AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಮಲ್ ಹಾಸನ್ ಹುಟ್ಟುಹಬ್ಬಕ್ಕೆ ಹೊಸ ಚಿತ್ರದ ಟೈಟಲ್ ಟೀಸರ್ ಬಿಡುಗಡೆಯಾಯ್ತು!

ಕಮಲ್ ಹಾಸನ್ ಅಭಿನಯಿಸಲಿರುವ ಹೊಸ ಚಿತ್ರದ ಟೈಟಲ್ ಟೀಸರನ್ನು ಕಮಲ್ 66ನೇ ಹುಟ್ಟುಹಬ್ಬದ ದಿನವಾದ ಇಂದು ಬಿಡುಗಡೆಗೊಳಿಸಲಾಗಿದೆ. ‘ವಿಕ್ರಮ್’ ಹೆಸರಿನ ಚಿತ್ರದ ಟೀಸರ್ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ. ಚಿತ್ರವನ್ನು ಕಮಲ್ ರಾಜ್ ಫಿಲ್ಮ್ಸ್ ಇಂಟರ್ನ್ಯಾಷನಲ್ ಸಂಸ್ಥೆ ನಿರ್ಮಿಸುತ್ತಿದ್ದು, ಅನಿರುದ್ಧ್ ರವಿಚಂದರ್ ಸಂಗೀತ ಇರಲಿದೆ. ಲೋಕೇಶ್ ಕನಗರಾಜ್ ನಿರ್ದೇಶಿಸಲಿರುವ ಚಿತ್ರದ ಶೂಟಿಂಗ್ ಇನ್ನಷ್ಟೇ ಆರಂಭವಾಗಬೇಕಿದೆ. ಕಮಲ್ ಹಾಸನ್ ಸುಂದರ ಪರಿಸರದ ಮನೆಯೊಳಗೆ ಇರುವಂತೆ ಟೀಸರ್ ತೆರೆದುಕೊಳ್ಳುತ್ತದೆ. ಊಟಕ್ಕೆ ಬಾಳೆ ಎಲೆಯನ್ನು ಹರಡಿ, ಬಗೆಬಗೆಯ ಖಾದ್ಯಗಳನ್ನು ಎಲೆಗೆ ಬಡಿಸುತ್ತಾ, ವಿವಿಧ […]

ಕಮಲ್ ಹಾಸನ್ ಹುಟ್ಟುಹಬ್ಬಕ್ಕೆ ಹೊಸ ಚಿತ್ರದ ಟೈಟಲ್ ಟೀಸರ್ ಬಿಡುಗಡೆಯಾಯ್ತು!
ಸಾಧು ಶ್ರೀನಾಥ್​
|

Updated on: Nov 09, 2020 | 12:56 PM

Share

ಕಮಲ್ ಹಾಸನ್ ಅಭಿನಯಿಸಲಿರುವ ಹೊಸ ಚಿತ್ರದ ಟೈಟಲ್ ಟೀಸರನ್ನು ಕಮಲ್ 66ನೇ ಹುಟ್ಟುಹಬ್ಬದ ದಿನವಾದ ಇಂದು ಬಿಡುಗಡೆಗೊಳಿಸಲಾಗಿದೆ. ‘ವಿಕ್ರಮ್’ ಹೆಸರಿನ ಚಿತ್ರದ ಟೀಸರ್ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ. ಚಿತ್ರವನ್ನು ಕಮಲ್ ರಾಜ್ ಫಿಲ್ಮ್ಸ್ ಇಂಟರ್ನ್ಯಾಷನಲ್ ಸಂಸ್ಥೆ ನಿರ್ಮಿಸುತ್ತಿದ್ದು, ಅನಿರುದ್ಧ್ ರವಿಚಂದರ್ ಸಂಗೀತ ಇರಲಿದೆ. ಲೋಕೇಶ್ ಕನಗರಾಜ್ ನಿರ್ದೇಶಿಸಲಿರುವ ಚಿತ್ರದ ಶೂಟಿಂಗ್ ಇನ್ನಷ್ಟೇ ಆರಂಭವಾಗಬೇಕಿದೆ.

ಕಮಲ್ ಹಾಸನ್ ಸುಂದರ ಪರಿಸರದ ಮನೆಯೊಳಗೆ ಇರುವಂತೆ ಟೀಸರ್ ತೆರೆದುಕೊಳ್ಳುತ್ತದೆ. ಊಟಕ್ಕೆ ಬಾಳೆ ಎಲೆಯನ್ನು ಹರಡಿ, ಬಗೆಬಗೆಯ ಖಾದ್ಯಗಳನ್ನು ಎಲೆಗೆ ಬಡಿಸುತ್ತಾ, ವಿವಿಧ ಆಯುಧಗಳನ್ನು ಗೌಪ್ಯವಾಗಿ ಜೋಡಿಸಿಡುವ ಕಮಲ್ ಹಾಸನ್ ಖಡಕ್ ಲುಕ್ ಅಭಿಮಾನಿಗಳನ್ನು ರೋಮಾಂಚನಗೊಳಿಸುವಂತಿದೆ.

ಚಿತ್ರಕ್ಕೆ ‘ವಿಕ್ರಮ್’ ಎಂಬ ಶೀರ್ಷಿಕೆಯನ್ನು ಘೋಷಿಸಲಾಗಿದ್ದು, ಇದು 1986ರಲ್ಲಿ ತೆರೆಕಂಡ ಕಮಲ್ ಹಾಸನ್ ಅಭಿನಯದ ಆಕ್ಷನ್ ಚಿತ್ರದ ಹೆಸರಾಗಿದೆ. ಆ ಚಿತ್ರಕ್ಕೂ ಈ ಚಿತ್ರಕ್ಕೂ ಏನಾದರೂ ಸಂಬಂಧ ಇರಲಿದೆಯೇ? ಇದು 1986ರ ವಿಕ್ರಮ್ ಸಿನಿಮಾದ ಮುಂದುವರಿದ ಭಾಗವೇ ಎಂಬ ಪ್ರಶ್ನೆ ಅಭಿಮಾನಿಗಳ ಮನದಲ್ಲಿ ಮೂಡುವಂತೆ ಮಾಡಿದೆ. ಚಿತ್ರವು ಚೆನ್ನೈ ಸುತ್ತಮುತ್ತ ಚಿತ್ರೀಕರಣಗೊಳ್ಳಲಿದ್ದು, ಮುಂದಿನ ಏಪ್ರಿಲ್ ವೇಳೆಗೆ ತೆರೆಕಾಣುವ ನಿರೀಕ್ಷೆ ಇದೆ.

ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ