AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್​ 2’ ಎದುರು ಸ್ಪರ್ಧೆಗೆ ಇಳಿದ ತಮಿಳು ಸ್ಟಾರ್ ನಟನ ​ ಸಿನಿಮಾ; ಗೆಲ್ಲೋದು ಯಶ್​ ಎಂದ ಫ್ಯಾನ್ಸ್​

ಸ್ಟಾರ್​ ನಟರ ಸಿನಿಮಾ ರಿಲೀಸ್ ಆಗುತ್ತಿದೆ ಎಂದರೆ ಅದರ ಎದುರು ಒಂದಷ್ಟು ಚಿತ್ರಗಳು ರಿಲೀಸ್​ಗೆ ಸಿದ್ಧವಾಗುತ್ತದೆ. ಈಗ ‘ಕೆಜಿಎಫ್​ 2’ ಎದುರು ದೊಡ್ಡದೊಡ್ಡ ಚಿತ್ರಗಳು ಸ್ಪರ್ಧೆಗೆ ಇಳಿಯೋಕೆ ರೆಡಿ ಆಗಿವೆ.

‘ಕೆಜಿಎಫ್​ 2’ ಎದುರು ಸ್ಪರ್ಧೆಗೆ ಇಳಿದ ತಮಿಳು ಸ್ಟಾರ್ ನಟನ ​ ಸಿನಿಮಾ; ಗೆಲ್ಲೋದು ಯಶ್​ ಎಂದ ಫ್ಯಾನ್ಸ್​
ಕೆಜಿಎಫ್​-ವಿಜಯ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jan 01, 2022 | 9:12 AM

ಯಶ್​ ನಟನೆಯ ‘ಕೆಜಿಎಫ್​ 2’ ಏಪ್ರಿಲ್​ 14ರಂದು ತೆರೆಗೆ ಬರುತ್ತಿದೆ. ‘ಕೆಜಿಎಫ್​’ ಸಿನಿಮಾ ತೆರೆಗೆ ಬಂದ ನಂತರ ‘ಕೆಜಿಎಫ್​ 2’ ಬಗ್ಗೆ ದೊಡ್ಡ ನಿರೀಕ್ಷೆ ಹುಟ್ಟಿತ್ತು. ಈಗ ಟೀಸರ್​ ಹಾಗೂ ಪೋಸ್ಟರ್​ ಮೂಲಕ ಸಿನಿಮಾದ ನಿರೀಕ್ಷೆ ಬೆಟ್ಟದಷ್ಟಾಗಿದೆ. ಇತ್ತೀಚೆಗೆ ‘ಕೆಜಿಎಫ್​ 2’ ಎದುರು ಸ್ಪರ್ಧಿಸುವುದಾಗಿ ಆಮಿರ್​ ಖಾನ್​ ನಟನೆಯ ‘ಲಾಲ್​ ಸಿಂಗ್​ ಛಡ್ಡಾ’ ಸಿನಿಮಾ ತಂಡ ಘೋಷಣೆ ಮಾಡಿತ್ತು. ಈಗ ಮತ್ತೊಂದು ಚಿತ್ರ ‘ಕೆಜಿಎಫ್​ 2’ ಜತೆ ಸ್ಪರ್ಧೆಗೆ ಇಳಿಯೋಕೆ ರೆಡಿ ಆಗಿದೆ.

ಸ್ಟಾರ್​ ನಟರ ಸಿನಿಮಾ ರಿಲೀಸ್ ಆಗುತ್ತಿದೆ ಎಂದರೆ ಅದರ ಎದುರು ಒಂದಷ್ಟು ಚಿತ್ರಗಳು ರಿಲೀಸ್​ಗೆ ಸಿದ್ಧವಾಗುತ್ತದೆ. ಈಗ ‘ಕೆಜಿಎಫ್​ 2’ ಎದುರು ದೊಡ್ಡದೊಡ್ಡ ಚಿತ್ರಗಳು ಸ್ಪರ್ಧೆಗೆ ಇಳಿಯೋಕೆ ರೆಡಿ ಆಗಿವೆ. ಹೊಸ ವರ್ಷದ ಪ್ರಯುಕ್ತ ‘ಬೀಸ್ಟ್​’ ಸಿನಿಮಾ ತಂಡ ಹೊಸ ಪೋಸ್ಟರ್​ ರಿಲೀಸ್​ ಮಾಡಿದೆ. ಈ ಪೋಸ್ಟರ್​ನಲ್ಲಿ ಏಪ್ರಿಲ್​ನಲ್ಲಿ ಚಿತ್ರಮಂದಿರಕ್ಕೆ ಲಗ್ಗೆ ಇಡುವ ಬಗ್ಗೆ ತಂಡ ಘೋಷಣೆ ಮಾಡಿದೆ. ಅದು ‘ಕೆಜಿಎಫ್​ 2’ ಎದುರೇ ಆಗಿರಲಿದೆ ಎಂದು ಅಭಿಮಾನಿಗಳು ಊಹಿಸುತ್ತಿದ್ದಾರೆ.

‘ಕೆಜಿಎಫ್​ 2’ ತಮಿಳಿಗೂ ಡಬ್​ ಆಗಿ ತೆರೆಕಾಣುತ್ತಿದೆ. ಒಂದೊಮ್ಮೆ ಯಾವುದೇ ದೊಡ್ಡ ಸಿನಿಮಾಗಳು ರಿಲೀಸ್​ ಆಗದೇ ಇದ್ದರೆ ಈ ಚಿತ್ರದ ಕಮಾಯಿ ಹೆಚ್ಚಲಿದೆ. ಇದಕ್ಕೆ ತಡೆ ನೀಡಬೇಕು ಎಂದು ಪರಭಾಷಿಗರು ಪ್ಲ್ಯಾನ್​ ರೂಪಿಸಿದಂತಿದೆ. ಈ ಕಾರಣಕ್ಕೆ ಕಾಲಿವುಡ್​ನಿಂದ ‘ಬೀಸ್ಟ್​’ ಚಿತ್ರವನ್ನು ಸ್ಪರ್ಧೆಗೆ ಇಳಿಸಲು ಪ್ಲ್ಯಾನ್​ ಮಾಡಿದ್ದಾರೆ ಎನ್ನಲಾಗುತ್ತಿದೆ. ಮಹೇಶ್​ ಬಾಬು ನಟನೆಯ ‘ಸರ್ಕಾರು ವಾರಿ ಪಾಟ’ ಚಿತ್ರ ಕೂಡ ಇದೇ ಸಂದರ್ಭದಲ್ಲಿ ಬಿಡುಗಡೆಯಾಗುವ ನಿರೀಕ್ಷೆ ಇದೆ.

ಈ ಮೊದಲು ಶಾರುಖ್​ ಖಾನ್​ ನಟನೆಯ ‘ಜೀರೋ’ ಚಿತ್ರ ‘ಕೆಜಿಎಫ್​’ ಎದುರು ಬಿಡುಗಡೆ ಆಗಿತ್ತು. ಯಶ್​ ಸಿನಿಮಾ ಅಬ್ಬರದ ಎದುರು ಶಾರುಖ್​ ಚಿತ್ರ ಮಕಾಡೆ ಮಲಗಿತ್ತು. ಈಗ ‘ಕೆಜಿಎಫ್​ 2’ ಜತೆ ಸ್ಪರ್ಧಿಸೋ ಸಿನಿಮಾಗಳಿಗೂ ಹೀಗೆಯೇ ಆಗಲಿದೆ ಎನ್ನುವ ಮಾತು ಅಭಿಮಾನಿಗಳ ವಲಯದಲ್ಲಿ ಕೇಳಿ ಬಂದಿದೆ.

ಇದನ್ನೂ ಓದಿ: Yash: ಯಶ್- ನರ್ತನ್ ಕಾಂಬಿನೇಷನ್​ನಲ್ಲಿ ಚಿತ್ರ ಬರೋದು ಯಾವಾಗ? ರಾಕಿಂಗ್ ಸ್ಟಾರ್ ಉತ್ತರಿಸಿದ್ದು ಹೀಗೆ

2022ರ ಬಹುನಿರೀಕ್ಷಿತ ಭಾರತೀಯ ಸಿನಿಮಾಗಳಲ್ಲಿ ಸ್ಥಾನ ಪಡೆದ ಕನ್ನಡದ ಏಕೈಕ ಚಿತ್ರ ‘ಕೆಜಿಎಫ್​ 2’ 

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ