AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ಗೆ ಬಂದ ದಿ ಗ್ರೇಟ್ ಖಲಿ; ‘ಕೆಂಡದ ಸೆರಗು’ ಸಿನಿಮಾದಲ್ಲಿ WWE ಫೈಟರ್

The Great Khali: ರಾಕಿ ಸೋಮ್ಲಿ ಚೊಚ್ಚಲ ನಿರ್ದೇಶನದಲ್ಲಿ ‘ಕೆಂಡದ ಸೆರಗು’ ಸಿನಿಮಾ ಮೂಡಿಬರುತ್ತಿದೆ. ಇತ್ತೀಚೆಗೆ ರಿಲೀಸ್ ಆದ ಟೀಸರ್ ಎಲ್ಲರ ಗಮನ ಸೆಳೆದಿದೆ.

ಸ್ಯಾಂಡಲ್​ವುಡ್​ಗೆ ಬಂದ ದಿ ಗ್ರೇಟ್ ಖಲಿ; ‘ಕೆಂಡದ ಸೆರಗು’ ಸಿನಿಮಾದಲ್ಲಿ WWE ಫೈಟರ್
ಖಲಿ
ರಾಜೇಶ್ ದುಗ್ಗುಮನೆ
|

Updated on: Mar 04, 2023 | 2:52 PM

Share

WWE ಫೈಟ್​ನ ಇಷ್ಟಪಡುವವರು ಸಾಕಷ್ಟು ಜನರಿದ್ದಾರೆ. WWE ಫೈಟರ್ ದಿ ಗ್ರೇಟ್ ಖಲಿ ಅನೇಕರಿಗೆ ಇಷ್ಟವಾಗುತ್ತಾರೆ. ಈಗ ಅವರು ಸ್ಯಾಂಡಲ್​ವುಡ್​ಗೆ ಎಂಟ್ರಿ ಕೊಡುತ್ತಿದ್ದಾರೆ. ಕುಸ್ತಿ ಕುರಿತ ಸಿನಿಮಾ ‘ಕೆಂಡದ ಸೆರಗು’ (Kendada Seragu) ಮೂಲಕ ಅವರು ಚಂದನವನದ ಮಂದಿಗೆ ಪರಿಚಯಗೊಳ್ಳುತ್ತಿದ್ದಾರೆ. ಈ ವಿಚಾರ ಕೇಳಿ ಅನೇಕರು ಖುಷಿಪಟ್ಟಿದ್ದಾರೆ. ಅವರ ಪಾತ್ರ ಯಾವ ರೀತಿಯಲ್ಲಿರಲಿದೆ ಅನ್ನೋದು ಸದ್ಯದ ಕುತೂಹಲ.

ರಾಕಿ ಸೋಮ್ಲಿ ಚೊಚ್ಚಲ ನಿರ್ದೇಶನದಲ್ಲಿ ‘ಕೆಂಡದ ಸೆರಗು’ ಸಿನಿಮಾ ಮೂಡಿಬರುತ್ತಿದೆ. ಇತ್ತೀಚೆಗೆ ರಿಲೀಸ್ ಆದ ಟೀಸರ್ ಎಲ್ಲರ ಗಮನ ಸೆಳೆದಿದೆ. ಭೂಮಿ ಶೆಟ್ಟಿ, ಮಾಲಾಶ್ರೀ ಮೊದಲಾದವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ರಾಕಿ ಸೋಮ್ಲಿ ಅವರೇ ಬರೆದ ‘ಕೆಂಡದ ಸೆರಗು’ ಕಾದಂಬರಿ ಆಧರಿಸಿ ಈ ಸಿನಿಮಾ ಸಿದ್ಧಗೊಳ್ಳುತ್ತಿದೆ. ಮಹಿಳಾ ಪ್ರಧಾನ ಕಥಾಹಂದರ ಒಳಗೊಂಡ ಈ ಚಿತ್ರ ಕುಸ್ತಿ ಪಟುವಿನ ಕಥೆಯನ್ನು ಹೇಳಲಾಗುತ್ತಿದೆ. ರಿಲೀಸ್ ಆದ ಟೀಸರ್​​ನಲ್ಲಿ ಉತ್ತರ ಕರ್ನಾಟಕ ಭಾಷೆ ಹೆಚ್ಚು ಗಮನ ಸೆಳೆದಿದೆ.

ರಾಕಿ ಸೋಮ್ಲಿ ಅವರು ಖಲಿ ಅವರನ್ನು ಭೇಟಿ ಮಾಡಿ ಕಥೆ ಹಾಗೂ ಪಾತ್ರದ ಬಗ್ಗೆ ವಿವರಿಸಿದ್ದಾರೆ. ಸಿನಿಮಾದ ಕಥೆ ಹಾಗೂ ಪಾತ್ರ ಇಷ್ಟವಾಗಿದ್ದು, ಚಿತ್ರದಲ್ಲಿ ನಟಿಸೋಕೆ ಅವರು ಒಪ್ಪಿದ್ದಾರೆ. ಖಲಿ ಜೊತೆಗಿನ ಫೋಟೋ ಶೇರ್ ಮಾಡಿಕೊಂಡಿರುವ ರಾಕಿ ಸೋಮ್ಲಿ ಚಿತ್ರತಂಡಕ್ಕೆ ಖಲಿ ಎಂಟ್ರಿ ನೀಡುತ್ತಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಸದ್ಯದಲ್ಲೇ ಖಲಿ ಭಾಗದ ಚಿತ್ರೀಕರಣ ಆರಂಭವಾಗಲಿದೆ.

ಇದನ್ನೂ ಓದಿ: Vinod Prabhakar: ಮಾಡರ್ನ್​ ಮಹಾಲಕ್ಷ್ಮಿಗೆ ಮಾಲಾಶ್ರೀ ಸಾತ್​; ‘ಲಂಕಾಸುರ’ ಚಿತ್ರದ ಹೊಸ ಹಾಡು ರಿಲೀಸ್​ ಮಾಡಿದ ಸ್ಟಾರ್​ ನಟಿ

ಮಾಲಾಶ್ರೀ ಅವರು ದೊಡ್ಡ ಪರದೆಮೇಲೆ ಇತ್ತೀಚೆಗೆ ಅಷ್ಟಾಗಿ ಕಾಣಿಸಿಕೊಳ್ಳುತ್ತಿಲ್ಲ. ಈಗ ಅವರು ‘ಕೆಂಡದ ಸೆರಗು’ ಚಿತ್ರದಲ್ಲಿ ಪೊಲೀಸ್ ಕಮಿಷನರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಭೂಮಿ ಶೆಟ್ಟಿ ಕುಸ್ತಿ ಪಟುವಾಗಿ ಬಣ್ಣ ಹಚ್ಚಿದ್ದಾರೆ. ಶ್ರೀ ಮುತ್ತು ಟಾಕೀಸ್ ಮತ್ತು ಎಸ್.ಕೆ. ಪ್ರೊಡಕ್ಷನ್ಸ್ ಬ್ಯಾನರ್ ನಡಿ ಕೆ. ಕೊಟ್ರೇಶ್ ಗೌಡ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಯಶ್ ಶೆಟ್ಟಿ, ವರ್ಧನ್ ತೀರ್ಥಹಳ್ಳಿ, ಪ್ರತಿಮಾ. ಹರೀಶ್ ಅರಸು, ಬಸು ಹಿರೇಮಠ್, ಶೋಭಿತ, ಸಿಂಧು ಲೋಕನಾಥ್ ಚಿತ್ರದ ತಾರಾಬಳಗದಲ್ಲಿದ್ದಾರೆ. ವಿಪಿನ್ ವಿ ರಾಜ್ ಛಾಯಾಗ್ರಹಣ, ವೀರೇಶ್ ಕಂಬ್ಲಿ ಸಂಗೀತ ನಿರ್ದೇಶನ, ಶ್ರೀಕಾಂತ್ ಸಂಕಲನ ಚಿತ್ರಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್