AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Devil Twitter Review: ‘ನಾವು ಗೆದ್ವಿ’; ‘ಡೆವಿಲ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಫ್ಯಾನ್ಸ್

ದರ್ಶನ್ ಅವರಿಗೆ ಈ ಗೆಲುವು ತುಂಬಾನೇ ಮುಖ್ಯವಾಗಿತ್ತು. ಅವರು ಜೈಲಿನಲ್ಲಿ ಇರುವಾಗ ಸಿನಿಮಾ ರಿಲೀಸ್ ಆಗಿದ್ದರಿಂದ ಪ್ರಚಾರ ದೊಡ್ಡ ಚಾಲೆಂಜ್ ಆಗಿತ್ತು. ಆದರೆ, ಅಭಿಮಾನಿಗಳು ಮುಂದೆ ನಿಂತು ಸಿನಿಮಾಗೆ ಪ್ರಚಾರ ಮಾಡಿದ್ದಾರೆ. ಈಗ ಚಿತ್ರಕ್ಕೆ ಪಾಸಿಟಿವ್ ವಿಮರ್ಶೆ ಸಿಕ್ಕಿರವುದು ಅವರ ಅಭಿಮಾನಿಗಳ ಖುಷಿ ಹೆಚ್ಚಿಸಿದೆ.

Devil Twitter Review: ‘ನಾವು ಗೆದ್ವಿ’; ‘ಡೆವಿಲ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಫ್ಯಾನ್ಸ್
ಡೆವಿಲ್ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on: Dec 11, 2025 | 9:50 AM

Share

ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಇಂದು (ಡಿಸೆಂಬರ್ 11) ರಿಲೀಸ್ ಆಗಿ ಅಬ್ಬರಿಸುತ್ತಿದೆ. ಏಕಪರದೆ ಚಿತ್ರಮಂದಿರಗಳಲ್ಲಿ ಚಿತ್ರವನ್ನು ಜನರು ಮುಗಿಬಿದ್ದು ವೀಕ್ಷಣೆ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಬಹುತೇಕ ಕಡೆಗಳಲ್ಲಿ ಮುಂಜಾನೆ 6.30ಕ್ಕೆ ಶೋ ಆಯೋಜನೆ ಮಾಡಲಾಗಿತ್ತು. ಮೊದಲ ಶೋ ನೋಡಿ ಬಂದ ಅಭಿಮಾನಿಗಳು ತಮ್ಮ ವಿಮರ್ಶೆ ತಿಳಿಸುತ್ತಿದ್ದಾರೆ. ಸಿನಿಮಾ ಹೇಗಿದೆ ಎಂಬುದನ್ನು ಟ್ವಿಟರ್ ಮೂಲಕ ಹಂಚಿಕೊಂಡಿದ್ದಾರೆ.

ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲಿನಲ್ಲಿ ಇದ್ದಾರೆ. ಇತ್ತ ಅವರ ‘ಡೆವಿಲ್’ ಸಿನಿಮಾ ರಿಲೀಸ್ ಆಗಿದೆ. ಮಾಸ್ ಡೈಲಾಗ್, ಟ್ವಿಸ್ಟ್​ಗಳನ್ನು ಒಳಗೊಂಡ ಕಥೆಗಳ ಮೂಲಕ ಫ್ಯಾನ್ಸ್​ಗೆ ಮಿಲನ ಪ್ರಕಾಶ್ ಖುಷಿ ನೀಡಿದ್ದಾರೆ. ಈ ಚಿತ್ರವನ್ನು ಫ್ಯಾನ್ಸ್ ಹೆಚ್ಚು ಖುಷಿಯಿಂದ ನೋಡುತ್ತಿದ್ದಾರೆ. ‘ನಾವು ಗೆದ್ವಿ’ ಎಂದು ಎಲ್ಲರೂ ಹಾಕಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಮರುಕಳಿಸಿದ ಇತಿಹಾಸ; ದರ್ಶನ್ ಇಲ್ಲದೆ ರಿಲೀಸ್ ಆಗಿತ್ತು ಸಾರಥಿ ಸಿನಿಮಾ

ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಅಭಿಮಾನಿಗಳ ಜೊತೆ ಫ್ಯಾಮಿಲಿ ಆಡಿಯನ್ಸ್​ಗೂ ಇಷ್ಟ ಆಗಿತ್ತು. ‘ಡೆವಿಲ್’ ಕೂಡ ಹಾಗೆಯೇ ಇದೆ ಎಂಬುದು ಅವರ ಅಭಿಮಾನಿಗಳ ಅಭಿಪ್ರಾಯ. ‘ಫ್ಯಾನ್ಸ್​ಗೂ ಜೈ, ಫ್ಯಾಮಿಲಿ ಆಡಿಯನ್ಸ್​​ಗೂ ಜೈ’ ಎಂದು ಫ್ಯಾನ್ಸ್ ಬರೆದುಕೊಂಡಿದ್ದಾರೆ. ದರ್ಶನ್ ಎಂಟ್ರಿ, ಅವರ ನಟನೆಯನ್ನು ಅಭಿಮಾನಿಗಳು ಕೊಂಡಾಡುತ್ತಿದ್ದಾರೆ. ಆರಂಭಿಕ ವಿಮರ್ಶೆ ನೋಡಿದರೆ ದರ್ಶನ್ ಅಭಿಮಾನಿಗಳಿಗೆ ಇದು ಹಬ್ಬದೂಟದ ರೀತಿ ಕಾಣಿಸುತ್ತಿದೆ.

ದರ್ಶನ್ ಅವರಿಗೆ ಈ ಗೆಲುವು ತುಂಬಾನೇ ಮುಖ್ಯವಾಗಿತ್ತು. ಅವರು ಜೈಲಿನಲ್ಲಿ ಇರುವಾಗ ಸಿನಿಮಾ ರಿಲೀಸ್ ಆಗಿದ್ದರಿಂದ ಪ್ರಚಾರ ದೊಡ್ಡ ಚಾಲೆಂಜ್ ಆಗಿತ್ತು. ಆದರೆ, ಅಭಿಮಾನಿಗಳು ಮುಂದೆ ನಿಂತು ಸಿನಿಮಾಗೆ ಪ್ರಚಾರ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ