ಭಜರಂಗಿ 2 ಸಿನಿಮಾ ಸೆಟ್​ಗೆ ಬೆಂಕಿ ಅವಘಡ ಬೆನ್ನಲ್ಲೇ ಸ್ಟುಡಿಯೋಗೆ ಬೀಗಮುದ್ರೆ!

ನೆಲಮಂಗಲ: ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್ ಅಭಿನಯದ ಭಜರಂಗಿ 2 ಚಿತ್ರೀಕರಣದ ಸೆಟ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ ಹಿನ್ನೆಲೆಯಲ್ಲಿ ಮೋಹನ್ ಬಿ ಕೆರೆ ಸ್ಟುಡಿಯೋಗೆ ಬೀಗ ಹಾಕಲಾಗಿದೆ. ಮರಸರಹಳ್ಳಿಯ ಮೋಹನ್ ಬಿ ಕೆರೆ ಸ್ಟುಡಿಯೋದಲ್ಲಿ ಎರಡು ಬಾರಿ ಬೆಂಕಿ ಕಾಣಿಸಿಕೊಂಡಿತ್ತು. ಹೀಗಾಗಿ ಸ್ಥಳಕ್ಕೆ ಭೇಟಿ ನೀಡಿದ ನೆಲಮಂಗಲ ತಹಶೀಲ್ದಾರ್ ಶ್ರೀನಿವಾಸಯ್ಯ, ಆರ್​ಐ, ವಿಐ ಸೇರಿದಂತೆ ಕಚೇರಿ ಸಿಬ್ಬಂದಿ ಸ್ಟುಡಿಯೋ ಪರಿಶೀಲನೆ ನಡೆಸಿದ್ದಾರೆ. ನಿರ್ಲಕ್ಷ್ಯ, ಮುಂಜಾಗ್ರತಾ ಕ್ರಮ ಹಾಗು ಜೀವರಕ್ಷಕ ಸಂಬಂಧ ಸ್ಟುಡಿಯೋಗೆ ಬೀಗಮುದ್ರೆ ಹಾಕಿದ್ದಾರೆ. ಸುಮಾರು 1 […]

ಭಜರಂಗಿ 2 ಸಿನಿಮಾ ಸೆಟ್​ಗೆ ಬೆಂಕಿ ಅವಘಡ ಬೆನ್ನಲ್ಲೇ ಸ್ಟುಡಿಯೋಗೆ ಬೀಗಮುದ್ರೆ!
ಸಾಧು ಶ್ರೀನಾಥ್​

Updated on: Jan 20, 2020 | 3:06 PM

ನೆಲಮಂಗಲ: ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್ ಅಭಿನಯದ ಭಜರಂಗಿ 2 ಚಿತ್ರೀಕರಣದ ಸೆಟ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ ಹಿನ್ನೆಲೆಯಲ್ಲಿ ಮೋಹನ್ ಬಿ ಕೆರೆ ಸ್ಟುಡಿಯೋಗೆ ಬೀಗ ಹಾಕಲಾಗಿದೆ.

ಮರಸರಹಳ್ಳಿಯ ಮೋಹನ್ ಬಿ ಕೆರೆ ಸ್ಟುಡಿಯೋದಲ್ಲಿ ಎರಡು ಬಾರಿ ಬೆಂಕಿ ಕಾಣಿಸಿಕೊಂಡಿತ್ತು. ಹೀಗಾಗಿ ಸ್ಥಳಕ್ಕೆ ಭೇಟಿ ನೀಡಿದ ನೆಲಮಂಗಲ ತಹಶೀಲ್ದಾರ್ ಶ್ರೀನಿವಾಸಯ್ಯ, ಆರ್​ಐ, ವಿಐ ಸೇರಿದಂತೆ ಕಚೇರಿ ಸಿಬ್ಬಂದಿ ಸ್ಟುಡಿಯೋ ಪರಿಶೀಲನೆ ನಡೆಸಿದ್ದಾರೆ. ನಿರ್ಲಕ್ಷ್ಯ, ಮುಂಜಾಗ್ರತಾ ಕ್ರಮ ಹಾಗು ಜೀವರಕ್ಷಕ ಸಂಬಂಧ ಸ್ಟುಡಿಯೋಗೆ ಬೀಗಮುದ್ರೆ ಹಾಕಿದ್ದಾರೆ.

ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ಸಿನಿಮಾ ಸೆಟ್ ಹಾಕಲಾಗಿತ್ತು. 200 ಜನ ತಾಂತ್ರಿಕ ವರ್ಗ ಹಾಗೂ ಚಿತ್ರತಂಡ ಶೂಟಿಂಗ್ ಮಾಡುತ್ತಿದ್ದಾಗ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಭಜರಂಗಿ-2 ಸಿನಿಮಾ ಸೆಟ್​ ಸಂಪೂರ್ಣ ಸುಟ್ಟು ಕರಕಲಾಗಿತ್ತು. ಇಂದು ಅದೇ ಸೆಟ್ ಮರುನಿರ್ಮಾಣ ಕಾರ್ಯದಲ್ಲಿ ಚಿತ್ರತಂಡ ತೊಡಗಿತ್ತು. ಅನುಮತಿ ಇಲ್ಲದೆ ಸ್ಟುಡಿಯೋದ ಬೀಗಮುದ್ರೆ ಓಪನ್ ಮಾಡದಂತೆ ಪೊಲೀಸರಿಗೆ ತಹಶೀಲ್ದಾರ್ ಶ್ರೀನಿವಾಸಯ್ಯ ಸೂಚಿಸಿದ್ದಾರೆ.


Published On - 3:05 pm, Mon, 20 January 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us