AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆ ನೋವು ಹಾಗೆಯೇ ಇರುತ್ತದೆ; ‘ಜಾಕಿ’ ಭಾವನಾಗೆ ಮರೆಯಾಗುವುದಿಲ್ಲ ಆ ಘಟನೆ

ಭಾವನಾ ಅವರ ತಂದೆಯ ಹೆಸರು ಬಾಲಚಂದ್ರ. ಅವರು 2015ರಲ್ಲಿ ನಿಧನ ಹೊಂದಿದರು. ಆಗ ಅವರಿಗೆ 59 ವರ್ಷ ವಯಸ್ಸಾಗಿತ್ತು. ಬಾಲಚಂದ್ರ ಅವರಿಗೆ ಅನಾರೋಗ್ಯ ಕಾಡಿದ ಬಳಿಕ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ, ಯಾವುದೇ ಪ್ರಯೋಜನ ಆಗಿರಲಿಲ್ಲ.

‘ಆ ನೋವು ಹಾಗೆಯೇ ಇರುತ್ತದೆ; ‘ಜಾಕಿ’ ಭಾವನಾಗೆ ಮರೆಯಾಗುವುದಿಲ್ಲ ಆ ಘಟನೆ
ಭಾವನಾ
TV9 Web
| Edited By: |

Updated on: Sep 21, 2023 | 7:55 AM

Share

ನಟಿ ಭಾವನಾ ಅವರು ಕನ್ನಡ ಮಂದಿಗೆ ಚಿರಪರಿಚಿತರು. ಶಿವರಾಜ್​ಕುಮಾರ್ (Shivarajkumar), ಪುನೀತ್ ರಾಜ್​ಕುಮಾರ್ ಸೇರಿ ಅನೇಕ ಸ್ಟಾರ್ ಹೀರೋಗಳ ಜೊತೆ ಅವರು ತೆರೆ ಹಂಚಿಕೊಂಡಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದು, ಹಲವು ಗ್ಲಾಮರಸ್ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಮ್ಮ ತಂದೆಯ ನಿಧನದ ಬಗ್ಗೆ ಮಾತನಾಡಿದ್ದಾರೆ. ಅವರು ತಂದೆಯನ್ನು ಕಳೆದುಕೊಂಡು 8 ವರ್ಷ ಕಳೆದಿದೆ. ಆದರೆ, ಆ ನೋವು ಮಾತ್ರ ಹಾಗೆಯೇ ಇದೆ.

‘ನನ್ನ ತಂದೆಯ ಸಾವಿನ ನೋವು ಯಾವಾಗಲೂ ಹಾಗೆಯೇ ಇರುತ್ತದೆ. ಹೊರಗೆ ಎಷ್ಟು ಖುಷಿಯಾಗಿದ್ದರೂ ಒಳಗಿನ ನೋವು ಹಾಗೆಯೇ ಇದೆ. ಇಷ್ಟು ವರ್ಷ ಕಳೆದರೂ ಆ ದುಃಖದಿಂದ ಹೊರಬರಲು ಸಾಧ್ಯವಾಗಿಲ್ಲ. ಜೀವನ ಸಂಪೂರ್ಣವಾಗಿ ಬದಲಾಗಿದೆ. ಆದರೆ ನನ್ನ ತಂದೆ ಇಲ್ಲ ಎಂಬುದು ನನ್ನನ್ನು ಯಾವಾಗಲೂ ಕಾಡುತ್ತದೆ. ಈ ಕಾಡುವಿಕೆ ಕೆಲವೊಮ್ಮೆ ಹೆಚ್ಚಿರುತ್ತದೆ, ಕೆಲವೊಮ್ಮೆ ಕಡಿಮೆ. ಆದರೆ, ಆ ನೋವು ಹಾಗೆಯೇ ಇದೆ’ ಎಂದಿದ್ದಾರೆ ಭಾವನಾ.

ಭಾವನಾ ಅವರ ತಂದೆಯ ಹೆಸರು ಬಾಲಚಂದ್ರ. ಅವರು 2015ರಲ್ಲಿ ನಿಧನ ಹೊಂದಿದರು. ಆಗ ಅವರಿಗೆ 59 ವರ್ಷ ವಯಸ್ಸಾಗಿತ್ತು. ಬಾಲಚಂದ್ರ ಅವರಿಗೆ ಅನಾರೋಗ್ಯ ಕಾಡಿದ ಬಳಿಕ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ, ಯಾವುದೇ ಪ್ರಯೋಜನ ಆಗಿರಲಿಲ್ಲ. ತಂದೆಯ ಬಗ್ಗೆ ಅವರು ಯಾವಾಗಲೂ ಪ್ರೀತಿ ವ್ಯಕ್ತಪಡಿಸುತ್ತಾ ಇರುತ್ತಾರೆ. ಅವರು ಈ ಮಟ್ಟಕ್ಕೆ ಬೆಳೆಯಲು ತಂದೆ ಕಾರಣ ಎಂದು ಅವರು ಹಲವು ಬಾರಿ ಹೇಳಿಕೊಂಡಿದ್ದಿದೆ.

ಇದನ್ನೂ ಓದಿ: ಕ್ಯೂಟ್ ಅವತಾರದಲ್ಲಿ ಕಾಣಿಸಿಕೊಂಡ ನಟಿ ಭಾವನಾ ಮೆನನ್; ಇಲ್ಲಿದೆ ಫೋಟೋ ಗ್ಯಾಲರಿ

ಭಾವನಾ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು 2002ರಲ್ಲಿ. ಮಲಯಾಳಂ ಸಿನಿಮಾ ಮೂಲಕ ಅವರು ಬಣ್ಣದ ಬದುಕು ಆರಂಭಿಸಿದರು. ಆ ಬಳಿಕ ಅವರು ಬ್ಯಾಕ್​ ಟು ಬ್ಯಾಕ್ ಮಲಯಾಳಂ ಸಿನಿಮಾ ಮಾಡಿದರು. 2010ರಲ್ಲಿ ರಿಲೀಸ್ ಆದ ‘ಜಾಕಿ’ ಅವರ ನಟನೆಯ ಮೊದಲ ಕನ್ನಡ ಸಿನಿಮಾ. ಪುನೀತ್ ರಾಜ್​ಕುಮಾರ್​ಗೆ ಜೊತೆಯಾಗಿ ಅವರು ತೆರೆಹಂಚಿಕೊಂಡರು. ಅಲ್ಲಿಂದ ಅವರು ‘ಜಾಕಿ’ ಭಾವನಾ ಎಂದೇ ಫೇಮಸ್ ಆದರು. ನಂತರ ಅವರು ‘ರೊಮಿಯೋ’, ‘ಟೋಪಿವಾಲ’, ‘ಮೈತ್ರಿ’, ‘ಇನ್ಸ್​ಪೆಕ್ಟರ್ ವಿಕ್ರಮ್’ ಸೇರಿ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಸದ್ಯ ಅವರು ಕನ್ನಡ, ಮಲಯಾಳಂ, ತಮಿಳು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ