AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪಯಣ ಶುರುವಾಗಿದೆ’; ‘ಟಾಕ್ಸಿಕ್’ ಸಿನಿಮಾ ಶೂಟಿಂಗ್ ಬಗ್ಗೆ ಅಪ್​ಡೇಟ್ ಕೊಟ್ಟ ಯಶ್

ಯಶ್ ಅವರು ‘ಟಾಕ್ಸಿಕ್’ ಸಿನಿಮಾ ಶೂಟಿಂಗ್ ಯಾವಾಗ ಆರಂಭಿಸಲಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿತ್ತು. ಕೊನೆಗೂ ಇದಕ್ಕೆ ಉತ್ತರ ಸಿಕ್ಕಿದೆ. ಇಂದಿನಿಂದ (ಆಗಸ್ಟ್ 8) ಯಶ್ ಅವರು ‘ಟಾಕ್ಸಿಕ್’ ಸಿನಿಮಾದ ಶೂಟಿಂಗ್ ಆರಂಭಿಸುತ್ತಿದ್ದಾರೆ.

‘ಪಯಣ ಶುರುವಾಗಿದೆ’; ‘ಟಾಕ್ಸಿಕ್’ ಸಿನಿಮಾ ಶೂಟಿಂಗ್ ಬಗ್ಗೆ ಅಪ್​ಡೇಟ್ ಕೊಟ್ಟ ಯಶ್
ಯಶ್-ವೆಂಕಟ್
ರಾಜೇಶ್ ದುಗ್ಗುಮನೆ
| Edited By: |

Updated on:Aug 08, 2024 | 11:30 AM

Share

‘ಟಾಕ್ಸಿಕ್’ ಸಿನಿಮಾ ಶೂಟಿಂಗ್ ಬಗ್ಗೆ ಯಶ್ ಅವರು ಇಂದು (ಆಗಸ್ಟ್ 8) ಬೆಳ್ಳಂಬೆಳಿಗ್ಗೆಯೇ ಅಪ್​ಡೇಟ್ ಕೊಟ್ಟಿದ್ದಾರೆ. ‘ಪಯಣ ಶುರುವಾಗಿದೆ’ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಈ ಮೂಲಕ ‘ಟಾಕ್ಸಿಕ್’ ಸಿನಿಮಾದ ಶೂಟ್ ಇಂದಿನಿಂದ ಆರಂಭ ಆಗಿದೆ ಎಂಬುದನ್ನು ಅಧಿಕೃತ ಮಾಡಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಸಖತ್ ಥ್ರಿಲ್ ಆಗಿದ್ದಾರೆ. ಅಂದುಕೊಂಡ ದಿನಾಂಕದಂದು ಸಿನಿಮಾ ರಿಲೀಸ್ ಆಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

‘ಟಾಕ್ಸಿಕ್’ ಚಿತ್ರವನ್ನು ‘ಕೆವಿಎನ್ ಪ್ರೊಡಕ್ಷನ್ಸ್’ ಮೂಲಕ ನಿರ್ಮಾಣ ಮಾಡಲಾಗುತ್ತಿದೆ. ವೆಂಕಟ್ ಕೆ. ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ವೆಂಕಟ್ ಜೊತೆ ಇರೋ ಫೋಟೋನ ಯಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಪೋಸ್ಟ್​ಗೆ ಅರ್ಧಗಂಟೆಯಲ್ಲಿ ಎರಡೂವರೆ ಲಕ್ಷಕ್ಕೂ ಅಧಿಕ ಲೈಕ್ಸ್ ಸಿಕ್ಕಿದೆ.

ಯಶ್ ಅವರು ಇತ್ತೀಚೆಗಷ್ಟೇ ಧರ್ಮಸ್ಥಳ, ಸುರ್ಯದಲ್ಲಿರುವ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಅಲ್ಲಿ ದೇವರ ದರ್ಶನ ಪಡೆದಿದ್ದರು. ಈ ವೇಳೆ ಅವರ ಪತ್ನಿ ರಾಧಿಕಾ ಪಂಡಿತ್ ಹಾಗೂ ನಿರ್ಮಾಪಕ ವೆಂಕಟ್ ಕೂಡ ಇದ್ದರು. ಈ ಬೆನ್ನಲ್ಲೆ ಇಂದಿನಿಂದ (ಆಗಸ್ಟ್ 8) ಬೆಂಗಳೂರಿನ ಹೊರವಲಯದಲ್ಲಿ ಶೂಟಿಂಗ್ ಆರಂಭ ಆಗಿದೆ.

View this post on Instagram

A post shared by Yash (@thenameisyash)

ಆಗಸ್ಟ್ 8ರಂದು ಶೂಟಿಂಗ್ ಆರಂಭಿಸುವುದಕ್ಕೂ ಒಂದು ಕರಣ ಇದೆ. ಎಂಟನ್ನು ಯಶ್ ಅವರು ಲಕ್ಕಿ ಎಂದು ಪರಿಗಣಿಸುತ್ತಾರೆ. ಅವರ ಹುಟ್ಟಿದ್ದು ಕೂಡ ಎಂಟಕ್ಕೆ (ಜನವರಿ 8). ಇಂದಿನ ದಿನಾಂಕದಲ್ಲಿ ಎಲ್ಲವೂ ಎಂಟೇ ಇದೆ. 8-8-2024 (2+0+2+4=8). ಈ ಕಾರಣಕ್ಕೆ ಆಗಸ್ಟ್ 8ರಿಂದ ಶೂಟಿಂಗ್ ಆರಂಭಿಸಲಾಗಿದೆ ಎಂದು ವರಯಲಾಗಿದೆ.

ಇದನ್ನೂ ಓದಿ: ಲಕ್ಕಿ ನಂಬರ್ ಡೇಟ್​ನಿಂದ ‘ಟಾಕ್ಸಿಕ್’ ಸಿನಿಮಾ ಶೂಟಿಂಗ್ ಆರಂಭಿಸಲಿದ್ದಾರೆ ಯಶ್

ಮಲಯಾಳಂನ ಖ್ಯಾತ ನಿರ್ದೇಶಕಿ ಗೀತು ಮೋಹನ್​ದಾಸ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾದ ಪಾತ್ರವರ್ಗದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ರಿವೀಲ್ ಆಗಬೇಕಿದೆ. ಇದು ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು, ದೊಡ್ಡ ಬಜೆಟ್​ನಲ್ಲಿ ಮೂಡಿ ಬರುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:02 am, Thu, 8 August 24

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ