AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತೀರ್ಥರೂಪ ತಂದೆಯವರಿಗೆ’: ಇದು ‘ಹೊಂದಿಸಿ ಬರೆಯಿರಿ’ ನಿರ್ದೇಶಕನ ಹೊಸ ಚಿತ್ರ

ಕನ್ನಡ ಮತ್ತು ತೆಲುಗಿನಲ್ಲಿ ‘ತೀರ್ಥರೂಪ ತಂದೆಯವರಿಗೆ’ ಸಿನಿಮಾ ಸಿದ್ಧವಾಗಲಿದೆ. ತೆಲುಗಿನಲ್ಲಿ ‘ಪ್ರಿಯಮೈನ ನಾನ್ನಕು’ ಎಂದು ಟೈಟಲ್​ ಇಡಲಾಗಿದೆ. ನಿಹಾರ್ ಮುಖೇಶ್ ಅವರು ಈ ಸಿನಿಮಾಗೆ ಹೀರೋ ಆಗಿದ್ದಾರೆ. ವರಮಹಾಲಕ್ಷ್ಮೀ ಹಬ್ಬದ ಶುಭದಿನದಂದು ಈ ಚಿತ್ರಕ್ಕೆ ಮುಹೂರ್ತ ಮಾಡಲಾಗಿದೆ. ಚಿತ್ರತಂಡದ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ..

‘ತೀರ್ಥರೂಪ ತಂದೆಯವರಿಗೆ’: ಇದು ‘ಹೊಂದಿಸಿ ಬರೆಯಿರಿ’ ನಿರ್ದೇಶಕನ ಹೊಸ ಚಿತ್ರ
‘ತೀರ್ಥರೂಪ ತಂದೆಯವರಿಗೆ’ ಸಿನಿಮಾದ ಮುಹೂರ್ತ
ಮದನ್​ ಕುಮಾರ್​
|

Updated on: Aug 16, 2024 | 10:37 PM

Share

2023ರಲ್ಲಿ ಗಮನ ಸೆಳೆದ ಕನ್ನಡ ಸಿನಿಮಾಗಳಲ್ಲಿ ‘ಹೊಂದಿಸಿ ಬರೆಯಿರಿ’ ಕೂಡ ಪ್ರಮುಖವಾಗಿದೆ. ಈ ಚಿತ್ರದ ಮೂಲಕ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ ಅವರು ಜನರ ಮೆಚ್ಚುಗೆ ಗಳಿಸಿದ್ದರು. ಆ ಸಿನಿಮಾದಲ್ಲಿ ಡಿಫರೆಂಟ್​ ಆದ ಟೈಟಲ್​ ಹಾಗೂ ಜನರಿಗೆ ಇಷ್ಟವಾಗುವ ಕಹಾನಿ ಇತ್ತು. ಈಗ ಅವರು ಹೊಸ ಸಿನಿಮಾದ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಈ ಬಾರಿಯೂ ಅವರು ಡಿಫರೆಂಟ್​ ಆದಂತಹ ಶೀರ್ಷಿಕೆ ಆಯ್ಕೆ ಮಾಡಿಕೊಂಡಿದ್ದಾರೆ. ಅಪ್ಪಟ ಕನ್ನಡದ ಟೈಟಲ್​ ಅನ್ನೇ ಅವರು ಆಯ್ದುಕೊಂಡಿದ್ದಾರೆ. ‘ತೀರ್ಥರೂಪ ತಂದೆಯವರಿಗೆ’ ಎಂಬುದು ರಾಮೇನಹಳ್ಳಿ ಜಗನ್ನಾಥ ಅವರ ಹೊಸ ಸಿನಿಮಾದ ಶೀರ್ಷಿಕೆ.

ಫ್ಯಾಮಿಲಿ ಪ್ರೇಕ್ಷಕರಿಗೆ ‘ಹೊಂದಿಸಿ ಬರೆಯಿರಿ’ ಸಿನಿಮಾ ಸಖತ್ ಇಷ್ಟ ಆಗಿತ್ತು. ಈಗ ‘ತೀರ್ಥರೂಪ ತಂದೆಯವರಿಗೆ’ ಸಿನಿಮಾ ಟೈಟಲ್​ ಕೂಡ ಕೌಟುಂಬಿಕ ಪ್ರೇಕ್ಷಕರನ್ನು ಟಾರ್ಗೆಟ್​ ಮಾಡಿದಂತಿದೆ. ವರಮಹಾಲಕ್ಷ್ಮೀ ಹಬ್ಬದ ದಿನ ಬೆಂಗಳೂರಿನ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಈ ಸಿನಿಮಾಗೆ ಮುಹೂರ್ತ ಮಾಡಲಾಗಿದೆ. ನಿರ್ದೇಶಕರ ಪುತ್ರಿ ಈ ಚಿತ್ರಕ್ಕೆ ಕ್ಲ್ಯಾಪ್ ಮಾಡಿದರೆ, ನವೀನ್ ಶಂಕರ್ ಮತ್ತು ಅರ್ಚನಾ ಜೋಯಿಸ್ ಅವರು ಕ್ಯಾಮೆರಾ ಚಾಲನೆ ಮಾಡಿ ಶುಭ ಕೋರಿದರು.

‘ತೀರ್ಥರೂಪ ತಂದೆಯವರಿಗೆ’ ಚಿತ್ರವು ‘ಜೈ ಚಾಮುಂಡೇಶ್ವರಿ ಪ್ರೊಡಕ್ಷನ್ಸ್’ ಮೂಲಕ ನಿರ್ಮಾಣ ಆಗುತ್ತಿದೆ. ರಾಮೇನಹಳ್ಳಿ ಜಗನ್ನಾಥ ಅವರೇ ಕಥೆ ಬರೆದಿದ್ದಾರೆ. ‘ಹೊಂದಿಸಿ ಬರೆಯಿರಿ’ ಚಿತ್ರ ನಿರ್ಮಾಣ ಮಾಡಿದ್ದ ‘ಸಂಡೇ ಸಿನಿಮಾಸ್’ ಈ ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿದೆ. ‘ಬ್ಲಿಂಕ್’ ಸಿನಿಮಾ ಖ್ಯಾತಿಯ ರವಿಚಂದ್ರ ಎ.ಜೆ. ಅವರು ‘ತೀರ್ಥರೂಪ ತಂದೆಯವರಿಗೆ’ ಸಿನಿಮಾಗೆ ಎಕ್ಸಿಕ್ಯುಟಿವ್ ಪ್ರೊಡ್ಯೂಸರ್ ಆಗಿ ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ: ಅತ್ಯುತ್ತಮ ನಟ-ನಟಿ ‘ರಾಷ್ಟ್ರ ಪ್ರಶಸ್ತಿ’ ಪಡೆದ ಕನ್ನಡದ ಪ್ರತಿಭಾವಂತ ಕಲಾವಿದರು ಇವರು..

ದೀಪಕ್ ಯರಗೇರಾ ಅವರು ‘ತೀರ್ಥರೂಪ ತಂದೆಯವರಿಗೆ’ ಛಾಯಾಗ್ರಹಣ ಮಾಡುತ್ತಿದ್ದಾರೆ. ಪ್ರಶಾಂತ್ ರಾಜಪ್ಪ ಅವರು ಸಂಭಾಷಣೆ ಬರೆದಿದ್ದಾರೆ. ಶೀಘ್ರದಲ್ಲೇ ಈ ಸಿನಿಮಾದ ಶೂಟಿಂಗ್ ಆರಂಭ ಆಗಲಿದೆ. ತೆಲುಗಿನ ಸೀರಿಯಲ್ ಮೂಲಕ ಕಿರುತೆರೆ ಪ್ರೇಕ್ಷಕರ ಮನಗೆದ್ದ ನಿಹಾರ್ ಮುಖೇಶ್ ಅವರು ‘ತೀರ್ಥರೂಪ ತಂದೆಯವರಿಗೆ’ ಸಿನಿಮಾ ಮೂಲಕ ಹೀರೋ ಆಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಿದ್ದಾರೆ. ಅವರು ನಟಿಸಿರುವ ‘ಗೀತಾ ಶಂಕರಂ‌’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್