AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮ ಬೆಂಬಲದ ಶಕ್ತಿಯೇ ನನಗೆ ದಾರಿ ಮಾಡಿಕೊಟ್ಟಿದೆ’; ಅಶ್ವಿನಿ ಪುನೀತ್​ ರಾಜ್​ಕುಮಾರ್ ಭಾವುಕ ಪತ್ರ  

ಪುನೀತ್ ನಿಧನದ ನಂತರದಲ್ಲಿ ಸರ್ಕಾರದಿಂದ, ಸೆಲೆಬ್ರಿಟಿಗಳಿಂದ ಹಾಗೂ ಅಭಿಮಾನಿಗಳಿಂದ ರಾಜ್​ಕುಮಾರ್ ಕುಟುಂಬಕ್ಕೆ ಸಾಕಷ್ಟು ಬೆಂಬಲ ಸಿಕ್ಕಿದೆ.  

‘ನಿಮ್ಮ ಬೆಂಬಲದ ಶಕ್ತಿಯೇ ನನಗೆ ದಾರಿ ಮಾಡಿಕೊಟ್ಟಿದೆ’; ಅಶ್ವಿನಿ ಪುನೀತ್​ ರಾಜ್​ಕುಮಾರ್ ಭಾವುಕ ಪತ್ರ  
ಅಶ್ವಿನಿ-ಪುನೀತ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Oct 29, 2022 | 2:39 PM

Share

ಪುನೀತ್ ರಾಜ್​ಕುಮಾರ್ (Puneeth Rajkumar) ಅವರು ನಿಧನ ಹೊಂದಿ ಇಂದಿಗೆ (ಅಕ್ಟೋಬರ್ 29) ಒಂದು ವರ್ಷ ಪೂರ್ಣಗೊಂಡಿದೆ. 365 ದಿನಗಳಲ್ಲಿ ಅಭಿಮಾನಿಗಳು ಹಾಗೂ ಕುಟುಂಬದವರು ಸಾಕಷ್ಟು ನೋವನ್ನು ಅನುಭವಿಸಿದ್ದಾರೆ. ಕಣ್ಣೀರಲ್ಲಿ ಕೈ ತೊಳೆದಿದ್ದಾರೆ. ಪುನೀತ್ ರಾಜ್​ಕುಮಾರ್ ಅವರು ಇಲ್ಲ ಎಂಬುದನ್ನು ಈಗಲೂ ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಪುನೀತ್ ನಿಧನದ ನಂತರದಲ್ಲಿ ಅಶ್ವಿನಿ ಅವರು ಮಾತನಾಡಿದ್ದು ತುಂಬಾನೇ ಕಡಿಮೆ. ಅವರು ಕೇಲವೇ ಕೆಲವು ಸಂದರ್ಭಗಳಲ್ಲಿ ಮೌನ ಮುರಿದಿದ್ದಾರೆ. ಈಗ ಮೊದಲ ವರ್ಷದ ಪುಣ್ಯತಿಥಿಯಂದು ಭಾವುಕರಾಗಿ ಅಶ್ವಿನಿ ಪತ್ರ ಬರೆದಿದ್ದಾರೆ. ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದ ಹೇಳಿದ್ದಾರೆ.

‘ನೆನಪಿನ ಸಾಗರದಲ್ಲಿ’ ಎಂಬ ಸಾಲುಗಳೊಂದಿಗೆ ಪತ್ರ ಆರಂಭಿಸಿದ್ದಾರೆ ಅಶ್ವಿನಿ. ‘ಅಪ್ಪು ಅವರು ನಮ್ಮ ನೆನಪುಗಳಲ್ಲಿ ಮಾತ್ರವಲ್ಲದೆ, ನಮ್ಮ ಆಲೋಚನೆಗಳಲ್ಲಿ, ನಾವು ಮಾಡುವ ಸತ್ಕಾರ್ಯಗಳಲ್ಲಿ, ನಮ್ಮ ನಡುವೆ ಸದಾ ಜೀವಂತವಾಗಿದ್ದಾರೆ. ಅವರ ಕನಸು ಮತ್ತು ಮೌಲ್ಯಗಳನ್ನು ಜೀವಂತವಾಗಿಡಲು ನೂರಾರು ಕುಟುಂಬ ಸದಸ್ಯರು, ಅವರ ಸಾವಿರಾರು ಸ್ನೇಹಿತರು ಹಾಗು ಕೋಟ್ಯಾಂತರ ಅಭಿಮಾನಿಗಳಿಂದ ನಾನು ಪಡೆದ ಬೆಂಬಲದ ಶಕ್ತಿಯೇ ನನಗೆ ದಾರಿ ಮಾಡಿಕೊಟ್ಟಿದೆ’ ಎಂದು ಅಶ್ವಿನಿ ಪುನೀತ್ ರಾಜ್​ಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ
Image
Puneeth Rajkumar: ಪುನೀತ್​ ರಾಜ್​ಕುಮಾರ್ ಇಲ್ಲದೇ ಕಳೆಯಿತು 11 ತಿಂಗಳು; ಸಮಾಧಿ ಬಳಿ ಕಣ್ಣೀರು ಹಾಕಿದ ಫ್ಯಾನ್ಸ್​
Image
ಹೊಸಪೇಟೆ ಪುನೀತ್ ಪುತ್ಥಳಿಗೆ ವಿನಯ್ ರಾಜ್​ಕುಮಾರ್ ಮಾಲಾರ್ಪಣೆ
Image
Kantara: ‘ಕಾಂತಾರ’ ಚಿತ್ರಕ್ಕೆ ಪುನೀತ್​ ಹೀರೋ ಆಗ್ಬೇಕಿತ್ತು; ಆ ಸ್ಥಾನಕ್ಕೆ ರಿಷಬ್ ಶೆಟ್ಟಿ ಬಂದಿದ್ದು ಹೇಗೆ? ಇಲ್ಲಿದೆ ಉತ್ತರ
Image
ಪುನೀತ್ ಜನ್ಮದಿನ ಇನ್ಮುಂದೆ ‘ಸ್ಫೂರ್ತಿ ದಿನ’; ಸಚಿವ ಸುನೀಲ್ ಕುಮಾರ್ ಮನವಿ ಪುರಸ್ಕರಿಸಿದ ಸಿಎಂ ಬೊಮ್ಮಾಯಿ

‘ಅಪ್ಪು ಅವರ ಮೇಲೆ ನಿಮ್ಮೆಲ್ಲರಿಗೆ ಇರುವ ಪ್ರೀತಿ ಮತ್ತು ಗೌರವದಿಂದ, ಸದಾ ಕಾಲ ಅವರನ್ನು ಜೀವಂತವಾಗಿರಿಸಿದ್ದಕ್ಕಾಗಿ ಎಲ್ಲರಿಗೂ ನನ್ನ ನಮನಗಳು’ ಎಂದು ಅಶ್ವಿನಿ ಪತ್ರವನ್ನು ಕೊನೆಗೊಳಿಸಿದ್ದಾರೆ. ಪುನೀತ್ ನಿಧನದ ನಂತರದಲ್ಲಿ ಸರ್ಕಾರದಿಂದ, ಸೆಲೆಬ್ರಿಟಿಗಳಿಂದ ಹಾಗೂ ಅಭಿಮಾನಿಗಳಿಂದ ರಾಜ್​ಕುಮಾರ್ ಕುಟುಂಬಕ್ಕೆ ಸಾಕಷ್ಟು ಬೆಂಬಲ ಸಿಕ್ಕಿದೆ.

ಇದನ್ನೂ ಓದಿ: Puneeth Rajkumar: ಪುನೀತ್​ ರಾಜ್​ಕುಮಾರ್​ ಅವರ ಕೊನೇ ಫೋಟೋ ತೋರಿಸಿ ಶೋಕಗೀತೆ ಹಾಡಿದ ಗುರುಕಿರಣ್​

ಪುನೀತ್ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ರಾಜ್ ಕುಟುಂಬದ ಸದಸ್ಯರು ಇಂದು ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ಸಮಾಧಿಗೆ ಹೋಗಿ ಪೂಜೆ ಮಾಡಿದ್ದಾರೆ. ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದಾರೆ. ಅವರೆಲ್ಲರಿಗೂ ಊಟದ ವ್ಯವಸ್ಥೆ ಮಾಡಲಾಗಿದೆ. ಅನೇಕರು ಅಪ್ಪುನ ನೆನೆದು ಕಣ್ಣೀರು ಹಾಕಿದ್ದಾರೆ.

Published On - 2:38 pm, Sat, 29 October 22

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ