‘ಪಯಣ ಶುರುವಾಗಿದೆ’; ‘ಟಾಕ್ಸಿಕ್’ ಸಿನಿಮಾ ಶೂಟಿಂಗ್ ಬಗ್ಗೆ ಅಪ್​ಡೇಟ್ ಕೊಟ್ಟ ಯಶ್

ಯಶ್ ಅವರು ‘ಟಾಕ್ಸಿಕ್’ ಸಿನಿಮಾ ಶೂಟಿಂಗ್ ಯಾವಾಗ ಆರಂಭಿಸಲಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿತ್ತು. ಕೊನೆಗೂ ಇದಕ್ಕೆ ಉತ್ತರ ಸಿಕ್ಕಿದೆ. ಇಂದಿನಿಂದ (ಆಗಸ್ಟ್ 8) ಯಶ್ ಅವರು ‘ಟಾಕ್ಸಿಕ್’ ಸಿನಿಮಾದ ಶೂಟಿಂಗ್ ಆರಂಭಿಸುತ್ತಿದ್ದಾರೆ.

‘ಪಯಣ ಶುರುವಾಗಿದೆ’; ‘ಟಾಕ್ಸಿಕ್’ ಸಿನಿಮಾ ಶೂಟಿಂಗ್ ಬಗ್ಗೆ ಅಪ್​ಡೇಟ್ ಕೊಟ್ಟ ಯಶ್
ಯಶ್-ವೆಂಕಟ್
Follow us
| Updated By: Digi Tech Desk

Updated on:Aug 08, 2024 | 11:30 AM

‘ಟಾಕ್ಸಿಕ್’ ಸಿನಿಮಾ ಶೂಟಿಂಗ್ ಬಗ್ಗೆ ಯಶ್ ಅವರು ಇಂದು (ಆಗಸ್ಟ್ 8) ಬೆಳ್ಳಂಬೆಳಿಗ್ಗೆಯೇ ಅಪ್​ಡೇಟ್ ಕೊಟ್ಟಿದ್ದಾರೆ. ‘ಪಯಣ ಶುರುವಾಗಿದೆ’ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಈ ಮೂಲಕ ‘ಟಾಕ್ಸಿಕ್’ ಸಿನಿಮಾದ ಶೂಟ್ ಇಂದಿನಿಂದ ಆರಂಭ ಆಗಿದೆ ಎಂಬುದನ್ನು ಅಧಿಕೃತ ಮಾಡಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಸಖತ್ ಥ್ರಿಲ್ ಆಗಿದ್ದಾರೆ. ಅಂದುಕೊಂಡ ದಿನಾಂಕದಂದು ಸಿನಿಮಾ ರಿಲೀಸ್ ಆಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

‘ಟಾಕ್ಸಿಕ್’ ಚಿತ್ರವನ್ನು ‘ಕೆವಿಎನ್ ಪ್ರೊಡಕ್ಷನ್ಸ್’ ಮೂಲಕ ನಿರ್ಮಾಣ ಮಾಡಲಾಗುತ್ತಿದೆ. ವೆಂಕಟ್ ಕೆ. ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ವೆಂಕಟ್ ಜೊತೆ ಇರೋ ಫೋಟೋನ ಯಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಪೋಸ್ಟ್​ಗೆ ಅರ್ಧಗಂಟೆಯಲ್ಲಿ ಎರಡೂವರೆ ಲಕ್ಷಕ್ಕೂ ಅಧಿಕ ಲೈಕ್ಸ್ ಸಿಕ್ಕಿದೆ.

ಯಶ್ ಅವರು ಇತ್ತೀಚೆಗಷ್ಟೇ ಧರ್ಮಸ್ಥಳ, ಸುರ್ಯದಲ್ಲಿರುವ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಅಲ್ಲಿ ದೇವರ ದರ್ಶನ ಪಡೆದಿದ್ದರು. ಈ ವೇಳೆ ಅವರ ಪತ್ನಿ ರಾಧಿಕಾ ಪಂಡಿತ್ ಹಾಗೂ ನಿರ್ಮಾಪಕ ವೆಂಕಟ್ ಕೂಡ ಇದ್ದರು. ಈ ಬೆನ್ನಲ್ಲೆ ಇಂದಿನಿಂದ (ಆಗಸ್ಟ್ 8) ಬೆಂಗಳೂರಿನ ಹೊರವಲಯದಲ್ಲಿ ಶೂಟಿಂಗ್ ಆರಂಭ ಆಗಿದೆ.

View this post on Instagram

A post shared by Yash (@thenameisyash)

ಆಗಸ್ಟ್ 8ರಂದು ಶೂಟಿಂಗ್ ಆರಂಭಿಸುವುದಕ್ಕೂ ಒಂದು ಕರಣ ಇದೆ. ಎಂಟನ್ನು ಯಶ್ ಅವರು ಲಕ್ಕಿ ಎಂದು ಪರಿಗಣಿಸುತ್ತಾರೆ. ಅವರ ಹುಟ್ಟಿದ್ದು ಕೂಡ ಎಂಟಕ್ಕೆ (ಜನವರಿ 8). ಇಂದಿನ ದಿನಾಂಕದಲ್ಲಿ ಎಲ್ಲವೂ ಎಂಟೇ ಇದೆ. 8-8-2024 (2+0+2+4=8). ಈ ಕಾರಣಕ್ಕೆ ಆಗಸ್ಟ್ 8ರಿಂದ ಶೂಟಿಂಗ್ ಆರಂಭಿಸಲಾಗಿದೆ ಎಂದು ವರಯಲಾಗಿದೆ.

ಇದನ್ನೂ ಓದಿ: ಲಕ್ಕಿ ನಂಬರ್ ಡೇಟ್​ನಿಂದ ‘ಟಾಕ್ಸಿಕ್’ ಸಿನಿಮಾ ಶೂಟಿಂಗ್ ಆರಂಭಿಸಲಿದ್ದಾರೆ ಯಶ್

ಮಲಯಾಳಂನ ಖ್ಯಾತ ನಿರ್ದೇಶಕಿ ಗೀತು ಮೋಹನ್​ದಾಸ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾದ ಪಾತ್ರವರ್ಗದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ರಿವೀಲ್ ಆಗಬೇಕಿದೆ. ಇದು ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು, ದೊಡ್ಡ ಬಜೆಟ್​ನಲ್ಲಿ ಮೂಡಿ ಬರುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:02 am, Thu, 8 August 24

ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ