Singer Mangli: ಸಿಂಗರ್​ ಮಂಗ್ಲಿ ಈಗ ಹೀರೋಯಿನ್​; ಚಂದ್ರಚೂಡ್​ ನಿರ್ದೇಶನದ ‘ಪಾದರಾಯ’ ಚಿತ್ರದಲ್ಲಿ ನಟನೆ

Padaraya | Kannada Movie: ನೈಜ ಘಟನೆಯನ್ನು ಆಧರಿಸಿ ‘ಪಾದರಾಯ’ ಸಿನಿಮಾ ಮೂಡಿಬರಲಿದೆ. ಈ ಸಿನಿಮಾದಲ್ಲಿ ಖ್ಯಾತ ಗಾಯಕಿ ಮಂಗ್ಲಿ ಅವರು ಹೀರೋಯಿನ್​ ಆಗಿ ನಟಿಸುವುದು ಖಚಿತವಾಗಿದೆ.

Singer Mangli: ಸಿಂಗರ್​ ಮಂಗ್ಲಿ ಈಗ ಹೀರೋಯಿನ್​; ಚಂದ್ರಚೂಡ್​ ನಿರ್ದೇಶನದ ‘ಪಾದರಾಯ’ ಚಿತ್ರದಲ್ಲಿ ನಟನೆ
ಮಂಗ್ಲಿ, ಚಕ್ರವರ್ತಿ ಚಂದ್ರಚೂಡ್
Follow us
| Updated By: ಮದನ್​ ಕುಮಾರ್​

Updated on: Jan 12, 2023 | 5:14 PM

ಬಿಗ್​ ಬಾಸ್​ ಖ್ಯಾತಿಯ ಚಕ್ರವರ್ತಿ ಚಂದ್ರಚೂಡ್ (Chakravarthy Chandrachud) ಅವರು ‘ಪಾದರಾಯ’ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ‘ಮಾಸ್ತಿಗುಡಿ’ ಖ್ಯಾತಿಯ ನಿರ್ದೇಶಕ ನಾಗಶೇಖರ್ (Nagashekar) ಅವರು ಹೀರೋ ಆಗಿ ನಟಿಸುತ್ತಿದ್ದಾರೆ. ಚಿತ್ರದ ಪ್ರಿ-ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿವೆ. ಶೂಟಿಂಗ್​ ಶುರುವಾಗುವುದಕ್ಕೂ ಮುನ್ನ ನಾಗಶೇಖರ್ ಅವರು 42 ದಿನಗಳ ಕಟ್ಟುನಿಟ್ಟಿನ ವ್ರತ ಆಚರಣೆ ಮಾಡುತ್ತಿದ್ದಾರೆ. ಚಕ್ರವರ್ತಿ ಚಂದ್ರಚೂಡ್ ಅವರಿಂದ ಹನುಮ ಮಾಲೆ ಹಾಕಿಸಿಕೊಂಡಿರುವ ನಾಗಶೇಖರ್ ಅಂಜನಾದ್ರಿ ಬೆಟ್ಟದಲ್ಲಿ ವ್ರತ ಆಚರಿಸುತ್ತಿದ್ದಾರೆ. ಈ ನಡುವೆ ಇನ್ನೊಂದು ಸೆನ್ಸೇಷನ್​ ನ್ಯೂಸ್​ ಕೇಳಿಬಂದಿದೆ. ಈ ಚಿತ್ರಕ್ಕೆ ಗಾಯಕಿ ಮಂಗ್ಲಿ (Singer Mangli) ಅವರು ಹೀರೋಯಿನ್​ ಆಗಿ ಸೆಲೆಕ್ಟ್​ ಆಗಿದ್ದಾರೆ.

‘ಕಣ್ಣೇ ಅದಿರಿಂದಿ’ ಹಾಡಿನ ಮೂಲಕ ಅಪಾರ ಜನಪ್ರಿಯತೆ ಪಡೆದುಕೊಂಡ ತೆಲುಗಿನ ಗಾಯಕಿ ಮಂಗ್ಲಿ ಅವರು ನಂತರ ಕನ್ನಡದ ಅನೇಕ ಹಾಡುಗಳಿಗೆ ಧ್ವನಿ ನೀಡಿದರು. ಈಗ ಹೀರೋಯಿನ್​ ಆಗಿ ಕನ್ನಡ ಚಿತ್ರರಂಗಕ್ಕೆ ಅವರು ಎಂಟ್ರಿ ನೀಡುತ್ತಿದ್ದಾರೆ. ಆ ಮೂಲಕ ಅವರ ಹೊಸ ಜರ್ನಿ ಆರಂಭಿಸುತ್ತಿದ್ದಾರೆ. ಅಭಿಮಾನಿಗಳಿಗೆ ಈ ಸುದ್ದಿ ಖುಷಿ ತಂದಿದೆ. ‘ಪಾದರಾಯ’ ಪ್ಯಾನ್ ಇಂಡಿಯಾ ಸಿನಿಮಾ ಎಂಬುದು ವಿಶೇಷ. ಈ ಚಿತ್ರದಲ್ಲಿ ಮಂಗ್ಲಿ ಅವರ ಪಾತ್ರ ಹೇಗಿರಲಿದೆ ಎಂಬುದನ್ನು ತಿಳಿದುಕೊಳ್ಳುವ ಕೌತುಕ ಮೂಡಿದೆ.

ಇದನ್ನೂ ಓದಿ: Mangli: ಮೈಸೂರಿಗೆ ಬಂದು ‘ಕನ್ನಡ ನನಗೆ ಎರಡನೇ ಮನೆ’ ಎಂದು ತೆಲುಗಿನಲ್ಲೇ ಹೇಳಿದ ಗಾಯಕಿ ಮಂಗ್ಲಿ

ಇದನ್ನೂ ಓದಿ
Image
Mangli: ಮೈಸೂರಿಗೆ ಬಂದು ‘ಕನ್ನಡ ನನಗೆ ಎರಡನೇ ಮನೆ’ ಎಂದು ತೆಲುಗಿನಲ್ಲೇ ಹೇಳಿದ ಗಾಯಕಿ ಮಂಗ್ಲಿ
Image
Singer Mangli: ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ತೆಲುಗು ಗಾಯಕಿ ಮಂಗ್ಲಿ ‘ವಂದೇ ಮಾತರಂ’ ಘೋಷ
Image
‘ಪುಷ್ಪ’ ಸಿನಿಮಾದ ಐಟಂ ಸಾಂಗ್​ ಹಾಡಿದ್ದು ‘ಮಂಗ್ಲಿ’ ಸಹೋದರಿ; ಹಿಟ್​ ಆಯ್ತು ಹಾಡು
Image
Singer Mangli: ‘ಏಕ್​ ಲವ್ ಯಾ’ ಸುದ್ದಿಗೋಷ್ಠಿಯಲ್ಲಿ ಪುನೀತ್​ ನೆನೆದು ಕಣ್ಣೀರು ಹಾಕಿದ ಗಾಯಕಿ ಮಂಗ್ಲಿ

ಚಕ್ರವರ್ತಿ ಚಂದ್ರಚೂಡ್ ಹಾಗೂ ನಾಗಶೇಖರ್ ಕಾಂಬಿನೇಶನ್​ನಲ್ಲಿ ತಯಾರಾಗುತ್ತಿರುವ ‘ಪಾದರಾಯ’ ಸಿನಿಮಾದ ಶೀರ್ಷಿಕೆಯು ಹನುಮ ಜಯಂತಿಯಂದು ರಿವೀಲ್ ಆಗಿತ್ತು. ಈಗ ಚಿತ್ರೀಕರಣಕ್ಕೆ ಭರದ ಸಿದ್ಧತೆ ನಡೆಯುತ್ತಿರುವ ಸಮಯದಲ್ಲಿ ಪಾತ್ರವರ್ಗದ ಬಗ್ಗೆ ಅಪ್​ಡೇಟ್​ ನೀಡಲಾಗಿದ್ದು, ಮಂಗ್ಲಿ ಅವರು ನಾಯಕಿಯಾಗಿ ಬಣ್ಣ ಹಚ್ಚುತ್ತಾರೆ ಎಂಬ ಸುದ್ದಿ ಅಧಿಕೃತವಾಗಿದೆ.

ಇದನ್ನೂ ಓದಿ: Singer Mangli: ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ತೆಲುಗು ಗಾಯಕಿ ಮಂಗ್ಲಿ ‘ವಂದೇ ಮಾತರಂ’ ಘೋಷ

‘ಪಾದರಾಯ’ ಚಿತ್ರವನ್ನು ಸಿದ್ದೇಶ್ವರ ಎಂಟರ್ಪ್ರೈಸಸ್ ಬ್ಯಾನರ್ ಮೂಲಕ ಆರ್. ಚಂದ್ರು ಅವರು ನಿರ್ಮಾಣ ಮಾಡುತ್ತಿದ್ದಾರೆ. ನಾಗಶೇಖರ್ ಕೂಡ ನಿರ್ಮಾಣದಲ್ಲಿ ಕೈ ಜೋಡಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಆಂಟೋನಿ ಸಂಕಲನದ ಜವಾಬ್ದಾರಿ ಹೊತ್ತಿದ್ದಾರೆ. ಸತ್ಯ ಹೆಗಡೆ ಅವರು ಛಾಯಾಗ್ರಹಣ ಮಾಡಲಿದ್ದಾರೆ.

ನೈಜ ಘಟನೆ ಆಧರಿಸಿದ ‘ಪಾದರಾಯ’:

2013-14ರ ಸಮಯದಲ್ಲಿ ನಡೆದ ನೈಜ ಘಟನೆಯನ್ನು ಆಧಾರವಾಗಿ ಇಟ್ಟುಕೊಂಡು ‘ಪಾದರಾಯ’ ಚಿತ್ರವನ್ನು ಕಟ್ಟಿಕೊಡಲಾಗುತ್ತಿದೆ. ಆರು ರಾಜ್ಯಕ್ಕೆ ಸಂಬಂಧಿಸಿದ ಘಟನೆಯೇ ಈ ಚಿತ್ರದ ಕಥಾವಸ್ತು. ಹಾಗಾಗಿ ಇದು ಪ್ಯಾನ್ ಇಂಡಿಯಾ ಸಿನಿಮಾವಾಗಿ ಮೂಡಿಬರುತ್ತಿದೆ. ಶೀಘ್ರದಲ್ಲೇ ಈ ಸಿನಿಮಾದ ಶೂಟಿಂಗ್​ ಆರಂಭ ಆಗಲಿದೆ. ಚಿತ್ರದಲ್ಲಿ ಇನ್ನೂ ಯಾರೆಲ್ಲ ನಟಿಸಲಿದ್ದಾರೆ ಎಂಬ ಬಗ್ಗೆ ಸದ್ಯದಲ್ಲೇ ಮಾಹಿತಿ ಸಿಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ