಿಸುತ್ತಿದ್ದು, ಅನಿರುದ್ಧ್ ರವಿಚಂದರ್ ಸಂಗೀತ ಇರಲಿದೆ. ಲೋಕೇಶ್ ಕನಗರಾಜ್ ನಿರ್ದೇಶಿಸಲಿರುವ ಚಿತ್ರದ ಶೂಟಿಂಗ್ ಇನ್ನಷ್ಟೇ ಆರಂಭವಾಗಬೇಕಿದೆ. ಕಮಲ್ ಹಾಸನ್ ಸುಂದರ ಪರಿಸರದ ಮನೆಯೊಳಗೆ ಇರುವಂತೆ ಟೀಸರ್ ತೆರೆದುಕೊಳ್ಳುತ್ತದೆ. ಊಟಕ್ಕೆ ಬಾಳೆ ಎಲೆಯನ್ನು ಹರಡಿ, ಬಗೆಬಗೆಯ ಖಾದ್ಯಗಳನ್ನು ಎಲೆಗೆ ಬಡಿಸುತ್ತಾ, ವಿವಿಧ […]

ಕಮಲ್ ಹಾಸನ್ ಹುಟ್ಟುಹಬ್ಬಕ್ಕೆ ಹೊಸ ಚಿತ್ರದ ಟೈಟಲ್ ಟೀಸರ್ ಬಿಡುಗಡೆಯಾಯ್ತು!
ಸಾಧು ಶ್ರೀನಾಥ್​
|

Updated on: Nov 09, 2020 | 12:56 PM

Share

ಕಮಲ್ ಹಾಸನ್ ಅಭಿನಯಿಸಲಿರುವ ಹೊಸ ಚಿತ್ರದ ಟೈಟಲ್ ಟೀಸರನ್ನು ಕಮಲ್ 66ನೇ ಹುಟ್ಟುಹಬ್ಬದ ದಿನವಾದ ಇಂದು ಬಿಡುಗಡೆಗೊಳಿಸಲಾಗಿದೆ. ‘ವಿಕ್ರಮ್’ ಹೆಸರಿನ ಚಿತ್ರದ ಟೀಸರ್ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ. ಚಿತ್ರವನ್ನು ಕಮಲ್ ರಾಜ್ ಫಿಲ್ಮ್ಸ್ ಇಂಟರ್ನ್ಯಾಷನಲ್ ಸಂಸ್ಥೆ ನಿರ್ಮಿಸುತ್ತಿದ್ದು, ಅನಿರುದ್ಧ್ ರವಿಚಂದರ್ ಸಂಗೀತ ಇರಲಿದೆ. ಲೋಕೇಶ್ ಕನಗರಾಜ್ ನಿರ್ದೇಶಿಸಲಿರುವ ಚಿತ್ರದ ಶೂಟಿಂಗ್ ಇನ್ನಷ್ಟೇ ಆರಂಭವಾಗಬೇಕಿದೆ.

ಕಮಲ್ ಹಾಸನ್ ಸುಂದರ ಪರಿಸರದ ಮನೆಯೊಳಗೆ ಇರುವಂತೆ ಟೀಸರ್ ತೆರೆದುಕೊಳ್ಳುತ್ತದೆ. ಊಟಕ್ಕೆ ಬಾಳೆ ಎಲೆಯನ್ನು ಹರಡಿ, ಬಗೆಬಗೆಯ ಖಾದ್ಯಗಳನ್ನು ಎಲೆಗೆ ಬಡಿಸುತ್ತಾ, ವಿವಿಧ ಆಯುಧಗಳನ್ನು ಗೌಪ್ಯವಾಗಿ ಜೋಡಿಸಿಡುವ ಕಮಲ್ ಹಾಸನ್ ಖಡಕ್ ಲುಕ್ ಅಭಿಮಾನಿಗಳನ್ನು ರೋಮಾಂಚನಗೊಳಿಸುವಂತಿದೆ.

ಚಿತ್ರಕ್ಕೆ ‘ವಿಕ್ರಮ್’ ಎಂಬ ಶೀರ್ಷಿಕೆಯನ್ನು ಘೋಷಿಸಲಾಗಿದ್ದು, ಇದು 1986ರಲ್ಲಿ ತೆರೆಕಂಡ ಕಮಲ್ ಹಾಸನ್ ಅಭಿನಯದ ಆಕ್ಷನ್ ಚಿತ್ರದ ಹೆಸರಾಗಿದೆ. ಆ ಚಿತ್ರಕ್ಕೂ ಈ ಚಿತ್ರಕ್ಕೂ ಏನಾದರೂ ಸಂಬಂಧ ಇರಲಿದೆಯೇ? ಇದು 1986ರ ವಿಕ್ರಮ್ ಸಿನಿಮಾದ ಮುಂದುವರಿದ ಭಾಗವೇ ಎಂಬ ಪ್ರಶ್ನೆ ಅಭಿಮಾನಿಗಳ ಮನದಲ್ಲಿ ಮೂಡುವಂತೆ ಮಾಡಿದೆ. ಚಿತ್ರವು ಚೆನ್ನೈ ಸುತ್ತಮುತ್ತ ಚಿತ್ರೀಕರಣಗೊಳ್ಳಲಿದ್ದು, ಮುಂದಿನ ಏಪ್ರಿಲ್ ವೇಳೆಗೆ ತೆರೆಕಾಣುವ ನಿರೀಕ್ಷೆ ಇದೆ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ