AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tejasswi Prakash: ‘ಕಾಂತಾರ’ ಚಿತ್ರದ ಹಾಡನ್ನು ಕನ್ನಡದಲ್ಲೇ ಹಾಡಿದ ಹಿಂದಿ ನಟಿ; ತೇಜಸ್ವಿ ಪ್ರಕಾಶ್ ವಿಡಿಯೋ ವೈರಲ್

ತೇಜಸ್ವಿ ಪ್ರಕಾಶ್ ಅವರಿಗೆ ಕಿರುತೆರೆ ಲೋಕದಲ್ಲಿ ಅಪಾರ ಅನುಭವ ಇದೆ. ಅವರು ಬಣ್ಣದ ಲೋಕಕ್ಕೆ ಕಾಲಿಟ್ಟು 11 ವರ್ಷ ಕಳೆದಿದೆ. ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಬರೋಬ್ಬರಿ 67 ಲಕ್ಷ ಮಂದಿ ಹಿಂಬಾಲಿಸುತ್ತಿದ್ದಾರೆ.

Tejasswi Prakash: ‘ಕಾಂತಾರ’ ಚಿತ್ರದ ಹಾಡನ್ನು ಕನ್ನಡದಲ್ಲೇ ಹಾಡಿದ ಹಿಂದಿ ನಟಿ; ತೇಜಸ್ವಿ ಪ್ರಕಾಶ್ ವಿಡಿಯೋ ವೈರಲ್
ತೇಜಸ್ವಿ ಪ್ರಕಾಶ್
ರಾಜೇಶ್ ದುಗ್ಗುಮನೆ
|

Updated on:Mar 02, 2023 | 7:57 AM

Share

ನಟಿ ತೇಜಸ್ವಿ ಪ್ರಕಾಶ್ (Tejasswi Prakash) ಅವರು  ‘ಹಿಂದಿ ಬಿಗ್ ಬಾಸ್ ಸೀಸನ್ 15’ರ ವಿನ್ನರ್ ಆದರು. ಅಚ್ಚರಿ ಎಂದರೆ ಮನೆ ಒಳಗೆ ಇದ್ದಾಗಲೇ ಅವರಿಗೆ ‘ನಾಗಿನ್​ 6’ ಧಾರಾವಾಹಿಯ ಆಫರ್ ಸಿಕ್ಕಿತು. ಸದ್ಯ ಅವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈ ಸೀರಿಯಲ್ ಒಳ್ಳೆಯ ಟಿಆರ್​ಪಿ ಪಡೆದುಕೊಳ್ಳುತ್ತಿದೆ. ಇದಲ್ಲದೆ, ಮರಾಠಿ ಚಿತ್ರದಲ್ಲೂ ಅವರು ನಟಿಸುತ್ತಿದ್ದಾರೆ. ಇವೆಲ್ಲದರ ಜೊತೆ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರೋಕೆ ಹೆಚ್ಚೆಚ್ಚು ಸೋಶಿಯಲ್ ಮೀಡಿಯಾ ಬಳಕೆ ಮಾಡುತ್ತಾರೆ. ಈಗ ಅವರು ಕನ್ನಡಿಗರ ಮನ ಗೆದ್ದಿದ್ದಾರೆ. ‘ಕಾಂತಾರ’ ಚಿತ್ರದ (Kantara Movie) ‘ಕರ್ಮದ ಕಲ್ಲನು..’ ಹಾಡನ್ನು ಕನ್ನಡದಲ್ಲೇ ಹಾಡುವ ಮೂಲಕ ಮೆಚ್ಚುಗೆ ಪಡೆದಿದ್ದಾರೆ.

ತೇಜಸ್ವಿ ಪ್ರಕಾಶ್ ಅವರಿಗೆ ಕಿರುತೆರೆ ಲೋಕದಲ್ಲಿ ಅಪಾರ ಅನುಭವ ಇದೆ. ಅವರು ಬಣ್ಣದ ಲೋಕಕ್ಕೆ ಕಾಲಿಟ್ಟು 11 ವರ್ಷ ಕಳೆದಿದೆ. ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಬರೋಬ್ಬರಿ 67 ಲಕ್ಷ ಮಂದಿ ಹಿಂಬಾಲಿಸುತ್ತಿದ್ದಾರೆ. ಇದು ಅವರ ಜನಪ್ರಿಯತೆಗೆ ಹಿಡಿದ ಕನ್ನಡಿ. ಈಗ ಅವರು ಹಂಚಿಕೊಂಡಿರುವ ವಿಡಿಯೋ ಸಾಕಷ್ಟು ವೈರಲ್ ಆಗುತ್ತಿದೆ.

ಇದನ್ನೂ ಓದಿ
Image
ಟಿಆರ್​ಪಿ ರೇಸ್​ನಲ್ಲಿ ಅಚ್ಚರಿ ಮೂಡಿಸಿದ ಹೊಸ ಧಾರಾವಾಹಿ; ನಾಲ್ಕೇ ಎಪಿಸೋಡ್​ನಲ್ಲಿ ಆಯ್ತು ಮೋಡಿ
Image
‘ಆಂಟಿ’ ಎಂಬುದನ್ನು ಬೈಗುಳವಾಗಿ ಉಪಯೋಗಿಸಿದೆ; ಬಿಗ್​ ಬಾಸ್​ನಿಂದ ಹೊರಬಂದು ಸತ್ಯ ಬಾಯ್ಬಿಟ್ಟ ನಟಿ
Image
Tejasswi Prakash: ಬಿಗ್​ ಬಾಸ್​ ಫಿನಾಲೆಗೂ ಮುನ್ನವೇ ಸ್ಪರ್ಧಿ ಜೊತೆ ನಡೆದಿತ್ತು ದೊಡ್ಡ ಡೀಲ್​; ಈಗ ಸತ್ಯ ಬಹಿರಂಗ

‘ಕರ್ಮದ ಕಲ್ಲನು ಎಡವಿದ ಮನುಜನ

ಬೆರಳಿನ ಗಾಯವು ಮಾಯದು

ಹಗೆಯಲಿ ಕೋವಿಗೆ ತಲೆ ಕೊಡೊ ಮರುಳರ

ಗುಡಿಯಲಿ ದೈವವು ಕಾಯದು

ಕತ್ತಲನು ಮಣಿಸೋಕೆ ಹಚ್ಚಿ ಇಟ್ಟ ದೀಪ

ಊರನ್ನೇ ಸುಡುವಂತ ಜ್ವಾಲೆ ಆಯಿತೇನೋ..’ ಎಂಬ ಸಾಲುಗಳನ್ನು ಅವರು ಕನ್ನಡದಲ್ಲೇ ಹಾಡಿದ್ದಾರೆ. ಈ ಹಾಡಿನ ಅರ್ಥವನ್ನು ಇಂಗ್ಲಿಷ್​ನಲ್ಲಿ ಬರೆದುಕೊಂಡಿದ್ದಾರೆ. ಈ ವಿಡಿಯೋ 20 ಲಕ್ಷಕ್ಕೂ ಅಧಿಕ ವೀಕ್ಷಣೆ ಕಂಡಿದೆ.

ಇದನ್ನೂ ಓದಿ: Tejasswi Prakash: ಬಿಗ್​ ಬಾಸ್ ವಿಜೇತೆ ತೇಜಸ್ವಿ ಪ್ರಕಾಶ್ ಹೊಸ ಫೋಟೋಶೂಟ್; ನಟಿಯ ಸಿಂಪಲ್​ ಲುಕ್​ಗೆ ಫ್ಯಾನ್ಸ್ ಫಿದಾ

‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಬಾಲಿವುಡ್​ನಲ್ಲೂ ಒಳ್ಳೆಯ ಬಿಸ್ನೆಸ್ ಮಾಡಿದೆ. ಈ ಚಿತ್ರವನ್ನು ನಿರ್ದೇಶನ ಮಾಡಿ, ನಟಿಸಿದ ರಿಷಬ್ ಶೆಟ್ಟಿ ಅವರು ಚಿತ್ರದಿಂದ ಸಖತ್ ಜನಪ್ರಿಯತೆ ಪಡೆದರು. ಈ ಚಿತ್ರದ ಹಾಡುಗಳು ಕೂಡ ಸಾಕಷ್ಟು ಸದ್ದು ಮಾಡಿವೆ. ಹಿಂದಿ ಕಿರುತೆರೆ ನಟಿಯರು ಕೂಡ ಈ ಹಾಡನ್ನು ಗುನುಗುತ್ತಿದ್ದಾರೆ. ಅಷ್ಟರ ಮಟ್ಟಿಗೆ ಚಿತ್ರದ ಹಾಡುಗಳು ಸೌಂಡ್ ಮಾಡುತ್ತಿವೆ. ಅಂದಹಾಗೆ, ‘ವರಾಹ ರೂಪಂ..’  ಹಾಡು ವಿವಾದದ ಮೂಲಕ ಸುದ್ದಿ ಆಗಿದೆ. ಈ ಹಾಡಿನ ವಿರುದ್ಧ ಕ್ರತಿಚೌರ್ಯದ ಆರೋಪ ಇದ್ದು, ಪ್ರಕರಣ ಕೋರ್ಟ್​ನಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:10 am, Thu, 2 March 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?