AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್​ಗಾಗಿ ದೇವಸ್ಥಾನ: ಕಿಚ್ಚನ 4 ಅಡಿ ಮೂರ್ತಿ ಎದುರು ಪುನೀತ್​ ರಾಜ್​ಕುಮಾರ್​​ ಭಾವಚಿತ್ರ

Kichcha Sudeep Temple: ಕಿಚ್ಚ ಸುದೀಪ್​ ದೇವಸ್ಥಾನಕ್ಕಾಗಿ ಸುಮಾರು 15 ಲಕ್ಷ ರೂಪಾಯಿ ಖರ್ಚು ಮಾಡಲಾಗುತ್ತಿದೆ. ಗ್ರಾಮಸ್ಥರಿಂದಲೇ ಸಂಗ್ರಹಿಸಿದ ದೇಣಿಗೆ ಹಣದಲ್ಲಿ ದೇವಸ್ಥಾನ ನಿರ್ಮಾಣ ಆಗುತ್ತಿದೆ.

ಸುದೀಪ್​ಗಾಗಿ ದೇವಸ್ಥಾನ: ಕಿಚ್ಚನ 4 ಅಡಿ ಮೂರ್ತಿ ಎದುರು ಪುನೀತ್​ ರಾಜ್​ಕುಮಾರ್​​ ಭಾವಚಿತ್ರ
ಕಿಚ್ಚ ಸುದೀಪ್​, ಪುನೀತ್​ ರಾಜ್​ಕುಮಾರ್​
TV9 Web
| Edited By: |

Updated on:Dec 02, 2021 | 1:15 PM

Share

ಸಿನಿಮಾ ನಟರನ್ನು ಆರಾಧಿಸುವ ಅಭಿಮಾನಿಗಳು ಸಾಕಷ್ಟು ಮಂದಿ ಇರುತ್ತಾರೆ. ನೆಚ್ಚಿನ ನಟನನ್ನು ದೇವರ ರೀತಿ ನೋಡುವ ಫ್ಯಾನ್ಸ್​ ಕೂಡ ಇದ್ದಾರೆ. ಕಿಚ್ಚ ಸುದೀಪ್​ (Kichcha Sudeep) ಅವರು ಅಂತಹ ಅಭಿಮಾನಿಗಳನ್ನು ಹೊಂದಿದ್ದಾರೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ರಾಯಚೂರು ಜಿಲ್ಲೆ ಶಿರವಾರ ತಾಲ್ಲೂಕಿನ ಕುರಕುಂದ ಗ್ರಾಮದಲ್ಲಿ ಸುದೀಪ್​ಗಾಗಿ ದೇವಸ್ಥಾನ (Kichcha Sudeep Temple) ನಿರ್ಮಾಣ ಮಾಡಲಾಗಿದೆ ಎಂಬುದು ವಿಶೇಷ. ಎಲ್ಲ ಕಲಾವಿದರಿಗೂ ಈ ಪರಿ ಅಭಿಮಾನ ಸಿಗುವುದಿಲ್ಲ. ಕಿಚ್ಚ ಸುದೀಪ್​ ನಟನೆ ಮಾತ್ರವಲ್ಲದೇ ಸಾಮಾಜಿಕ ಕೆಲಸಗಳಲ್ಲೂ ಗುರುತಿಸಿಕೊಂಡಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿರುವ ಅನೇಕರಿಗೆ ಆರ್ಥಿಕ ನೆರವು ನೀಡಿದ್ದಾರೆ. ಹಾಗಾಗಿ ಅವರನ್ನು ಅಭಿಮಾನಿಗಳು (Kichcha Sudeep Fans) ದೇವರಂತೆ ಕಾಣುತ್ತಾರೆ.

ಸುದೀಪ್ ಮೂರ್ತಿ ಇರುವ ದೇವಸ್ಥಾನ ನಿರ್ಮಾಣ ಮಾಡಲಾಗುತ್ತಿದೆ. ವಾಲ್ಮಿಕಿ ಮಹರ್ಷಿಯ 6 ಅಡಿ ಮೂರ್ತಿ ಕೂಡ ಇಲ್ಲಿದೆ. ಸುದೀಪ್​ ಅವರ 4 ಅಡಿ‌ ಎತ್ತರದ ಮೂರ್ತಿ ಪ್ರತಿಷ್ಠಾಪನೆಗೆ ಸಜ್ಜಾಗಿದೆ. ಅದರ ಎದುರು ಪುನೀತ್​ ರಾಜ್​ಕುಮಾರ್​ ಅವರ ಭಾವಚಿತ್ರ ಇರಿಸಲಾಗಿದೆ. ಅಪ್ಪು ಫೋಟೋವನ್ನು ಎಲ್​ಇಡಿ ಮಾದರಿಯಲ್ಲಿ ಅಳವಡಿಕೆ ಮಾಡಲಾಗಿದೆ. 30/40 ವಿಸ್ತೀರ್ಣದ ಜಾಗದಲ್ಲಿ ದೇವಸ್ಥಾನ ನಿರ್ಮಾಣ ಕಾರ್ಯ ನಡೆಯುತ್ತಿದೆ. ಇದಕ್ಕಾಗಿ ಸುಮಾರು 15 ಲಕ್ಷ ರೂಪಾಯಿ ಖರ್ಚು ಮಾಡಲಾಗುತ್ತಿದೆ. ಗ್ರಾಮಸ್ಥರಿಂದಲೇ ಸಂಗ್ರಹಿಸಿದ ದೇಣಿಗೆ ಹಣದಲ್ಲಿ ದೇವಸ್ಥಾನ ನಿರ್ಮಾಣ ಆಗುತ್ತಿದೆ.

ದೇವಸ್ಥಾನ ನಿರ್ಮಾಣದ ಬಗ್ಗೆ ಸುದೀಪ್ ಅವರನ್ನು ಭೇಟಿ ಮಾಡಿ ಗ್ರಾಮಸ್ಥರು ಅನುಮತಿ ಪಡೆದಿದ್ದರು. ಮೂರು ಬಾರಿ ಭೇಟಿ ಮಾಡಿದ ಬಳಿಕ ಅನುಮತಿ ಸಿಕ್ಕಿತ್ತು. ಕಳೆದ 75 ದಿನಗಳಿಂದ ಕಾಮಗಾರಿ ನಡೆಯುತ್ತಿದೆ. ಗಾರ್ಡನ್, ಸಿಸಿಟಿವಿ ಅಳವಡಿಕೆ, ಗ್ಲಾಸ್ ಫಿಟ್ಟಿಂಗ್ ಸೇರಿ‌ ಕೆಲ‌ವು ಕೆಲಸಗಳು ಬಾಕಿ ಉಳಿದಿವೆ. ಇನ್ನೊಂದು ತಿಂಗಳಲ್ಲಿ ದೇವಸ್ಥಾನ ಕಾಮಗಾರಿ ಪೂರ್ಣಗೊಳ್ಳಲಿದೆ. ದೇವಸ್ಥಾನ ಉದ್ಘಾಟನೆಗೆ ಬರುವುದಾಗಿ ಸುದೀಪ್​ ಹೇಳಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:

ಕ್ರಿಕೆಟ್​, ಸಿನಿಮಾ ಪ್ರಿಯರಿಗೆ ಗುಡ್​ ನ್ಯೂಸ್​; ‘83’ ಟೀಮ್​ ಜತೆ ಸೇರಿಕೊಂಡ ಕಿಚ್ಚ ಸುದೀಪ್​

ರವಿಚಂದ್ರನ್​ ಜತೆ ಸುದೀಪ್​ ‘ದೃಶ್ಯ’ ಚಿತ್ರ ಮಾಡ್ಬೇಕಿತ್ತು; ಆದರೆ ಮಿಸ್​ ಆಗಿದ್ದು ಹೇಗೆ?

Published On - 1:12 pm, Thu, 2 December 21

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ